• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? – ಡಿ.ಕೆ. ಶಿವಕುಮಾರ್

Any Mind by Any Mind
May 13, 2021
in ಕರ್ನಾಟಕ
0
ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? – ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ADVERTISEMENT

‘ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ ವರದಿ ಕೊಟ್ಟಿದೆ. ಇದಕ್ಕೆ ಸರ್ಕಾರದ ಯಾರು ಹೊಣೆಗಾರರು ಎಂದು ನೀವೇ ತೀರ್ಮಾನಿಸಿ. ಈ ಸಾವುಗಳಿಗೆ ಸರ್ಕಾರ ನೈತಿಕ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.

ಇನ್ನು ಮುಖ್ಯಮಂತ್ರಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಈಗ ಸುಮ್ಮನಾಗಿದ್ದಾರೆ. ಕೇಂದ್ರದಿಂದ ಎಷ್ಟು ಪ್ರಮಾಣದಲ್ಲಿ ಲಸಿಕೆ ಬರುತ್ತಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ? ಲಸಿಕೆ ವಿತರಣೆ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು. ರಾಜ್ಯ ಸರ್ಕಾರ ಯಾಕೆ ಸುಮ್ಮನಿದೆಯೋ ಗೊತ್ತಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರನ್ನು ದೇವರೇ ಕಾಪಾಡಬೇಕು. ಇವರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? ಜನರಿಗೆ ನೆರವಾಗಿದ್ದಾರಾ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ‌.

ಲಸಿಕೆ ಉಚಿತವಾಗಿ ನೀಡುತ್ತೇವೆ ಎಂದರು. 18-44 ರ ವಯೋಮಾನದವರಿಗೆ ಲಸಿಕೆ ಅಂತಾ ಮೇ 1ರಂದು ಉದ್ಘಾಟನೆಯನ್ನೂ ಮಾಡಿದರು. ಇವತ್ತು ಲಸಿಕೆ ಕೊಡಲು ಆಗಲ್ಲ ಅಂತಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಡಬಲ್ ಇಂಜಿನ್ ಸರ್ಕಾರ ಬಹಳ ಚೆನ್ನಾಗಿ ಆಡಳಿತ ಮಾಡಲಿವೆ ಎಂದಿದ್ದರು. ಆದರೆ ಈ ಡಬಲ್ ಇಂಜಿನ್ ಗಳು ನಿಂತು ಹೋಗಿವೆ. ಆಕ್ಸಿಜನ್ ಪೂರೈಸುವಂತೆ ಆದೇಶಿಸಿ ಹೈಕೋರ್ಟ್ ರಾಜ್ಯದ ಜನರಿಗೆ ನ್ಯಾಯ ಒದಗಿಸಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಸಿಜನ್ ಕಳುಹಿಸಿದೆ ಎಂದು ಇವರು ಶಹಬ್ಬಾಶ್ ಗಿರಿ ತೆಗೆದುಕೊಳ್ಳುತ್ತಿದ್ದಾರೆ. ಅವರು ಯಾರಿಗಾದರೂ ಶಹಬ್ಬಾಶ್ ಗಿರಿ ಕೊಡಲಿ, ಒಟ್ಟಾರೆ ಜನರ ಪ್ರಾಣ ಉಳಿಸಿದರೆ ಸಾಕು ಎಂದು ಹೇಳಿದ್ದಾರೆ.

45 ವರ್ಷ ಮೇಲ್ಪಟ್ಟವರಲ್ಲಿ ಅನೇಕರಿಗೆ ಇನ್ನು ಮೊದಲ ಲಸಿಕೆ ಕೊಟ್ಟಿಲ್ಲ. ಎರಡನೇ ಡೋಸ್ ಕೂಡ ಕೊಡಬೇಕು. ಈ ವಿಚಾರದಲ್ಲಿ ಸರ್ಕಾರದ ಬಳಿ ಪರಿಣಾಮಕಾರಿ ಯೋಜನೆ, ಸಿದ್ಧತೆ ಇಲ್ಲ. ಇದನ್ನು ನಿಭಾಯಿಸಲು ಇವರಿಗೆ ಆಗುತ್ತಿಲ್ಲ. ಇನ್ನು ರೈತರ ಪರಿಸ್ಥಿತಿ ದೇವರಿಗೇ ಪ್ರೀತಿ. ರಸಗೊಬ್ಬರ ಬೆಲೆ ಕಡಿಮೆಯಾಗಲಿಲ್ಲ ಎಂದು ಅವರು ಹೇಳಿದ್ದಾರೆ.
ಲಾಕ್ ಡೌನ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 10 ಸಾವಿರ ರುಪಾಯಿ ನೆರವು ನೀಡಬೇಕು ಎಂಬುದು ನಮ್ಮ ಆಗ್ರಹ. ಗೊಬ್ಬರದ ಬೆಲೆ ಕಡಿಮೆ ಮಾಡಬೇಕು. ತರಕಾರಿ, ಹೂ ಬೆಳೆದು, ನಷ್ಟ ಆದವರಿಗೆ ಪರಿಹಾರ ಕೊಡಬೇಕು. ಸಾಂಪ್ರದಾಯಿಕ ವೃತ್ತಿ ಆಧರಿಸಿದವರಿಗೆ, ಜಿಮ್, ಸಿನಿಮಾ ತಂತ್ರಜ್ಞರಿಗೆ ನೆರವು ಸಿಗಬೇಕು. ನಿಮ್ಮಿಂದ ಇದನ್ನು ನಿಭಾಯಿಸಲು ಆಗುತ್ತಿಲ್ಲ. ಕೋವಿಡ್ ಪ್ರಕರಣದ ಸಂಖ್ಯೆ ಕಡಿಮೆ ಮಾಡಲು ಪರೀಕ್ಷೆ ನಡೆಸುವುದನ್ನೇ ಕಡಿಮೆ ಮಾಡಿದ್ದೀರಿ ಎಂದಿದ್ದಾರೆ.

ಸರ್ಕಾರ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಬಡ್ಡಿ ಮನ್ನಾ ಮಾಡಬೇಕು, ಸಾಲದ ಕಂತು ಕಟ್ಟಲು ಕಾಲಾವಕಾಶ ನೀಡಬೇಕು. ಕೇಂದ್ರ ಸರ್ಕಾರವೇ ಲಸಿಕೆ ನೀಡಬೇಕು ಎಂದು ಕೇಳಬೇಕು. ರಾಜ್ಯದ ಹಣವನ್ನೇಕೆ ಇದಕ್ಕೆ ಬಳಸಬೇಕು? ಕೇಂದ್ರ ಸರಕಾರವೇ ಜವಾಬ್ದಾರಿ ಹೊರುವುದು ಜಗತ್ತಿನಾದ್ಯಂತ ಇರುವ ನೀತಿ. ಆದರೆ ಇಲ್ಲಿ ಅದು ಉಲ್ಟಾ ಆಗಿದೆ. ಸೋಂಕು ಹೆಚ್ಚಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಕಾರಣ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ‌. 

Previous Post

ರಸಗೊಬ್ಬರ ಬೆಲೆ ಏರಿಕೆ: ರೈತರಿಗೆ ಕರೋನಾ ಗಾಯದ ಮೇಲೆ ಬರೆ

Next Post

ನಿಮ್ಮನ್ನು ಆರಿಸಿದ್ದಕ್ಕೆ ನಾವು ನೇಣು ಹಾಕಿಕೊಳ್ಳಬೇಕೆ?

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ನಿಮ್ಮನ್ನು ಆರಿಸಿದ್ದಕ್ಕೆ ನಾವು ನೇಣು ಹಾಕಿಕೊಳ್ಳಬೇಕೆ?

ನಿಮ್ಮನ್ನು ಆರಿಸಿದ್ದಕ್ಕೆ ನಾವು ನೇಣು ಹಾಕಿಕೊಳ್ಳಬೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada