• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?

ಪ್ರತಿಧ್ವನಿ by ಪ್ರತಿಧ್ವನಿ
August 6, 2026
in Top Story, ಕರ್ನಾಟಕ, ರಾಜಕೀಯ
0
ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?
Share on WhatsAppShare on FacebookShare on Telegram

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿವೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಿವಾಸದಲ್ಲಿ ನಿನ್ನೆ ತಡರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಸಭಾಪತಿ ಸ್ಥಾನ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ.

ADVERTISEMENT
Chikkaballapur ಉಸ್ತುವಾರಿ ಸಚಿವನಾದ ಬಳಿಕ Byrathi Suresh ಹೇಳಿದ್ದೇನು..? #pratidhvani

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ನಿಲುವಿನಲ್ಲಿ ಇದ್ದ ಬಸವರಾಜ್‌ ಹೊರಟ್ಟಿ ಅವರೊಂದಿಗೆ ಮುಖ್ಯಮಂತ್ರಿ ಸಂಧಾನ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಚುನಾವಣೆ, ಮುಂಬರುವ ಅಧಿವೇಶನದ ಕಾರ್ಯತಂತ್ರ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.

 ಸಭೆಯಲ್ಲಿ ಕೆಲವು ನಾಯಕರು ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಲ್ಲೇ ಮುಂದುವರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಜಮೀರ್ ಅಹ್ಮದ್ ಖಾನ್, ಯು.ಟಿ. ಖಾದರ್ ಹಾಗೂ ಎನ್.ಎ. ಹ್ಯಾರಿಸ್ ಅವರು ಹೊರಟ್ಟಿಯನ್ನು ಮುಂದುವರಿಸುವಂತೆ ಒತ್ತಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಪಕ್ಷದ ವರಿಷ್ಠರ ನಿರ್ಧಾರವನ್ನು ಬದಲಾಯಿಸಲು ಒಪ್ಪದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಸಹಕರಿಸುವಂತೆ ಹೊರಟ್ಟಿ ಅವರಿಗೆ ಮನವಿ ಮಾಡಿ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಸದ್ಯದ ಮಾಹಿತಿಯಂತೆ, ಆಗಸ್ಟ್ 14ರಂದು ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಉಪಸಭಾಪತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನದಿಂದ ನಿರ್ಗಮಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯಿಂದ ವಿಧಾನ ಪರಿಷತ್‌ನಲ್ಲಿ ಹೊಸ ನಾಯಕತ್ವಕ್ಕೆ ದಾರಿ ತೆರೆಯುವ ಸಾಧ್ಯತೆ ಇದ್ದು, ಮುಂದಿನ ಅಧಿವೇಶನಕ್ಕೂ ಮುನ್ನ ರಾಜಕೀಯ ವಲಯದಲ್ಲಿ ಇನ್ನಷ್ಟು ಚಟುವಟಿಕೆಗಳು ನಡೆಯುವ ನಿರೀಕ್ಷೆಯಿದೆ.

Balakrishna ಮಾತಿಗೆ DK Shivakumar ರಿಯಾಕ್ಷನ್ ನೋಡಿ..! | Ramanagara karaga Utsava | pratidhvani

ಇನ್ನು ನಿನ್ನೆಯ ಮಹತ್ವದ ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಯು.ಟಿ. ಖಾದರ್, ಹೆಚ್.ಸಿ. ಬಾಲಕೃಷ್ಣ, ಚಲುವರಾಯಸ್ವಾಮಿ, ಜಮೀರ್ ಅಹ್ಮದ್ ಖಾನ್, ಶಾಸಕರಾದ ಕುಣಿಗಲ್ ರಂಗನಾಥ್, ಶರತ್ ಬಚ್ಚೇಗೌಡ, ಕದಲೂರು ಉದಯ್, ಎನ್.ಎ. ಹ್ಯಾರಿಸ್ ಹಾಗೂ ವಿಧಾನ ಪರಿಷತ್ ಸದಸ್ಯ ವಿನಯ್ ಕಾರ್ತಿಕ್ ಭಾಗವಹಿಸಿದ್ದರು.

Tags: Basavaraj HorattiBJPcongressDK ShivakumarKarnatakaPolitics
Previous Post

ರೇಣುಕಾಸ್ವಾಮಿ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ಕೋರ್ಟ್‌ಗೆ ಪ್ರದೋಷ್ ಹೊಸ ಅರ್ಜಿ..ದರ್ಶನ್‌ಗೆ ಸಂಕಷ್ಟ?

Next Post

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

Related Posts

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ
Top Story

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

by ಪ್ರತಿಧ್ವನಿ
August 6, 2026
0

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರಿಯ ವಿಶ್ವವಿದ್ಯಾಲಯ ಆವರಣದಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳ ಅಟ್ಟಹಾಸ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡಿದ ದುಷ್ಕರ್ಮಿಗಳ...

Read moreDetails
ರೇಣುಕಾಸ್ವಾಮಿ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ಕೋರ್ಟ್‌ಗೆ ಪ್ರದೋಷ್ ಹೊಸ ಅರ್ಜಿ..ದರ್ಶನ್‌ಗೆ ಸಂಕಷ್ಟ?

ರೇಣುಕಾಸ್ವಾಮಿ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ಕೋರ್ಟ್‌ಗೆ ಪ್ರದೋಷ್ ಹೊಸ ಅರ್ಜಿ..ದರ್ಶನ್‌ಗೆ ಸಂಕಷ್ಟ?

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

August 6, 2026
‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

August 6, 2026
Next Post
ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada