• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಲೋಕಸಭೆಗೆ ಅಸ್ತ್ರ ಆಯಿತೇ ಕಾವೇರಿದ ಹೋರಾಟ..? ಕನ್ನಡಿಗರಿಗೆ ಲಾಭ ತರುತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
September 26, 2023
in Top Story, ಕರ್ನಾಟಕ
0
ಲೋಕಸಭೆಗೆ ಅಸ್ತ್ರ ಆಯಿತೇ ಕಾವೇರಿದ ಹೋರಾಟ..? ಕನ್ನಡಿಗರಿಗೆ ಲಾಭ ತರುತ್ತಾ..?
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಕಾವೇರಿ ಹೋರಾಟ ರಂಗೇರಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಕೋರ್ಟ್​ ಆದೇಶ ನೆಪದಲ್ಲಿ ತಮಿಳುನಾಡಿಗೆ ಕನ್ನಂಬಾಡಿ ಕಟ್ಟೆ (KRS)ನಿಂದ ತಮಿಳುನಾಡಿಗೆ ನೀರು ಹರಿಸುತ್ತಲೇ ಇದೆ. ಇದು ಬಿಜೆಪಿ ಹಾಗು ಜೆಡಿಎಸ್​ ವಾಗ್ಬಾಣಕ್ಕೂ ಆಹಾರ ಆಗಿದೆ. I.N.D.I.A ಒಕ್ಕೂಟದಲ್ಲಿ ಕಾಂಗ್ರೆಸ್​ ಜೊತೆಗೆ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಕೂಡ ಸೇರ್ಪಡೆ ಆಗಿರುವ ಕಾರಣ, ಡಿಎಂಕೆ ಪಕ್ಷವನ್ನು ಓಲೈಸಿಕೊಳ್ಳಲು ಕಾಂಗ್ರೆಸ್​ ಪಕ್ಷ ಕಾವೇರಿ ನೀರನ್ನು ಬಳಸಿಕೊಳ್ತಿದೆ ಎನ್ನುವ ಆರೋಪ ರಾಜಕೀಯ ಪಕ್ಷದಿಂದ ಅಷ್ಟೇ ಅಲ್ಲದೆ ಹೋರಾಟ ನಿರತ ರೈತರಿಂದಲೂ ಅದೇ ಮಾತು ಕೇಳಿ ಬರುತ್ತಿದೆ. ಆದರೆ CWRC ಹಾಗು CWMA ಜೊತೆಗೆ ಸುಪ್ರೀಂಕೋರ್ಟ್​ ಆದೇಶ ಕಾಂಗ್ರೆಸ್​​ ಸರ್ಕಾರದ ಕೈ ಕಟ್ಟಿ ಹಾಕಿದ್ದು, ಮೈತ್ರಿ ವಿರೋಧ ಪಕ್ಷಕ್ಕೆ ಹಾಲು ಅನ್ನ ಎನ್ನುವಂತಾಗಿದೆ.

ADVERTISEMENT

ಬರವನ್ನು ಊಹಿಸುವುದರಲ್ಲಿ ಎಡವಿದ್ದ ರಾಜ್ಯ ಸರ್ಕಾರ..!

ಮೇ 20ರಂದು ರಾಜ್ಯದಲ್ಲಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಕಾಂಗ್ರೆಸ್​ನ ಸಿದ್ದರಾಮಯ್ಯ, ಅಷ್ಟೇ ಬೇಗ ಸಚಿವ ಸಂಪುಟವನ್ನೂ ವಿಸ್ತರಣೆ ಮಾಡಿದ್ದರು. ಸರ್ಕಾರ ಉತ್ತಮ ಆಡಳಿತ ಕೊಡುತ್ತೆ ಎನ್ನುವ ನಿರೀಕ್ಷೆ ಮೂಡಿಸುವ ಸಮಯಕ್ಕೆ ರಾಜ್ಯಕ್ಕೆ ಪ್ರವೇಶ ಪಡೆಯಬೇಕಿದ್ದ ಮುಂಗಾರು ಮಳೆ ಕೈ ಕೊಟ್ಟಿತ್ತು. ಮೇ ಕೊನೆಯ ವಾರದಲ್ಲಿ ಅಥವಾ ಜೂನ್​ ಮೊದಲ ವಾರದಲ್ಲಿ ರಾಜ್ಯಕ್ಕೆ ಬರಬೇಕಿದ್ದ ಮುಂಗಾರು ಮಾರುತಗಳು ದಿಕ್ಕು ತಪ್ಪಿದ್ದವು. ಆಗಲೇ ಬರ ಎದುರಾಗುವ ಸಾಧ್ಯತೆ ಬಗ್ಗೆ ಅಂದಾಜು ಮಾಡಬೇಕಿದ್ದ ಸರ್ಕಾರ ಕೂಡ ದಿಕ್ಕುತಪ್ಪಿತ್ತು. ಆ ಬಳಿಕ ಜೂನ್​, ಜುಲೈನಲ್ಲೂ ಬರಬೇಕಿದ್ದ ಸಾಮಾನ್ಯ ಮಳೆ ರಾಜ್ಯಕ್ಕೆ ಬರಲೇ ಇಲ್ಲ. ಆಗಲೇ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿ, ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದೆ. ದಯಮಾಡಿ ಕಾವೇರಿ ನೀರನ್ನು ಹರಿಸಲು ಸಾಧ್ಯವಿಲ್ಲ ಎಂದು ಮೊದಲೇ ಮನವಿ ಮಾಡಿಕೊಂಡಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ ಅನ್ನೋದು ವಿರೋಧ ಪಕ್ಷಗಳ ಆರೋಪ. ಆದರೆ ತಮಿಳುನಾಡು ನೀರು ಬಿಡುವಂತೆ ಒತ್ತಾಯಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿದ ಬಳಿಕ ನೀರಿಲ್ಲ ಎಂದು ಹೇಳಿದ್ದು ಕರ್ನಾಟಕದ ಜನರ ಪಾಲಿಗೆ ಸಂಕಷ್ಟ ತಂದಿಟ್ಟಿದೆ ಎನ್ನಲಾಗ್ತಿದೆ.

Bengaluru, Sept 22 (ANI): Kannada activists burn an effigy during the protest against the State and Central Government over Cauvery water dispute, at Magadi Road Toll, in Bengaluru on Friday. (ANI Photo)

ವಿರೋಧ ಪಕ್ಷಗಳ ದೋಸ್ತಿಗೆ ಲೋಕಸಭಾ ಅಸ್ತ್ರ..!

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಎಷ್ಟೇ ಉತ್ತಮ ಕೆಲಸ ಮಾಡಿದರೂ ಕಾವೇರಿ ವಿಚಾರದಲ್ಲಿ ಸಂಕಷ್ಟಕ್ಕೆ ಸಿಲುಕಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದೀಗ ಇದನ್ನೇ ಅಸ್ತ್ರವಾಗಿ ಮಾಡಿಕೊಂಡಿರುವ ವಿರೋಧ ಪಕ್ಷಗಳ ದೋಸ್ತಿ ನಾಯಕರು ಕಾಂಗ್ರೆಸ್​​ ಮಣಿಸಲು ಸಕಲ ತಯಾರಿ ಮಾಡಿಕೊಳ್ತಿದ್ದಾರೆ. ಇಲ್ಲೀವರೆಗೂ ಕಾಂಗ್ರೆಸ್​ ಹಾಗು ಸರ್ಕಾರದ ಮುಖ್ಯಸ್ಥರು ಪ್ರಧಾನಿ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದರು. ಆದರೆ ಯಾರೊಬ್ಬರೂ ಪ್ರಧಾನಿಯನ್ನು ಭೇಟಿ ಮಾಡಿ ಮನವಿ ಮಾಡಿರಲಿಲ್ಲ. ಆದರೆ ಇದೀಗ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ತಮಿಳುನಾಡು ಹಾಗು ಕರ್ನಾಟಕ ನಡುವೆ ಸೃಷ್ಟಿಯಾಗಿರುವ ಕಾವೇರಿ ಬಿಕ್ಕಟ್ಟು ಶಮನ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಈ ಹಿಂದೆಯೂ ರಾಜ್ಯಸಭೆಯಲ್ಲೂ ಕೈಮುಗಿದು ಬೇಡಿಕೊಂಡಿದ್ದರು. ಮತ್ತೊಮ್ಮೆ ಪ್ರಧಾನಿಗೆ ಪತ್ರ ಬರೆಯುವ ಮೂಲಕ ಕಾವೇರಿ ರಕ್ಷಣೆಗೆ ಕಂಕಣ ಕಟ್ಟಿದ್ದಾರೆ.

ಮೋದಿ ಮಧ್ಯಪ್ರವೇಶ ಬಿಜೆಪಿ-ಜೆಡಿಎಸ್​ಗೆ ಲಾಭ..!

ಮಳೆ ಬಂದರೆ ತಮಿಳುನಾಡಿನ ಕಿರಿಕಿರಿ ತಪ್ಪಲಿದೆ. ಕಾವೇರಿ ನೀರು ಸಾಕಷ್ಟು ಪ್ರಮಾಣದಲ್ಲಿ ಹರಿದು ಹೋಗುವುದರಿಂದ ನೀರಿನ ಸಮಸ್ಯೆಗೆ ಇತಿಶ್ರೀ ಸಿಗಲಿದೆ. ಒಂದು ವೇಳೆ ಮಳೆ ಅಬ್ಬರ ಇರದೆ ಪ್ರಸಕ್ತ ವರ್ಷ ಕಳೆಯುವುದಾದರೆ ಕಾಂಗ್ರೆಸ್​ ಪಾಲಿಕೆ ಲೋಕಸಭಾ ಚುನಾವಣೆ ಕಬ್ಬಿಣದ ಕಡಲೆ ಆಗುವುದರಲ್ಲಿ ಅನುಮಾನವಿಲ್ಲ. ಒಂದು ವೇಳೆ ದೇವೇಗೌಡರ ಪತ್ರಕ್ಕೆ ಬೆಲೆ ಕೊಟ್ಟು ಪ್ರಧಾನಿ ಮಧ್ಯಪ್ರವೇಶ ಮಾಡಿ ಎರಡೂ ರಾಜ್ಯಗಳಲ್ಲಿ ಮಳೆ ಪ್ರಮಾಣ ಹಾಗು ನೀರಿನ ಸಂಗ್ರಹದ ಬಗ್ಗೆ ಪರಿಶೀಲನೆಗೆ ಕೇಂದ್ರದಿಂದ ತಂಡ ಕಳುಹಿಸಿ, ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸೂತ್ರ ರಚನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರೆ ಬಿಜೆಪಿ – ಜೆಡಿಎಸ್​ ಮೈತ್ರಿ ಪಕ್ಷಕ್ಕೆ ಬಹುದೊಡ್ಡ ಲಾಭ ಆಗಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್​ ಮತ್ತೆ ಪುಟಿದು ನಿಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ. ರಾಜಕಾರಣ ಏನೇ ಇರಲಿ, ಕಾವೇರಿ ಸಮಸ್ಯೆ ಬಗೆಹರಿಯಲಿ ಎನ್ನುತ್ತಿದ್ದಾರೆ ಅನ್ನದಾತರು.

Tags: BJPCauveryJDSKannadigaLok Sabha
Previous Post

ಗೊಂದಲದ ಬೆಂಗಳೂರು ಬಂದ್​.. ಇದ್ಯಾಕೆ ಈ ರೀತಿಯ ಗೊಂದಲ ಆಗಿದ್ದು..?

Next Post

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ!

Related Posts

ಶಿಲ್ಪಾಶೆಟ್ಟಿ ಒಡೆತನದ ಪಬ್ ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ
ಇತರೆ / Others

ಶಿಲ್ಪಾಶೆಟ್ಟಿ ಒಡೆತನದ ಪಬ್ ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

by ಪ್ರತಿಧ್ವನಿ
December 14, 2025
0

ಬೆಂಗಳೂರು: ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಒಡೆತನದ 'ಬ್ಯಾಸ್ಟಿಯನ್' ಪಬ್‌ನಲ್ಲಿ ಪಬ್ ಮುಚ್ಚುವ ಸಮಯದಲ್ಲಿ ಗಲಾಟೆಯಾಗಿದೆ. ಸದ್ಯ ಗಲಾಟೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ....

Read moreDetails
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
Next Post
ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ!

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ!

Please login to join discussion

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಲ್ಪಾಶೆಟ್ಟಿ ಒಡೆತನದ ಪಬ್ ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾಶೆಟ್ಟಿ ಒಡೆತನದ ಪಬ್ ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada