• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಸರ್ವೇ ಹೆಸರಲ್ಲಿ ಕನ್ನಡಿಗರನ್ನು ಮೋಸ ಮಾಡಲಾಗ್ತಿದ್ಯಾ..? ಏನಿದು ಲೆಕ್ಕಾಚಾರ

ಕೃಷ್ಣ ಮಣಿ by ಕೃಷ್ಣ ಮಣಿ
May 8, 2023
in ಅಂಕಣ
0
ಸರ್ವೇ ಹೆಸರಲ್ಲಿ ಕನ್ನಡಿಗರನ್ನು ಮೋಸ ಮಾಡಲಾಗ್ತಿದ್ಯಾ..? ಏನಿದು ಲೆಕ್ಕಾಚಾರ
Share on WhatsAppShare on FacebookShare on Telegram

ರಾಜ್ಯ ವಿಧಾನಸಭಾ ಚುನಾವಣೆ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಇಡೀ ಕರ್ನಾಟಕದಲ್ಲಿ ಮೂರು ರಾಜಕೀಯ ಪಕ್ಷಗಳು ತಾಮುಂದು ನಾಮುಂದು ಎನ್ನುತ್ತ ಚುನಾವಣಾ ಪ್ರಚಾರ ಸಭೆ, ಱಲಿಗಳನ್ನು ಮಾಡಿದ್ದು, ಅಂತಿಮ ಪ್ರಚಾರಕ್ಕೆ ಇಂದೇ ಕೊನೇ ದಿನ. ರಾಜ್ಯ ಮಟ್ಟದ ಸುದ್ದಿ ವಾಹಿನಿಗಳಲ್ಲಿ ದಿನಕ್ಕೆ ಒಂದರಂತೆ ಚುನಾವಣಾ ಸಮೀಕ್ಷೆಗಳನ್ನು ಪ್ರಕಟ ಮಾಡಲಾಗುತ್ತಿದೆ. ಅದರಲ್ಲಿ ಒಂದು ಚಾನೆಲ್​ ಒಂದು ಪಕ್ಷಕ್ಕೆ ಮುನ್ನಡೆ ಅಂತಾ ಮಾಹಿತಿ ಕೊಟ್ಟರೆ, ಮತ್ತೊಂದು ಚಾನೆಲ್​ ಇನ್ನೊಂದು ಪಕ್ಷಕ್ಕೆ ಮುನ್ನಡೆ ಎಂದು ಹೇಳುತ್ತಿವೆ. ಇದು ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟವನ್ನು ಪ್ರದರ್ಶನಕ್ಕೆ ಇಟ್ಟಂತೆ ಆಗಿದೆ. ಜನರು ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಅನ್ನೋದ್ರ ಬಗ್ಗೆ ಸಾಕಷ್ಟು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಆದರೆ ಈ ಸರ್ವೇಗಳು ಎಷ್ಟು ಸತ್ಯ ಎನ್ನುವ ಪ್ರಶ್ನೆಗೆ ಉತ್ತರ ಸಿಗದಂತಾಗಿದೆ.

ADVERTISEMENT

ಚುನಾವಣಾ ಸರ್ವೇ ಅಂದರೆ ಹಗೇಗಿರಬೇಕು..? ಈಗ ಏನಾಗಿದೆ..?

ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದಾಗ ಚುನಾವಣಾ ಸಮೀಕ್ಷೆಗಳು ಬರುವುದು ಸರ್ವೇ ಸಾಮಾನ್ಯ. ಆದರೆ ಒಂದು ಸರ್ವೇ ಹಾಗು ಮತ್ತೊಂದು ಸರ್ವೇ ಅಂಕಿ ಅಂಶಗಳಿಗೆ ಕೆಲವೊಂದಿಷ್ಟು ನಂಬರ್​ಗಳಲ್ಲಿ ವ್ಯತ್ಯಾಸ ಇರುತ್ತದೆ. ಸೂಕ್ತ ರೀತಿಯಲ್ಲಿ ಸರ್ವೇ ಮಾಡಿದ್ದರೆ ರಾಜ್ಯದ ಜನರ ಮನಸ್ಸಿತಿ ಯಾವ ಕಡೆಗೆ ಇದೆ ಎನ್ನುವುದು ಎಲ್ಲರಿಗೂ ತಿಳಿಯುವಂತೆ ಇರುತ್ತದೆ. ಆದರಲ್ಲಿ ಒಂದೆರಡು ಸ್ಥಾನಗಳ ವ್ಯತ್ಯಾಸ ಇರಬಹುದು. ಆದರೆ ರಾಜ್ಯದಲ್ಲಿ ಒಂದು ಸರ್ವೇ ಒಂದು ಪಕ್ಷಕ್ಕೆ ಮತ್ತೊಂದು ಸರ್ವೇ ಮತ್ತೊಂದು ಪಕ್ಷಕ್ಕೆ ಎನ್ನುವಂತಿದೆ. ಈ ಸರ್ವೇಗಳು ಹಣ ಕೊಟ್ಟು ಮಾಡಿಸಿರುವುದು ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುವಂತಿದೆ. ಅದರಲ್ಲೂ ವಿಶೇಷವಾದ ಸಂಗತಿ ಎಂದರೆ ಒಂದೇ ಟಿವಿಯಲ್ಲಿ ಬೆಳಗ್ಗೆ ಒಂದು ಪಕ್ಷಕ್ಕೆ ಬಹುಮತ ಕೊಟ್ಟು ಸಂಜೆ ಇನ್ನೊಂದು ಪಕ್ಷಕ್ಕೆ ಬಹುಮತ ಎಂದು ಹೇಳಿರುವುದು ಮುಜುಗರ ಸೃಷ್ಟಿಸುವಂತಿದೆ.

ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು ಸತ್ಯವೇ..?

ಮಾಜಿ ಸಿಎಂ ಕುಮಾರಸ್ವಾಮಿ ಈ ಬಾರಿ ರಾಜ್ಯದಲ್ಲಿ 123 ಸ್ಥಾನಗಳಲ್ಲಿ ಗೆಲುವು ಕಾಣಬೇಕು ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ಪಂಚರತ್ನ ಯೋಜನೆಗಳ ಬಗ್ಗೆ ಅಬ್ಬರದ ಪ್ರಚಾರ ಮಾಡಿದ್ದಾರೆ. ಆದರೂ ಸರ್ವೇಗಳಲ್ಲಿ ಒಂದಿಷ್ಟು ಸ್ಥಾನಗಳು ಏರಿಕೆ ಕಂಡಿಲ್ಲ. ಬದಲಿಗೆ ಜೆಡಿಎಎಸ್​ 20 ರಿಂದ 25 ಸ್ಥಾನ ಅಥವಾ 30 ರಿಂದ 32 ಸ್ಥಾನ ಎಂದೇ ಎಲ್ಲಾ ಸರ್ವೇಗಳಲ್ಲೂ ತೋರಿಸುತ್ತಿದ್ದಾರೆ. ಈ ಬಗ್ಗೆ ಪ್ರಚಾರ ಸಭೆಗಳಲ್ಲಿ ಮಾತನಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ನಾನು ಕೂಡ ಮಾಧ್ಯಮಗಳಿಗೆ 20 ಕೋಟಿ ರೂಪಾಯಿ ಖರ್ಚು ಮಾಡಿದರೆ ನಮ್ಮ ಜೆಡಿಎಸ್​ ಪಕ್ಷದ ಸಂಖ್ಯೆ 129 ಆಗುತ್ತದೆ. ಯಾರೊಬ್ಬರೂ ಸರ್ವೇ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಎರಡೂ ರಾಷ್ಟ್ರೀಯ ಪಕ್ಷಗಳು ಈ ಬಾರಿ 100 ಸ್ಥಾನಗಳನ್ನು ಮೀರುವುದಕ್ಕೆ ಸಾಧ್ಯವೇ ಇಲ್ಲ. ಜೆಡಿಎಸ್​​ ಪಕ್ಷವೇ ಅಧಿಕಾರಕ್ಕೆ ಬರುವುದು ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಸುಳ್ಳು ಸರ್ವೇಗಳಿಂದ ಆಗುವ ಲಾಭ ಆದರೂ ಏನು..?

ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್​ ಹಾಗು ಬಿಜೆಪಿ ಭರ್ಜರಿ ಹಣ ವೆಚ್ಚ ಮಾಡುತ್ತಿರುವುದು ಸುಳ್ಳೇನು ಅಲ್ಲ. ಕೋಟಿ ಕೋಟಿ ರೂಪಾಯಿ ಪಾರ್ಟಿ ಫಂಡ್​ ಇರುವ ಕಾರಣಕ್ಕೆ ಕೋಟಿ ಕೋಟಿ ಹಣವನ್ನು ಪ್ರಚಾರಕ್ಕಾಗಿ ಸುರಿಯುತ್ತಿದ್ದಾರೆ. ಅದರಲ್ಲಿ ಸರ್ವೇ ಅನ್ನೋದು ಕೂಡ ಒಂದು ಪ್ರಚಾರದ ಭಾಗವೇ ಆಗಿದೆ. ಒಂದೊಂದು ಸಂಸ್ಥೆಗಳ ಹೆಸರಲ್ಲಿ ಸರ್ವೇಗಳನ್ನು ಜನರಿಗೆ ಮುಟ್ಟಿಸುವುದು. ಈ ಮೂಲಕ ಪಕ್ಷದ ಪರವಾಗಿ ಜನರ ಒಲವು ಇದೆ ಎನ್ನುವುದನ್ನು ಪ್ರಚಾರ ಮಾಡುವುದು ಇದರ ಉದ್ದೇಶ. ಆದರೆ ಸರ್ವೇಗಳಿಗೆ ಪ್ರತಿಯಾಗಿ ಮತ್ತೊಂದು ಪಕ್ಷ ಕೂಡ ಸರ್ವೇ ಹೆಸರಲ್ಲೇ ಜನರನ್ನು ಮೋಸಗೊಳಿಸಿ ಜನರ ಮನಸ್ಸು ನಮ್ಮ ಕಡೆಗೆ ಇದೆ ಎಂದು ಜನರಲ್ಲಿ ಗೊಂದಲ ಮೂಡಿಸುವುದು. ಒಂದು ಪಕ್ಷದ ಪರವಾಗಿ ಜನಾಭಿಪ್ರಾಯ ಮೂಡದಂತೆ ಮಾಡುವುದೇ ಇದರ ಉದ್ದೇಶ ಆಗಿದೆ ಎನಿಸುತ್ತದೆ. ಆದರೂ ಸರ್ವೇಗಳನ್ನು ಮುಂದಿನ ದಿನಗಳಲ್ಲಿ ನಂಬುವ ಸಾಧ್ಯತೆ ಕಡಿಮೆ ಆದಂತಿದೆ.

ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆ ನಿಜ ಇರುತ್ತಾ..!?

ಈ ಬಾರಿ ಸರ್ವೇಗಳಿಗೆ ಲೆಕ್ಕ ಇಲ್ಲದಂತಾಗಿದ್ದು, ಸರ್ವೇಗಳು ಮಾನ್ಯತೆ ಕಳೆದುಕೊಳ್ಳುವಂತಾಗಿದೆ. ಆದರೆ ಚುನಾವಣೆ ಮುಗಿದ ಬಳಿಕ ಅಂದತೆ ಮೇ 10 ರಂದು ಚುನಾವಣೋತ್ತರ ಸಮೀಕ್ಷೆ ಪ್ರಕಟ ಆಗಲಿದೆ. ಆಗಲಾದರೂ ನಿಜವಾದ ಸಮೀಕ್ಷೆ ಪ್ರಕಟಗೊಂಡರೆ ಸಮೀಕ್ಷೆಗಳ ಮಾನ ಉಳಿಯಲಿದೆ. ಆದರೆ ಆಗಲೂ ಒಂದೊಂದು ಪಕ್ಷಗಳಿಗೆ ಒಂದೊಂದು ಟಿವಿ ಎನ್ನುವಂತೆ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾದರೆ ಮುಂದಿನ ದಿನಗಳಲ್ಲಿ ಸರ್ವೇ ಎನ್ನುವುದೇ ಸುಳ್ಳಿನ ಕಂತೆ ಅನ್ನೋದು ಜನರ ಎದುರು ಬಟಾಬಯಲಾಗಲಿದೆ. ಅಷ್ಟೇ ಅಲ್ಲದೆ ಈ ಬಾರಿ ಜೆಡಿಎಸ್​​ ಪಕ್ಷಕ್ಕೆ ಯಾವುದೇ ಸರ್ವೇಗಳಲ್ಲಿ 35 ಸ್ಥಾನಗಳನ್ನು ದಾಟಿಸಿಲ್ಲ. ಒಂದು ವೇಳೆ ಜೆಡಿಎಸ್​ಗೆ ಈ ಬಾರಿ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಿದರೆ ಸರ್ವೇ ಮಾನ ಹರಾಜಕು ಆಗಲಿದೆ.

ಕೃಷ್ಣಮಣಿ

Tags: BJPelection surveyJDSKannadigaspre-election surveyಕನ್ನಡಿಗರುಕಾಂಗ್ರೆಸ್​ಚುನಾವಣಾ ಪೂರ್ವ ಸರ್ವೆಚುನಾವಣಾ ಸರ್ವೇಜೆಡಿಎಸ್​ಬಿಜೆಪಿ
Previous Post

ಎಸ್​ಎಸ್​ಎಲ್​​ಸಿ ಫಲಿತಾಂಶ ಪ್ರಕಟ : ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ

Next Post

ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಕಡೆಯಿಂದ ಲೀಗಲ್‌ ನೋಟಿಸ್‌..!

Related Posts

Top Story

ಡೀಪ್ಟೆಕ್ ದಶಕಕ್ಕೆ ಮುನ್ನುಡಿ ಬರೆದ ಬೆಂಗಳೂರು ಟೆಕ್ ಮೇಳ, ಡೀಪ್ಟೆಕ್ ನವೋದ್ಯಮಗಳಿಗೆ ₹ 400 ಕೋಟಿ ನೆರವು: ಸಚಿವ ಪ್ರಿಯಾಂಕ್ ಖರ್ಗೆ

by ಪ್ರತಿಧ್ವನಿ
November 20, 2025
0

ರಾಜ್ಯ ಸರ್ಕಾರದ ಜೊತೆ ಕೈಜೋಡಿಸಿರುವ ಭವಿಷ್ಯ ರೂಪಿಸುವವರು, ವೆಂಚರ್ ಕ್ಯಾಪಿಟಲ್ (ವಿಸಿ) ಹೂಡಿಕೆದಾರರಿಗೆ ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ ಬೆಂಗಳೂರು, ನವೆಂಬರ್ 20: ಇಲ್ಲಿ...

Read moreDetails

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025
Next Post
ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಕಡೆಯಿಂದ ಲೀಗಲ್‌ ನೋಟಿಸ್‌..!

ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಕಡೆಯಿಂದ ಲೀಗಲ್‌ ನೋಟಿಸ್‌..!

Please login to join discussion

Recent News

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

November 22, 2025
ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada