• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

ಪ್ರತಿಧ್ವನಿ by ಪ್ರತಿಧ್ವನಿ
May 16, 2026
in Top Story
0
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Share on WhatsAppShare on FacebookShare on Telegram

ಅಮರಾವತಿ :

ADVERTISEMENT

ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ ನಾಲ್ಕನೇ ಮಗುವಿಗೆ ₹40 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “ಜನಸಂಖ್ಯೆ ಕುಸಿತ ಭವಿಷ್ಯದಲ್ಲಿ ದೊಡ್ಡ ಸಮಸ್ಯೆಯಾಗಬಹುದು. ಆದ್ದರಿಂದ ಜನನ ಪ್ರಮಾಣ ಹೆಚ್ಚಿಸುವುದು ಅಗತ್ಯ” ಎಂದು ಹೇಳಿದರು.

PODCAST: ಕರಾವಳಿಯಲ್ಲಿ ಹಿಂದು-ಮುಸಲ್ಮಾನ ನಡುವೆ ದ್ವೇಷ ಬಿತ್ತುವವರೇ ಇವರು..#pratidhvani

ಮೂರನೇ ಮಗುವಿಗೆ ತಕ್ಷಣ ₹30 ಸಾವಿರ ಹಾಗೂ ನಾಲ್ಕನೇ ಮಗುವಿಗೆ ₹40 ಸಾವಿರ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಸಂಪೂರ್ಣ ಮಾರ್ಗಸೂಚಿ ಹಾಗೂ ಅನುಷ್ಠಾನದ ವಿವರಗಳನ್ನು ಒಂದು ತಿಂಗಳೊಳಗೆ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದು ಕಾಲದಲ್ಲಿ ಜನಸಂಖ್ಯೆ ನಿಯಂತ್ರಣದ ಪರವಾಗಿದ್ದ ಚಂದ್ರಬಾಬು ನಾಯ್ಡು, ಈಗ ಪರಿಸ್ಥಿತಿ ಬದಲಾಗಿದೆ ಎಂದು ಹೇಳಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನನ ಪ್ರಮಾಣ ಕುಸಿಯುತ್ತಿರುವುದು ಭವಿಷ್ಯದಲ್ಲಿ ಕಾರ್ಮಿಕ ಶಕ್ತಿ ಹಾಗೂ ರಾಜಕೀಯ ಪ್ರತಿನಿಧಿತ್ವದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕ ಸರ್ಕಾರದಲ್ಲಿದೆ.

ಇದಕ್ಕೂ ಮೊದಲು ಆಂಧ್ರ ಪ್ರದೇಶ ಸರ್ಕಾರ ಮೂರನೇ ಮಗುವಿಗೆ ₹25 ಸಾವಿರ ಪ್ರೋತ್ಸಾಹಧನ, ಉಚಿತ ಶಿಕ್ಷಣ ಹಾಗೂ ಇತರೆ ಸೌಲಭ್ಯಗಳನ್ನು ಒಳಗೊಂಡ ಕರಡು ಜನಸಂಖ್ಯಾ ನೀತಿಯನ್ನು ಪ್ರಕಟಿಸಿತ್ತು. ಈಗ ಅದನ್ನು ಮತ್ತಷ್ಟು ವಿಸ್ತರಿಸುವ ಸೂಚನೆ ಸಿಕ್ಕಿದೆ. ಸರ್ಕಾರದ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕೆಲವರು ಇದನ್ನು ಭವಿಷ್ಯದ ಜನಸಂಖ್ಯಾ ಸಮತೋಲನಕ್ಕೆ ಅಗತ್ಯ ಕ್ರಮ ಎಂದು ಸ್ವಾಗತಿಸಿದರೆ, ಇನ್ನೂ ಕೆಲವರು ಮಕ್ಕಳ ಸಾಕಾಣಿಕೆಯ ಹೆಚ್ಚುತ್ತಿರುವ ವೆಚ್ಚದ ನಡುವೆ ಈ ಮೊತ್ತ ಸಾಕಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #APGovernment#BirthIncentive#FamilyPolicy#FourthChild#indianews#PopulationGrowth#PopulationPolicy#ThirdChildAndhrapradeshchandrababunaidu
Previous Post

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

Related Posts

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!
Top Story

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

by ಪ್ರತಿಧ್ವನಿ
May 16, 2026
0

ಮುಂಬೈ : ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಬೈಕ್‌ ಟ್ಯಾಕ್ಸಿ ಸೇವೆಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, Uber, Ola Consumer ಹಾಗೂ Rapido ಆ್ಯಪ್‌ಗಳನ್ನು...

Read moreDetails
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada