• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

ನಾನು ನನಗಾಗಿ ಐಪಿಎಲ್ ಟಿಕೆಟ್ ಕೇಳಿಲ್ಲ, ಜನಪ್ರತಿನಿಧಿಗಳ ಬೇಡಿಕೆಗೆ ಸ್ಪಂದದಿಸಿದ್ದೇನೆ : ಡಿಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
May 9, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?
Share on WhatsAppShare on FacebookShare on Telegram

ಬೆಂಗಳೂರು : ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ADVERTISEMENT
Kota Shrinivas Poojari On BSY Abhimanotsava :ದಕ್ಷಿಣದಲ್ಲಿ ಬಿಜೆಪಿಗೆ ಹೆಬ್ಬಾಗಿಲು ತೆರೆದ ಕಟ್ಟಾಳು ಯಡಿಯೂರಪ್ಪ

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ತಮಿಳುನಾಡಿನ ಯಾವ ಶಾಸಕರೂ ಈಗಲ್ ಟನ್ ರೆಸಾರ್ಟ್ ಗೆ ಬಂದಿಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ. ಮಾಹಿತಿ ಇದ್ದಿದ್ದರೆ ನಾನು ಹೇಳುತ್ತಿದ್ದೆ. ನವೀಕರಣ ಹಿನ್ನೆಲೆಯಲ್ಲಿ ಈಗಲ್ ಟನ್ ರೆಸಾರ್ಟ್ ಮುಚ್ಚಲಾಗಿದೆ. ಕೆಲವರು ಹೈದರಾಬಾದ್ ಗೆ ಹೋಗಿದ್ದಾರೆ ಎಂದರೆ ಮತ್ತೆ ಕೆಲವರು ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ಶಾಸಕರ ಆಗಮನವನ್ನು ತಳ್ಳಿ ಹಾಕಿದ್ದಾರೆ.

ನಮ್ಮ ಪಕ್ಷದ ಹೈಕಮಾಂಡ್ ನಾಯಕರು ಏನಾದರೂ ನಿರ್ದೇಶನ ನೀಡಿದರೆ ನಾನು ಅದನ್ನು ಪಾಲಿಸುವೆ. ಆದರೆ ಈವರೆಗೆ ಹೈಕಮಾಂಡ್ ನಾಯಕರು ನನ್ನ ಜೊತೆ ಏನೂ ಮಾತನಾಡಿಲ್ಲ. ಪಕ್ಷದ ನಾಯಕರ ನಿರ್ದೇಶನದಂತೆ ನಾನು ತಮಿಳುನಾಡಿನಲ್ಲಿ ಪ್ರಣಾಳಿಕೆ ಬಿಡುಗಡೆ ಹಾಗೂ ಪ್ರಚಾರಕ್ಕೆ ಹೋಗಿದ್ದೆ. ಅದಾದ ನಂತರ ನನಗೆ ಯಾವುದೇ ಮಾಹಿತಿ ಇಲ್ಲ. ನನಗೆ ತಮಿಳುನಾಡಿನ ಸದ್ಯದ ಸ್ಥಿತಿಗತಿಯ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

ಯಡಿಯೂರಪ್ಪ ಅವರಿಗೆ ಆರೋಗ್ಯ, ಆಯಸ್ಸು ಹೆಚ್ಚಾಗಲಿ..

ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ರಾಜ್ಯದ ಸೇವೆ ಮಾಡಿದ್ದಾರೆ. ಅವರ ಜನ್ಮದಿನವಿದ್ದರೆ ಅವರಿಗೆ ಒಳ್ಳೆಯದಾಗಲಿ. ಅವರ ಪಕ್ಷದವರು ಪಕ್ಷ ಸಂಘಟನೆ ಹಾಗೂ ಅವರಿಗೆ ಗೌರವ ನೀಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಆಶಿಸುತ್ತೇನೆ. ಭಗವಂತ ಅವರಿಗೆ ಹೆಚ್ಚಿನ ಆಯಸ್ಸು ನೀಡಲಿ. ರಾಜಕೀಯವಾಗಿ ಅವರ ವಿಚಾರಧಾರೆ ಬೇರೆ, ನಮ್ಮ ವಿಚಾರಧಾರೆ ಬೇರೆ ಎಂದು ಡಿಕೆ ಶಿವಕುಮಾರ್‌ ಶುಭಹಾರೈಸಿದ್ದಾರೆ.

ನಾನು ಬಹಳ ದಿನಗಳಿಂದ ದೇವಾಲಯಕ್ಕೆ ಹೋಗಿರಲಿಲ್ಲ. ಹೀಗಾಗಿ ಪುದುಚೇರಿ ಶನೇಶ್ವರ ದೇವಾಲಯಕ್ಕೆ ಹೋಗುತ್ತಿದ್ದೇನೆ. ನಮ್ಮ ಎಲ್ಲಾ ನಾಯಕರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಅದು ಎಲ್ಲಾ ಪಕ್ಷಗಳಲ್ಲೂ ನಡೆಯುವ ಪ್ರಕ್ರಿಯೆ ಎಂದು ತಿಳಿಸಿದ್ದಾರೆ.

ಅಶೋಕ್‌ ಹೇಳಿರುವ ಎಲ್ಲಾ ಕೆಲಸಗಳನ್ನು ಮಾಡ್ತಿದ್ದೀವಿ..

ನಗರದಲ್ಲಿ ಮರಗಳ ತೆರವಿಗೆ ಸಮಯವಿಲ್ಲ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕೆಗೆ ಪ್ರತಿಕ್ರಿಯಿಸಿ, ಬಿದ್ದಿರುವ ಎಲ್ಲಾ ಮರಗಳ ತೆರವು ಮಾಡಲಾಗುತ್ತಿದೆ. ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ಎಲ್ಲೆಡೆ ಈ ಕಾರ್ಯ ಮಾಡಲಾಗುತ್ತಿದೆ. ದುರ್ಬಲವಾಗಿರುವ ಮರಗಳ ತೆರವಿಗೂ ಸೂಚಿಸಲಾಗಿದೆ. 480 ಮರಗಳ ಪಟ್ಟಿ ನೀಡಿದ್ದು, ಅವುಗಳ ರೆಂಬೆ ಕತ್ತರಿಸಲು ಅನುಮತಿ ನೀಡಲಾಗಿದೆ. ಅಶೋಕ್ ಅವರು ಹೇಳಿರುವ ಎಲ್ಲಾ ಕೆಲಸ ಮಾಡಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

ನನಗಾಗಿ ಐಪಿಎಲ್ ಟಿಕೆಟ್ ಕೇಳಿಲ್ಲ..

“ಆರ್. ಅಶೋಕ್ ಶಾಸಕರಾದ ಕಾಶಪ್ಪನವರು ಐಪಿಎಲ್ ಟಿಕೆಟ್ ಕೇಳಿದ್ದರು. ಈಗ ಅದನ್ನು ನನ್ನ ಮೇಲೆಯೇ ಹಾಕಿಕೊಂಡಿದ್ದೇನೆ. ಗುಜರಾತಿನವರಿಗೆ ಟಿಕೆಟ್ ಗಳು ಹೆಚ್ಚಾಗಿ ಬೇಕಾಗಿತ್ತು, ವ್ಯಾಪಾರ ಜಾಸ್ತಿ ಆಗಬೇಕಿತ್ತು. ಅದಕ್ಕೆ ಈ ರೀತಿ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ನಾವು ಕೇಳಿದ್ದ 300 ಟಿಕೆಟ್ ದೊಡ್ಡದಾಯ್ತಾ? ಬೇರೆ ರಾಜ್ಯಗಳಲ್ಲಿ 60% ಟಿಕೆಟ್ ಅನ್ನು ರಾಜ್ಯ ಸರ್ಕಾರಗಳಿಗೆ ಕೊಡುತ್ತಿದ್ದಾರೆ. ನಾನು ಕರ್ನಾಟಕದ ಪ್ರತಿನಿಧಿಯಾಗಿ ಶಾಸಕರು ಏನು ಹೇಳುತ್ತಾರೋ ಅದನ್ನು ಮಾಡಿದ್ದೇನೆ. ಎಲ್ಲಾ ಪಕ್ಷದವರು ಸೇರಿ ಬೇಡಿಕೆ ಇಟ್ಟರಲ್ಲವೇ? ದಳದವರಿಗೆ ಬೇಡವಾದರೆ ತಮ್ಮ ಪಕ್ಷದ ಶಾಸಕರಿಗೆ ಟಿಕೆಟ್ ಬೇಡ ಎಂದು ವಾಪಸ್ ನೀಡಲಿ. ನಾನು ನನಗಾಗಿ ಟಿಕೆಟ್ ಕೇಳಿದ್ದೀನಾ? ನಮ್ಮ ಜನಪ್ರತಿನಿಧಿಗಳು ಮನವಿ ಮಾಡಿದ್ದಕ್ಕೆ ಕೇಳಿದೆ. ಈ ಹಿಂದೆ ಶಾಸಕರಿಗೆ 2 ಟಿಕೆಟ್ ನೀಡುತ್ತಿದ್ದರು. ಈಗ ಮೂರು ಟಿಕೆಟ್ ನೀಡೋಕೆ ಹೇಳಿರುವೆ ಎಂದು ಡಿಕೆ ಶಿವಕುಮಾರ್‌ ಟೀಕೆಗಳಿಗೆ ಕೌಂಟರ್‌ ನೀಡಿದ್ದಾರೆ.

Tags: AIADMKB S Yadiyurappa Feliciationbjp karnatakacongress karnatakaDCM DK ShivakumarDMKGBAIPL TicketsKarnataka GovernmentPolitical developmentsPratidhvaniR AshokTAminadu Congress MLASTaminadu PoliticsTVK
Previous Post

ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

Next Post

ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada