ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಕುರಿತು ಪ್ರಶ್ನಿಸಿದ್ದ ಪಿಐಎಲ್ ಹೈಕೋರ್ಟ್ ನಲ್ಲಿ ವಜಾಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿಸಿದೆ.

ಕರ್ನಾಟಕದಲ್ಲಿ ಶೇ.1.48ರಷ್ಟು ಮಾತ್ರ ಪಾಸಿಟಿವಿಟಿ ವರದಿ ಇದೆ. ಸದ್ಯಕ್ಕೆ ಕೊವಿಡ್ ಎರಡನೇ ಅಲೆ ಕಡಿಮೆ ಆಗಿರುವುದರಿಂದ ಮಾರ್ಗಸೂಚಿ ಪಾಲಿಸಿ ಪರೀಕ್ಷೆ ನಡೆಸಬಹುದು ಎಂದಿದೆ.
6 ದಿನದ ಬದಲು 2 ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಜುಲೈ 19, 22ರಂದು ಪರೀಕ್ಷೆ ನಡೆಯಲಿಕ್ಕಿದೆ. ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದು . ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವಂತೆ ಬಲವಂತ ಪಡಿಸಬಾರದು., ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಸರ್ಕಾರ ರೂಪಿಸಿದ ಎಸ್ಒಪಿ ಪಾಲಿಸಬೇಕು ಎಂದು ನ್ಯಾ.ಬಿ.ವಿ.ನಾಗರತ್ನ, ನ್ಯಾ. ಹಂಚಟೆ ಸಂಜೀವ್ ಕುಮಾರ್ರ ಪೀಠ ಆದೇಶ ಹೊರಡಿಸಿದೆ.






