• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ

Any Mind by Any Mind
June 6, 2023
in Top Story, ಇದೀಗ, ಕರ್ನಾಟಕ
0
5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram


ಆತ್ಮಾವಲೋಕನ ಸಭೆಯಲ್ಲಿ ಮುಖಂಡರಿಗೆ ಸ್ಥೈರ್ಯ ತುಂಬಿದ ವರಿಷ್ಠರು

ADVERTISEMENT

ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು.

ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ ನೀಡಿರುವ ಇಬ್ಬರೂ ನಾಯಕರು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳ ಮುಖಂಡರ ಜತೆ ಆತ್ಮಾವಲೋಕನ ಸಭೆಗಳನ್ನು ನಡೆಸಿದರು. ಬೆಳಗ್ಗೆಯಿಂದಲೇ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಒಂದೊಂದೇ ಜಿಲ್ಲೆಯ ಸರಣಿ ಸಭೆಗಳನ್ನು ನಡೆಸಿದ ವರಿಷ್ಠರು, ಎಲ್ಲಾ ಜಿಲ್ಲಾ ಮುಖಂಡರಿಗೆ ಕೆಲ ಮಹತ್ವದ ಅಂಶಗಳ ಬಗ್ಗೆ ಕಿವಿಮಾತು ಹೇಳಿದರು.

ಮಾಜಿ ಪ್ರಧಾನಿಗಳು ಹೇಳಿಕೆ; ಮುಂದೆ ಲೋಕಸಭೆ ಚುನಾವಣೆ ಬರುತ್ತಿದೆ. ಜತೆಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯು ಬರುತ್ತದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆಯೂ ನಡೆಯಲಿದೆ. ನಮ್ಮ ಗುರಿ ಈ ಚುನಾವಣೆಗಳೇ ಆಗಿರಬೇಕು. ಇದಕ್ಕೆ ಪೂರಕವಾಗಿ ಪಕ್ಷ ಸಂಘಟನೆ ಮಾಡಬೇಕು ಹಾಗೂ ಜನರ ಜತೆ ಇದ್ದು ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ತಾಲೂಕು, ಜಿಲ್ಲಾ ಸಮಿತಿಗಳು ಬದ್ಧತೆಯಿಂದ ದುಡಿಮೆ ಮಾಡಬೇಕು.

ನಮ್ಮ ಪಕ್ಷಕ್ಕೆ ಎಲ್ಲಿ ನೆಲೆ ಇದೆ ಎನ್ನುವುದು ನಮಗೆ ಗೊತ್ತಿದೆ. ಆ ನೆಲೆಯನ್ನು ಭದ್ರ ಮಾಡಿಕೊಂಡು ಅದನ್ನು ವಿಸ್ತರಿಸಬೇಕು. ಅದಕ್ಕೆ ನಾವು ತುರ್ತಾಗಿ ಮಾಡಬೇಕಿರುವ ಕೆಲಸ ಎಂದರೆ ಹಿರಿಯರ ಜತೆಗೆ ಯುವಕರಿಗೂ ಜವಾಬ್ದಾರಿ ನೀಡಬೇಕು. ಪ್ರಮುಖ ಜವಾಬ್ದಾರಿಗಳನ್ನು ಯುವಕರಿಗೆ ನೀಡಬೇಕು. ಅಷ್ಟೇ ಅಲ್ಲ, ಯುವಕರ ಬಗ್ಗೆ ಹಿರಿಯರು ಪ್ರೀತಿ, ಔದಾರ್ಯತೆಯಿಂದ ವರ್ತಿಸಬೇಕು. ಜಿಲ್ಲಾ ಘಟಕಗಳಲ್ಲಿ ಮಾರ್ಪಾಡು ಹಾಗೂ ಸುಧಾರಣೆಗಳನ್ನು ನಾವು ತರಬೇಕಿದೆ.

ಈ ಸೋಲು ದೊಡ್ಡ ಗೆಲುವಿಗೆ ನಾಂದಿ: ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನೆಡೆ ಆಗಿದೆ ನಿಜ, ಆದರೆ; ಈ ಸೋಲು ಮುಂದೆ ದೊಡ್ಡ ಗೆಲುವಿಗೆ ನಾಂದಿ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಕಾಂಗ್ರೆಸ್ ಸರಕಾರ ಗ್ಯಾರಂಟಿಗಳನ್ನು ಹೇಳಿ ಜನರಿಗೆ ಯಾಮಾರಿಸುತ್ತಿದೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಜನರ ಜತೆ ಪ್ರಾಮಾಣಿಕವಾಗಿ ನಿಂತರೆ ಅವರೇ ನಮ್ಮ ಪಕ್ಷಕ್ಕೆ ಶಕ್ತಿ ತುಂಬುತ್ತಾರೆ.

ಇಂಥ ಎಷ್ಟೋ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ. 1989ರಲ್ಲಿ ದೇವೇಗೌಡರು ಎರಡು ಕಡೆ ಸೋತರು. ಅದಾದ ಐದು ವರ್ಷದಲ್ಲಿ ಪಕ್ಷ ಪೂರ್ಣ ಪಡೆದು ಅವರು ಮುಖ್ಯಮಂತ್ರಿ ಆದರು. ಆಮೇಲೆ ಲೋಕಸಭೆ ಚುನಾವಣೆಯಲ್ಲಿ 16 ಕ್ಷೇತ್ರ ಗೆದ್ದು ದೇವೇಗೌಡರು ದೇಶದ ಪ್ರಧಾನಿಯೂ ಆದರು. 1999ರಲ್ಲಿ ನಮ್ಮ ಪಕ್ಷಕ್ಕೆ ಹತ್ತೇ ಕ್ಷೇತ್ರಗಳು ಬಂದವು. ನಂತರದ ಚುನಾವಣೆಯಲ್ಲಿ 58 ಶಾಸಕರನ್ನು ಗೆದ್ದಿತ್ತು. 2013ರಲ್ಲಿ 40 ಕ್ಷೇತ್ರಗಳಲ್ಲಿ ಪಕ್ಷ ಗೆದ್ದಿತ್ತು. ಇದೆಲ್ಲವನ್ನೂ ನಾವು ಅರ್ಥ ಮಾಡಿಕೊಳ್ಳಬೇಕು.

ಆತ್ಮಾವಲೋಕನ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರು ಸೇರಿದಂತೆ ಅಷ್ಟೂ ಜಿಲ್ಲೆಗಳ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ಈ ಸಭೆಯಲ್ಲಿ ಭಾಗಿಯಾಗಿದ್ದರು.

Tags: BJPBJP GovernmentCongress PartycongressvsbjpHD DevegowdaHDKJDSjdskarnatakalatestnewsmeetings with the leaders of 5 districtsPMModi
Previous Post

ಅಹವಾಲು ಸ್ವೀಕರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಒತ್ತಾಯ

Next Post

ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ

ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada