ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸರ್ಕಾರಕ್ಕೆ ಅಭಿವೃದ್ಧಿಗೆ ಹಣವಿಲ್ಲ. ಗ್ಯಾರಂಟಿ ಯೋಜನೆಗಳ ನಿರ್ವಹಣೆಗೆ ರಾಜ್ಯ ಸರ್ಕಾರ ಪರದಾಡುತ್ತಿದೆ ಎಂಬ ಬಿಜೆಪಿಯ (BJP) ಆರೋಪದ ನಡುವೆಯೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಭಿನ್ನ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಮಾರಸ್ವಾಮಿ (Kumaraswamy), ಗ್ಯಾರೆಂಟಿಗಳು ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿ ಹೊರೆಯಾಗಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದಿದ್ದಾರೆ.
ಆದ್ರೆ ರಾಜ್ಯ ಸರ್ಕಾರದಲ್ಲಿ ತಪ್ಪಾದ ಆರ್ಥಿಕತೆ ನಿರ್ವಹಣೆಯಿಂದ ಖಜಾನೆ ಖಾಲಿಯಾಗಿದೆ ಎಂದಿದ್ದಾರೆ. ಸದ್ಯ ರಾಜ್ಯ ಸರ್ಕಾರ ಸಾಲದ ಸುಳಿಗೆ ಸಿಲುಕಿದೆ. ಈ ಮೊದಲು ಕಾಂಗ್ರೆಸ್ ನವರು ಎಲ್ಲರಿಗೂ ಫ್ರೀ ಎಂದರು. ಆಮೇಲೆ ಷರತ್ತು ಎಂದರು. ಈಗ ನೋಡಿದರೆ ಸರ್ಕಾರದ ಮೇಲೆ ಹೊರೆ ತಪ್ಪಿಸಲು ಬಿಪಿಎಲ್ (BPL), ಎಪಿಎಲ್ (APL) ನಾಟಕ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.