• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜೆಡಿಎಸ್‌ ಪಕ್ಷ ಕಟ್ಟಲು ನಾನು ತುಂಬಾ ಕಷ್ಟಪಟ್ಟಿದ್ದೇನೆ – ಮತ್ತೊಮ್ಮೆ ಕಣ್ಣೀರು ಸುರಿಸಿದ ಹೆಚ್‌ಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
October 25, 2021
in ಕರ್ನಾಟಕ
0
ಜೆಡಿಎಸ್‌ ಪಕ್ಷ ಕಟ್ಟಲು ನಾನು ತುಂಬಾ ಕಷ್ಟಪಟ್ಟಿದ್ದೇನೆ – ಮತ್ತೊಮ್ಮೆ ಕಣ್ಣೀರು ಸುರಿಸಿದ ಹೆಚ್‌ಡಿಕೆ
Share on WhatsAppShare on FacebookShare on Telegram

ಸಕ್ರಿಯ ರಾಜಕಾರಣದಲ್ಲಿರುವ ರಾಜಕಾರಣಿಗಳಲ್ಲಿ ಸಾರ್ವಜನಿಕ ವೇದಿಕೆಗಳಲ್ಲಿ ಪದೇ ಪದೇ ಭಾವುಕರಾಗುವವರಲ್ಲಿ ಹೆಚ್‌ ಡಿ ಕೆ ಹಾಗೂ ಬಿಎಸ್‌ವೈ ಮುಂಚೂಣಿಯಲ್ಲಿರುವವರು. ಇದೀಗ, ಹೆಚ್‌ ಡಿ ಕುಮಾರಸ್ವಾಮಿ ಮತ್ತೆ ಸಾರ್ವಜನಿಕ ಸಭೆಯಲ್ಲಿ ಭಾವುಕರಾಗಿದ್ದಾರೆ.

ADVERTISEMENT

ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಿರುವುದು ಹಾಗೂ ತನ್ನ ವಿರುದ್ಧ ಝಮೀರ್‌ ಮೊದಲಾದವರು ನಡೆಸುತ್ತಿರುವ ತೀಕ್ಷ್ಣ ಟೀಕೆಗಳ ಕುರಿತಂತೆ ಹೆಚ್‌ಡಿಕೆ ಅವರು ಪ್ರತಿಕ್ರಿಯಿಸಿದ್ದಾರೆ.

ತುಮಕೂರಲ್ಲಿ ದೇವೇಗೌಡರು ಸೋಲಲು ಶ್ರೀನಿವಾಸ್ ಕಾರಣ. ರಾಜಕೀಯವಾಗಿ ಹೆಚ್​ ಡಿ ದೇವೇಗೌಡರನ್ನು ಮುಗಿಸಲು ಯಾರು ಯಾರ ಜತೆ ಸೇರಿದ್ದರು. ಮಧ್ಯರಾತ್ರಿ ಚಿತಾವಣೆ ಮಾಡಿದ್ದು ಕಾರ್ಯಕರ್ತರಿಗೆ ಗೊತ್ತಿದೆ ಎಂದು S.R. ಶ್ರೀನಿವಾಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಜೆಡಿಎಸ್‌ ಇಂದ ಹೊರ ಹೋಗುವ ತೀರ್ಮಾನ ಮಾಡಿದ್ದು ಶ್ರೀನಿವಾಸ್ ಅವರೇ, ಆದರೂ ನಮ್ಮಿಂದ ತಪ್ಪಾಗಿದೆ ಎಂದು ತೋರಿಸಲು ಶತಪ್ರಯತ್ನ ಮಾಡುತ್ತಿದ್ದಾರೆ.‌ ಅವರ ಬಗ್ಗೆ ನಾನು ಎಂದು ಮಾತನಾಡಿಲ್ಲ. ನನ್ನಿಂದ ಅವರಿಗೆ ಯಾವುದೇ ತೊಂದರೆಯಿಲ್ಲ. ನಾನೇನೂ ಅವರಿಗೆ ಪಕ್ಷ ಬಿಟ್ಟು ಹೋಗಿ ಎಂದು ಹೇಳಿಲ್ಲ. ಅವರೇ ಪಕ್ಷ ಬಿಟ್ಟು ಹೋಗುವ ತೀರ್ಮಾನ ಮಾಡಿದ್ದಾರೆ. ಅವರು ನಮ್ಮ ಪಕ್ಷದಲ್ಲೇ ಇರುತ್ತೇನೆ ಅಂದರೆ ಸಂತೋಷ ಎಂದು ಶ್ರೀನಿವಾಸ್ ಬಗ್ಗೆ H.D. ಕುಮಾರಸ್ವಾಮಿ ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಸೂಟ್​ಕೇಸ್ ತೆಗೆದುಕೊಂಡು ಚುನಾವಣೆ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್​ ಶಾಸಕ ಜಮೀರ್ ಅಹಮದ್​ ಖಾನ್​​ ಆರೋಪಕ್ಕೆ ತಿರುಗೇಟು ನೀಡುವ ವೇಳೆ ಭಾವುಕರಾದ ಹೆಚ್.ಡಿ.ಕುಮಾರಸ್ವಾಮಿ ʼಕುಮಾರಸ್ವಾಮಿಯನ್ನು ನಾವೇ ಸಾಕಿದ್ದು, ನಾವೇ ಬೆಳೆಸಿದ್ದು ಅಂತಾರೆ ಅವರು. 2013-14ರಿಂದ ನನ್ನ ಬಗ್ಗೆ ಅಪಪ್ರಚಾರ ಆರಂಭವಾಯಿತು. ಈ ಪಕ್ಷ ಕಟ್ಟಲು ನಾನು ಕಷ್ಟಪಟ್ಟಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಹೆಚ್​ಡಿ ಕುಮಾರಸ್ವಾಮಿ ಭಾವುಕರಾಗಿದ್ದಾರೆ.

ನಮ್ಮ ಕುಟುಂಬವು ಎಂದೂ ಹಣ ಇಟ್ಕೊಂಡು ರಾಜಕಾರಣ ಮಾಡಿಲ್ಲ. ಹಣಕಾಸಿನ ವಿಚಾರದಲ್ಲಿ ಪಂಚಾಯಿತಿ ನಡೆಯಿತು. ಆ ದೇವರು ಇದ್ದರೆ ನೋಡಿಕೊಳ್ತಾನೆ ಎಂದು ಹೆಚ್​ಡಿಕೆ ಗದ್ಗದಿತರಾದರು.

ಕುಮಾರಸ್ವಾಮಿ ಇಮೇಜ್ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ನಮ್ಮ ಜೊತೆ ಇದ್ರೆ ಅವರಿಗೆ ಉಪಯೋಗ ಆಗಲ್ಲ ಅಂದಿದ್ದಾರೆ. ಗೊಂದಲಗಳನ್ನ ಸೃಷ್ಟಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ನಮ್ಮಿಂದ ಯಾವುದೇ ರೀತಿಯ ಗೊಂದಲಗಳು ಆಗಿಲ್ಲ. ರಾಜಕಾರಣ ಮಾಡುವುದಾದರೆ ನೇರವಾಗಿ ಮಾಡಬೇಕು. ಹಿಂದೊಂದು ಮುಂದೊಂದು ಮಾತನಾಡುವುದು ಬೇಡ. ಯಾರಿಗೂ ನೋವು ತರಿಸಿಲ್ಲ, ಪ್ರೀತಿಯಿಂದ ನೋಡಿದ್ದೇನೆ ಎಂದು ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಹಿಂದೆಯೂ ಕುಮಾರಸ್ವಾಮಿ ಅವರು ಸಾರ್ವಜನಿಕವಾಗಿ ಕಣ್ಣೀರು ಸುರಿಸಿದ್ದರು. ಮೈತ್ರಿ ಸರ್ಕಾರ ಉರುಳಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾದು ಹಾಗೂ ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಸೋತಿರುವುದು ಅವರ ಕಣ್ಣೀರಿಗೆ ಕಾರಣವಾಗಿತ್ತು.

#WATCH JD(S) leader HD Kumaraswamy breaks down, in Mandya. Says "…I don't need politics, don't want CM post.I just want your love.I don't know why my son lost.I didn't want him to contest from Mandya but my own people from Mandya wanted him but didn't support him which hurt me" pic.twitter.com/reyhIsttPN

— ANI (@ANI) November 27, 2019
Tags: S.R. ಶ್ರೀನಿವಾಸ್ಎಚ್ ಡಿ ಕುಮಾರಸ್ವಾಮಿಜಮೀರ್ ಅಹಮದ್ ಖಾನ್ಜೆಡಿಎಸ್ಹೆಚ್‌ ಡಿ ಕುಮಾರಸ್ವಾಮಿಹೆಚ್ ಡಿ ದೇವೇಗೌಡಹೆಚ್‌ಡಿಕೆ
Previous Post

ಒಂದು ಕನ್ನಡ ಶಾಲೆಯ ಕತೆ-ವ್ಯಥೆ: 1.40 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾದರೂ ಶಾಲೆ ಪ್ರಾರಂಭಕ್ಕಿಲ್ಲ ಅನುಮತಿ: ಬೆಂಗಳೂರಿನತ್ತ ಗುಳೆ ಹೊರಟ ಬಾಲಕರು!

Next Post

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಬಂಧಿಸಿದ್ದ ಎನ್ ಸಿ ಬಿ ಅಧಿಕಾರಿ ವಿರುದ್ಧ ತನಿಖೆಗೆ ಆದೇಶ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಬಂಧಿಸಿದ್ದ ಎನ್ ಸಿ ಬಿ ಅಧಿಕಾರಿ ವಿರುದ್ಧ ತನಿಖೆಗೆ ಆದೇಶ

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಬಂಧಿಸಿದ್ದ ಎನ್ ಸಿ ಬಿ ಅಧಿಕಾರಿ ವಿರುದ್ಧ ತನಿಖೆಗೆ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada