ಕೇಂದ್ರ ಸಚಿವ ಹೆಚ್ಡಿಕೆ (HD kumaraswamy) ಮತ್ತು ಲೋಕಾಯುಕ್ತ ಎಸ್ಐಟಿಯ ಎಡಿಜಿಪಿ ಚಂದ್ರಶೇಖರ್ (Chandrashekar) ನಡುವೆ ವಾಕ್ಸಮರ ಮುಗಿಯುವಂತೆ ಕಾಣ್ಣಿಲ್ಲ, 20 ಕೋಟಿ ಡೀಲ್ ಆರೋಪ ಮಾಡಿದ್ದಕ್ಕೆ ಇಲಾಖೆ ಸಿಬ್ಬಂದಿಗೆ ಪತ್ರ ಬರೆಯುವ ಮೂಲಕ ಹೆಚ್ಡಿಕೆಗೆ ಠಕ್ಕರ್ ಕೊಟ್ಟಿದ್ದ ಚಂದ್ರಶೇಖರ್ಗೆ ಇದೀಗ ಅವರ ಸ್ಟೈಲ್ನಲ್ಲಿ ಮತ್ತೆ ಹೆಚ್ಡಿಕೆ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ನ (Congress) ಕೆಲ ಸಚಿವರು, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕುಮಾರಸ್ವಾಮಿ ಸರ್ಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ಹೆಚ್ಡಿಕೆ ತಿರುಗೇಟು ನೀಡಿದ್ದಾರೆ.
ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಚಂದ್ರಶೇಖರ್ ನನ್ನ ಸರ್ಕಾರದಲ್ಲಿ ಕೆಲಸ ಮಾಡಿದ್ದು ನಿಜ. ನಾನು ಇಲ್ಲವೆನ್ನುವುದಿಲ್ಲ. ಆದ್ರೆ ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುವ ನಿಮ್ಮ ನಿಕೃಷ್ಟ ಸ್ಥಿತಿ ನನಗೆ ಬಂದಿಲ್ಲ ಅಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೆಚ್ಡಿಕೆ ಕೆಂಡ ಕಾರಿದ್ದಾರೆ.