ಮಹಿಳೆಯ ಕಿಡ್ನಾಪ್ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ಮಾಜಿ ಸಚಿವ, ಶಾಸಕ ಹೆಚ್.ಡಿ. ರೇವಣ್ಣಗೆ ಬಿಟ್ಟು ಬಿಡದೇ ಬೆನ್ನು ನೋವು ಕಾಡುತ್ತಿದೆ. ಬೆನ್ನು ನೋವಿನ ಸಮಸ್ಯೆ ಸೇರಿದಂತೆ ಆರೋಗ್ಯದ ಕಾರಣವೊಡ್ಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಹೆಚ್.ಡಿ.ರೇವಣ್ಣಗೆ ಕೋರ್ಟ್ ಜಾಮೀನು ನಿರಾಕರಣೆ ಮಾಡಿದೆ.

ಈ ನಿಟ್ಟಿನಲ್ಲಿ ಸದ್ಯ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ರೇವಣ್ಣಗೆ ಜೈಲಿನ ಅಧಿಕಾರಿಗಳು ಬೆಡ್ ವ್ಯವಸ್ಥೆ ಮಾಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.