• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜೆಡಿಎಸ್‌ ಬೆಂಬಲ ಕೇಳಿದ ಬಿಎಸ್‌ವೈ : ಒಂದೆರಡು ದಿನದಲ್ಲಿ ನಿರ್ಧರಿಸುವುದಾಗಿ ಹೆಚ್‌.ಡಿ.ಕೆ ಭರವಸೆ!

Any Mind by Any Mind
November 28, 2021
in ಕರ್ನಾಟಕ, ರಾಜಕೀಯ
0
ಸಿದ್ಧರಾಮಯ್ಯನ ಬಳಿಕ RSS ಬೆನ್ನು ಬಿದ್ದ ಹೆಚ್‌ ಡಿ ಕುಮಾರಸ್ವಾಮಿ: ಸಂಘಕ್ಕೆ ಮಗ್ಗುಲ ಮುಳ್ಳಾಯಿತೇ HDKಯ ಈ ಬದಲಾವಣೆ ?
Share on WhatsAppShare on FacebookShare on Telegram

ಜೆಡಿಎಸ್‌ ಅಭ್ಯರ್ಥಿಗಳನ್ನು ಹಾಕದ ವಿಧಾನ ಪರಿಷತ್‌ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲ ನೀಡಬೇಕೆ ಅಥವಾ ತಟಸ್ಥವಾಗಿ ಉಳಿಯಬೇಕೆ ಎಂಬ ಬಗ್ಗೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ADVERTISEMENT

ಕೋಲಾರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, “ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜೆಡಿಎಸ್‌ ಜತೆ ಹೊಂದಾಣಿಕೆ ಪ್ರಸ್ತಾವನೆ ಮಾಡಿದ್ದೇನೆ. ಕುಮಾರಸ್ವಾಮಿ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಕೂಡ ಒಂದೆಡರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.

ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದೆ. ಬಿಜೆಪಿಗೆ ಬೆಂಬಲ ನೀಡುವುದಾಗಿ ಎಲ್ಲೂ ಹೇಳಿಲ್ಲ. ಆದರೆ, ಕೆಲವರು ಕುಮಾರಸ್ವಾಮಿ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆಂದು ತಪ್ಪಾಗಿ ಗ್ರಹಿಕೆ ಮಾಡಿದ್ದಾರೆಂದು ಅವರು ಸ್ಪಷ್ಟಪಡಿಸಿದರಲ್ಲದೆ, ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿಕ್ಕೆ ಯಾವ ತೀರ್ಮಾನ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದಿದ್ದಾರೆ.

ನಮ್ಮ ಗುರಿ 2023ರ ಚುನಾವಣೆ. ನಾವು ಆ ಕಡೆ ಗಮನ ಹರಿಸಿದ್ದೇವೆ. ಹೀಗಾಗಿ ಈ ಚುನಾವಣೆಯಲ್ಲಿ ಗೆಲ್ಲುವ ಅವಕಾಶ ಇರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬಿಜೆಪಿ ಜತೆ ಒಳಒಪ್ಪಂದ ಎನ್ನುವ ಆರೋಪ ಬಾಲಿಶ. ಯಡಿಯೂರಪ್ಪ ಅವರನ್ನು ಹೊರತುಪಡಿಸಿ ಈವರೆಗೆ ಆ ಪಕ್ಷದ ಇತರರು ಯಾರು ಕೂಡ ನಮ್ಮ ಬೆಂಬಲ ಕೇಳಿಲ್ಲ. ಈ ಅಂಶಗಳನ್ನು ಪರಿಗಣಿಸಿ ಎರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ಒಂದೆರಡು ಬಾರಿ ಮಹಾ ನಾಯಕರು ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರಾವರಿ ಸೌಲಭ್ಯ ನೀಡಲು ವಿರೋಧ ವ್ಯಕ್ತಪಡಿಸಿದ್ದೇನೆ ಎಂದು ಅವರು ಅಪಪ್ರಚಾರ ಮಾಡಿದ್ದಾರೆ. ಎರಡೂ ಜಿಲ್ಲೆಗಳಿಗೆ ನೀರು ಕೊಡುವ ವಿಚಾರದಲ್ಲಿ ನನ್ನದಷ್ಟೇ ಅಲ್ಲ, ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಅನೇಕ ಬಾರಿ ಹೇಳಿದ್ದೇನೆ. ಎರಡು ವರ್ಷದಲ್ಲಿ ಎತ್ತಿನಹೊಳೆ ನೀರು ಕೊಡುತ್ತೇವೆ ಎಂದು ಹೇಳಿದ್ದರು. ಈಗ ಎತ್ತಿನಹೊಳೆ ಯೋಜನೆ ಶುರುವಾಗಿ ಎಷ್ಟು ವರ್ಷ ಆಯಿತು? ಆಮೇಲೆ ಬೆಂಗಳೂರು ಕೊಳಚೆ ನೀರನ್ನು ಕೊಡಿ ಎಂದರು. ಆ ನೀರು ಕೊಡಲಿಕ್ಕೂ ನಾನು ವಿರೋಧ ಮಾಡಿಲ್ಲ. ಆದರೆ, ಖರ್ಚು ಎಷ್ಟೇ ಆಗಲಿ, ಟರ್ಸರಿ ಘಟಕ ಹಾಕಿ ಆ ನೀರನ್ನು ಪೂರ್ಣ ಶುದ್ಧ ಮಾಡಿ ಕೊಡಿ ಎಂದು ಹೇಳಿದ್ದೆ. ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಅದನ್ನೇ ಹೇಳಿದ್ದೇನೆ. ಒಂದು ಕಾಲದಲ್ಲಿ ಮಾರುಕಟ್ಟೆಗೆ ಕೋಲಾರದ ತರಕಾರಿ ತೆಗೆದುಕೊಂಡು ಹೋದರೆ ಮುಗಿಬಿದ್ದು ಕೊಳ್ಳುತ್ತಿದ್ದರು. ಈಗ ಪಕ್ಕಕ್ಕಿಡಿ ಎನ್ನುತ್ತಾರೆ. ಕಾರಣ ಬೆಂಗಳೂರು ಕೊಳಚೆ ನೀರಿನಿಂದ ಬೆಳೆಲಾಗುತ್ತಿರುವ ಬೆಳೆಗಳು. ಆ ಕೊಳಚೆ ನೀರನ್ನು ಟರ್ಸರಿ ಘಟಕದಲ್ಲಿ ಪೂರ್ಣವಾಗಿ ಶುದ್ಧೀಕರಿಸಿ ಕೊಟ್ಟಿದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.

ಇನ್ನು ಕೆರೆಗಳನ್ನು ಸಂಪೂರ್ಣವಾಗಿ ಹಾಳುಗೆಡವಲಾಗಿದೆ. ಈ ವರ್ಷ ಅತ್ಯುತ್ತಮ ಮಳೆಯಾಗಿದೆ. ಕೆರೆಗಳು, ಕಾಲುವೆಗಳನ್ನು ಸರಿ ಮಾಡಿಟ್ಟಿಕೊಂಡಿದ್ದಿದ್ದರೆ ಇನ್ನೆರಡು ವರ್ಷ ಎರಡೂ ಜಿಲ್ಲೆಗಳಲ್ಲಿ ನೀರಿಗೆ ಸಮಸ್ಯೆಯೇ ಆಗುತ್ತಿರಲಿಲ್ಲ. ಈಗ ಎಲ್ಲ ಕಡೆ ಮಳೆಯ ಪರಿಶುದ್ಧ ನೀರು ಕೊಳಚೆ ಎಲ್ಲ ಸೇರಿಬಿಟ್ಟಿದೆ. ಕೊಳವೆ ಬಾವಿಗಳಿಗೆ ವಿಷದ ನೀರು ಮರುಪೂರಣ ಆಗುತ್ತಿದೆ. ಇನ್ನು ನಾಲ್ಕೈದು ವರ್ಷಕ್ಕೆ ಅದರ ಪರಿಣಾಮ ಗೊತ್ತಾಗುತ್ತದೆ. ಇದಕ್ಕೆ ಯಾರು ಕಾರಣ? ಇಂಥ ವಿಷನೀರು ಜಿಲ್ಲೆಗಳಿಗೆ ಹರಿದು ಬರಲು ಕಾರಣರು ಯಾರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಎತ್ತಿನಹೊಳೆಯಲ್ಲಿ ಹಣ ಲೂಟಿ :

ಕೋಲಾರ-ಚಿಕ್ಕಬಳ್ಳಾಪುರಕ್ಕೆ ತಲಾ ಐದು ಟಿಎಂಸಿ ನೀರು ಕೊಡುತ್ತೇವೆ ಎಂದು ಹೇಳಿದ್ದ ಎತ್ತಿನಹೊಳೆ ಯೋಜನೆ ಎಲ್ಲಿದೆಯೋ ಈಗಲೂ ಅಲ್ಲಿಯೇ ಇದೆ. ಈವರೆಗೆ ಡಿಪಿಆರ್ ಆಗದೆ ಕೇವಲ ಲೇನ್ ಎಸ್ಟಿಮೇಟ್ ಆಧಾರದಲ್ಲಿ ಕಾಮಗಾರಿ ಮಾಡಲಾಗುತ್ತಿರುವ ಅವೆಜ್ಞಾನಿಕ ಯೋಜನೆಯಾಗಿದೆ. ಯಾವುದೇ ಬೃಹತ್ ಯೋಜನೆ ಮಾಡಬೇಕಿದ್ದರೆ ಮೊದಲು ಸಮಗ್ರ ಯೋಜನಾ ವರದಿಯನ್ನು ತಯಾರಿಸಬೇಕು. ಅದನ್ನು ಮಾಡಿಯೇ ಇಲ್ಲ. ದೇವರಾಯನ ದುರ್ಗದ ಬಳಿ ಹತ್ತು ಟಿಎಂಸಿ ನೀರು ಸಂಗ್ರಹ ಮಾಡುವ ಪ್ರಸ್ತಾವನೆ ಹೋಯಿತು. ಇದಾದ ಮೇಲೆ ಬೈರಗೊಂಡ್ಲು ಬಳಿ ಎರಡು ಟಿಎಂಸಿ ಸಂಗ್ರಹಗಾರ ಎಂದರು. ಯಾವುದನ್ನೂ ಸರಿಯಾಗಿ ಮಾಡುತ್ತಿಲ್ಲ. ಹತ್ತು ಟಿಎಂಸಿ ನೀರು ಎಲ್ಲಿಂದ ತರುತ್ತಾರೆ? . 2010ರಲ್ಲಿ ಯೋಜನಾ ಗಾತ್ರ 8,000 ಕೋಟಿ ರೂ., 2016ರಲ್ಲಿ 16,000 ಕೋಟಿ ರೂ. ಆಯಿತು, 2021ರಲ್ಲಿ 24,000 ಕೋಟಿ ರೂ.ಗಳಿಗೆ ಹೆಚ್ಚಿಸಿಕೊಳ್ಳಲು ಸರಕಾರ ಮುಂದಾಗಿದೆ. ಬಹುಶಃ ಇನ್ನೆರಡು ಮೂರು ವರ್ಷಕ್ಕೆ ೫೦,೦೦೦ ಕೋಟಿ ರೂ.ಗಳಿಗೆ ಏರಿಕೆ ಮಾಡಬಹುದು. ಇದು ಕೋಲಾರದ ಭಗೀರಥರ ಸಾಧನೆ. ಹೀಗಾಗಿ ಎತ್ತಿನಹೊಳೆ ಹಣ ಮಾಡುವ ಯೋಜನೆಯಾಗಿದೆಯೇ ವಿನಾ ನೀರು ಕೊಡುವ ಯೋಜನೆಯಲ್ಲ. ಮಹಾನಾಯಕರು ಎಲ್ಲ ಪಕ್ಷಗಳ ಮೇಲೆ ಮೋಡಿ ಮಾಡಿ, ಯಾರ ಯಾರನ್ನು ಎಲ್ಲೆಲ್ಲಿ ದಾರಿ ತಪ್ಪಿಸಿಕೊಂಡು ಬಂದಿದ್ದಾರೆ ಅವರು ದೂರಿದರು.

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಬೆಳೆ ನಷ್ಟವಾಗಿರುವ ರೈತರು ಪುನಾ ತಮ್ಮ ಬದುಕು ಕಟ್ಟಿಕೊಳ್ಳಬೇಕಾದರೆ ಎರಡು-ಮೂರು ವರ್ಷವಾದರೂ ಬೇಕಾಗಬಹುದು. ದ್ರಾಕ್ಷಿ, ಟೊಮೆಟೊ, ರಾಗಿ ಸೇರಿದಂತೆ ಎಲ್ಲ ಬೆಳೆಗಳು ಸಂಪೂರ್ಣ ನಾಶವಾಗಿವೆ. ಒಬ್ಬರು 5-6 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ ಎಂದು ಒಬ್ಬರು ಹೇಳಿದರೆ, ಇನ್ನೊಬ್ಬರು ಹತ್ತು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿದೆ ಎನ್ನುತ್ತಾರೆ. ಈ ಲೆಕ್ಕಕ್ಕೆ ತಾಳಮೇಳವಿಲ್ಲ. ಒಂದೊಂದು ಜಿಲ್ಲೆಯಲ್ಲಿ ಒಂದೊಂದು ಪರಿಸ್ಥಿತಿ ಇದೆ. ಸಿಎಂ ಒಂದು ದಿನ ಕೋಲಾರಕ್ಕೆ ಬಂದಿದ್ದಾರೆ. ಎಸ್ ಡಿಆರ್ ಎಫ್ ಅಥವಾ ಎನ್ಡಿ ಆರ್ ಎಫ್ ಪರಿಹಾರದಿಂದ ರೈತರಿಗೆ ನ್ಯಾಯ ಸಿಗದು. ಈ ಮಾರ್ಗಸೂಚಿಯನ್ನು ಬದಿಗಿಟ್ಟು ಸರಕಾರ ಪರಿಹಾರ ಕೊಡಬೇಕು ಎಂದು ಮಾಜಿ ಸಿಎಂ ಒತ್ತಾಯ ಮಾಡಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಲೆಗಳಲ್ಲಿ ಇಸ್ಕಾನ್‌ ಪ್ರತಿಷ್ಠಾಪನೆಗೆ ಹೊರಟ ಸರ್ಕಾರ : ಅಕ್ಷಯ ‘ಪಾತ್ರೆ’ಯೊಳಕ್ಕೆ ಬಿದ್ದ 8 ಶಾಲೆ!

Next Post

RSS ಮುಖ್ಯಸ್ಥ ಭಾಗವತ್ ಆಯ್ದ ಸಂಪಾದಕರು, ನಿರೂಪಕರೊಂದಿಗೆ ಖಾಸಗಿ ಸಭೆ ನಡೆಸಿದ್ದೇಕೆ?

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
RSS ಮುಖ್ಯಸ್ಥ ಭಾಗವತ್ ಆಯ್ದ ಸಂಪಾದಕರು, ನಿರೂಪಕರೊಂದಿಗೆ ಖಾಸಗಿ ಸಭೆ ನಡೆಸಿದ್ದೇಕೆ?

RSS ಮುಖ್ಯಸ್ಥ ಭಾಗವತ್ ಆಯ್ದ ಸಂಪಾದಕರು, ನಿರೂಪಕರೊಂದಿಗೆ ಖಾಸಗಿ ಸಭೆ ನಡೆಸಿದ್ದೇಕೆ?

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada