• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ HDK

ಪ್ರತಿಧ್ವನಿ by ಪ್ರತಿಧ್ವನಿ
April 16, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ HDK
Share on WhatsAppShare on FacebookShare on Telegram

2A ಸೌಲಭ್ಯ ಹಂಚಿಕೆ ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

ADVERTISEMENT

ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ

ನೇಮಕಾತಿ, ವೃತ್ತಿಪರ ಕೋರ್ಸ್ ಪ್ರವೇಶ ವಿಷಯ ಪ್ರಸ್ತಾಪ

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು ಟಾಂಗ್ ಕೊಟ್ಟಿರುವ ಕೇಂದ್ರ ಸಚಿವರು; ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ? ಸತ್ಯಮೇವ ಜಯತೇ.. ಎಂದು ಕುಟುಕಿದ್ದಾರೆ.

ನಿಮಗೂ ಗೊತ್ತು. 2A ಪ್ರವರ್ಗದಲ್ಲಿ 101 ಜಾತಿಗಳಿವೆ, 15% ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ ಎಂದು ಕೇಂದ್ರ ಸಚಿವರು ಕೇಳಿದ್ದಾರೆ.

UPI Video Girl: ಸ್ಕ್ಯಾಮ್‌ ಮಾಡುವವನನ್ನೇ ಬಕ್ರಾ ಮಾಡಿದ ಚಾಲಾಕಿ ಯುವತಿ..! #gril #scam #upiscam #pratidhvani

ನೇಮಕಾತಿ, ವೃತ್ತಿಪರ ಕೋರ್ಸ್ ಪ್ರವೇಶ ವಿಷಯ ಪ್ರಸ್ತಾಪ

ಕಳೆದ 15-20 ವರ್ಷಗಳಲ್ಲಿ A B C D ಗ್ರೂಪ್ ಗಳಲ್ಲಿ ನಡೆದಿರುವ ನೇಮಕಾತಿ, ವೃತ್ತಿಪರ ಕೋರ್ಸ್‌ ಪ್ರವೇಶ, ಇನ್ನಿತರೆ ಎಲ್ಲಾ ಸೌಲಭ್ಯಗಳ ಅಂಕಿ ಅಂಶ ಸುಳ್ಳು ಹೇಳುವುದಿಲ್ಲ, ಹೌದಲ್ಲವೇ? ಎಂದಿರುವ ಕುಮಾರಸ್ವಾಮಿ ಅವರು; ವೃತ್ತಿಪರ ಕೋರ್ಸ್‌; ಅಂದರೆ ಮೆಡಿಕಲ್, ಡೆಂಟಲ್, ಎಂಜಿನಿಯರಿಂಗ್, ಡಿ ಫಾರ್ಮ, ಬಿ ಫಾರ್ಮ, ಕೃಷಿ ಇತ್ಯಾದಿ ವಿಭಾಗಗಳಲ್ಲಿ 2A ಪ್ರವರ್ಗದ ನೂರೊಂದು ಜಾತಿಗಳಲ್ಲಿ ಯಾವ್ಯಾವ ಜಾತಿಯ ಎಷ್ಟೆಷ್ಟು ಮಕ್ಕಳಿಗೆ ಪ್ರವೇಶ ಸಿಕ್ಕಿದೆ. ಇಲ್ಲಿಯೂ ಸಿಂಹಪಾಲು ಪ್ರವೇಶ, ಲಾಭ ದಕ್ಕಿದ್ದು ಯಾರಿಗೆ? ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ (CET) ಸಮಗ್ರ ದತ್ತಾಂಶ ಲಭ್ಯವಿದೆ, ತಾವು ತರಿಸಿ ನೋಡಬಹುದು ಎಂದು ಚಾಟಿ ಬೀಸಿದ್ದಾರೆ.

2A ಪ್ರವರ್ಗದ ನೂರೊಂದು ಸಮಾಜಗಳ ಪೈಕಿ ಎಲ್ಲಾ ನೂರು ಸಮಾಜಗಳಲ್ಲಿ ನನ್ನ ಮನವಿ ಇಷ್ಟೇ; ಒಕ್ಕಲಿಗರು, ವೀರಶೈವ ಲಿಂಗಾಯತರ ಕಡೆ ಬೆರಳು ತೋರಿಸಿ ನಿಮ್ಮ ಮೂಗಿಗೆ ಬೆಣ್ಣೆ ಕೊಸರು ಸವರುತ್ತಿದ್ದಾರೆ! ನಿಮ್ಮ ನ್ಯಾಯಯುತ ಪಾಲಿನಲ್ಲಿ ಸಿಂಹಪಾಲು ಕಬಳಿಸಿದ್ದು ಯಾರೆಂದು ನಿಮಗೂ ಚೆನ್ನಾಗಿ ಗೊತ್ತು? ಆದರೂ ಸುಮ್ಮನಿದ್ದೀರಿ! ಯಾಕೆ? ನಿಮ್ಮ ಎದುರು ನಿಂತು ಲಿಂಗಾಯಿತರು, ಒಕ್ಕಲಿಗರನ್ನು ಬೈದರೇ ನಿಮ್ಮ ಹೊಟ್ಟೆ ತುಂಬುವುದೇ? ನಿಮ್ಮ ಮಕ್ಕಳಿಗೆ ನ್ಯಾಯ ಸಿಗುವುದೇ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಅತೀ ಹೆಚ್ಚು ಪಾಲು ಬೆಣ್ಣೆ ತಿಂದವರು ಯಾರು? ಈಗಲಾದರೂ ಸತ್ಯ ಹೇಳಿ ಸಿದ್ದರಾಮಯ್ಯನವರೇ.. ನಿಮ್ಮಿಂದ ಉತ್ತರ ನಿರೀಕ್ಷಿಸುತ್ತೇನೆ. ಸತ್ಯಮೇವ ಜಯತೇ.. ಸತ್ಯಕ್ಕೆ ಜಯವಾಗಲಿ ಎಂದು ಅವರು ಹೇಳಿದ್ದಾರೆ.

Tags: caste based reservationCaste Censuscaste census debatecaste census oppositioncaste census reportcaste data reportcaste reservation issuecaste survey indiacensus report protestct ravi controversyHDKkarnataka caste censuskarnataka leaders oppose censuspolitical controversy karnatakareservation to upper castesiddaramaiah non veg controvesysiddramaiah on non veg controversyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಶಾಸಕ ಶಿವಗಂಗಾ ಕ್ಯಾಬಿನೆಟ್ ಮಿನಿಸ್ಟರ್ ಅಲ್ಲ ..! ಸಾಮೂಹಿಕ ರಾಜಿನೇಮೆ ಬೆದರಿಕೆಗೆ ಸಿಎಂ ಡೈರೆಕ್ಟ್ ಕೌಂಟರ್ ! 

Next Post

2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? : ಸಿಎಂ ಸಿದ್ದು ವಿರುದ್ಧ ಹೆಚ್.ಡಿ.ಕೆ ಕೆಂಡಾಮಂಡಲ..! 

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? : ಸಿಎಂ ಸಿದ್ದು ವಿರುದ್ಧ ಹೆಚ್.ಡಿ.ಕೆ ಕೆಂಡಾಮಂಡಲ..! 

2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? : ಸಿಎಂ ಸಿದ್ದು ವಿರುದ್ಧ ಹೆಚ್.ಡಿ.ಕೆ ಕೆಂಡಾಮಂಡಲ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada