• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುದು ನನ್ನ ವಾಗ್ದಾನ : ಮಾಜಿ ಸಿಎಂ ಹೆಚ್‌ಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 5, 2022
in Uncategorized
0
ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುದು ನನ್ನ ವಾಗ್ದಾನ : ಮಾಜಿ ಸಿಎಂ ಹೆಚ್‌ಡಿಕೆ
Share on WhatsAppShare on FacebookShare on Telegram

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಅಣೆಕಟ್ಟೆ ತುಂಬಿ ಹರಿಯುತ್ತಿರುವ ದೃಶ್ಯ ಕಂಡು ನನ್ನ ಮನದುಂಬಿ ಬಂದಿದೆ. ಕುಡಿಯುವ ನೀರಿಲ್ಲದೆ ತತ್ತರಿಸಿದ್ದ ಈ ಭಾಗದ ಜನರಿಗೆ ಪರಿಶುದ್ಧ ನೀರು ಒದಗಿಸಲು 2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಯರಗೋಳ್ ಯೋಜನೆಗೆ ಒಪ್ಪಿಗೆ ನೀಡಿದ್ದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್‌ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಅಣೆಕಟ್ಟೆಗೆ ನೀರೆಲ್ಲಿಂದ ಬರುತ್ತದೆ ಎಂದು ಮೂಗು ಮುರಿದಿದ್ದವರು ಈಗೊಮ್ಮೆ ನೋಡಬೇಕು. ಅಲ್ಲಿ ಕಂಗೊಳಿಸುತ್ತಿರುವ ʼಜಲಸಿರಿʼ ನೋಡಲು ಎರಡು ಕಣ್ಣು ಸಾಲದು. ಕೋಲಾರ,ಮಾಲೂರು,ಬಂಗಾರಪೇಟೆ,ಕೆಜಿಎಫ್ ಸೇರಿ 4 ತಾಲೂಕುಗಳಿಗೆ ನೀರೊದಗಿಸುವ ಈ ಯೋಜನೆಯನ್ನು ರಾಜ್ಯ ಬಿಜೆಪಿ ಸರಕಾರ ಕೂಡಲೇ ಲೋಕಾರ್ಪಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಮ್ಮ ಪಕ್ಷವು ಜನತಾ_ಜಲಧಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗ ಕಳೆದ ಏ.24ರಂದು ನಾನೇ ಯರಗೋಳ್‌ʼಗೆ ತೆರಳಿ ಕಳಸಕ್ಕೆ ನೀರು ತುಂಬಿಕೊಂಡಿದ್ದೆ.ಆ ಕ್ಷಣ ನನ್ನ ಸಂತಸಕ್ಕೆ ಪಾರವೇ ಇರಲಿಲ್ಲ.ಬರಪೀಡಿತ ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂಥ ಇನ್ನಷ್ಟು ಯೋಜನೆಗಳ ಅಗತ್ಯವಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತೇವೆ. ಅಂದೇ ನಾನು ಮುಖ್ಯ ಎಂಜಿನೀಯರ್‌, ಸಂಬಂಧಿತ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಸ್ಥಳದಿಂದಲೇ ಸಂಪರ್ಕಿಸಿ,ತಕ್ಷಣವೇ ಈ ಯೋಜನೆ ಉದ್ಘಾಟಿಸುವಂತೆ ಆಗ್ರಹಿಸಿದ್ದೆ. ಪಂಪ್‌ ಅಳವಡಿಕೆ ಬಾಕಿ ಇದೆ ಎಂದು ಅವರು ಹೇಳಿದ್ದರು.ಗುತ್ತಿಗೆದಾರರಿಗೆ ಹಣ ಬಾಕಿ ಇದೆ ಎಂಬ ಮಾಹಿತಿಯೂ ಇದೆ. ಬಿಜೆಪಿ ಸರಕಾರದ ನಿರ್ಲಕ್ಷ್ಯದ ಪರಾಕಾಷ್ಠೆ ಇದು.

2006 ಮಾ.26ರಂದು ಬಾಗೇಪಲ್ಲಿಯ ಚಿತ್ರಾವತಿ ಅಣೆಕಟ್ಟೆ ಲೋಕಾರ್ಪಣೆ ಮಾಡಿದ ವೇಳೆ ಮಾಧ್ಯಮ ಮಿತ್ರರೊಬ್ಬರು ಯರಗೋಳ್‌ ಬಗ್ಗೆ ಕೇಳಿದ್ದ ಪ್ರಶ್ನೆ ನನ್ನ ಮನಸ್ಸಿಗೆ ನಾಟಿತು. ನಾನು ತಡ ಮಾಡದೇ ಅಧಿಕಾರಿಗಳ ಜತೆ ಚರ್ಚಿಸಿ ಯರಗೋಳ್‌ ಯೋಜನೆಗೆ ಒಪ್ಪಿಗೆ ಕೊಟ್ಟು ಬಜೆಟ್‌ʼನಲ್ಲೇ 50 ಕೋಟಿ ರೂ. ಅನುದಾನ ಮೀಸಲಿಟ್ಟೆ. ನನ್ನ ಸರಕಾರದ ನಂತರ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ತಲಾ 5 ವರ್ಷ ಆಡಳಿತ ನಡೆಸಿದರೂ ಯೋಜನೆ ಪೂರ್ಣವಾಗಲಿಲ್ಲ.‌ 3 ವರ್ಷದಿಂದ ಬಿಜೆಪಿ ಸರಕಾರಕ್ಕೆ ಯರಗೋಳ್‌ ಕಡೆ ಚಿತ್ತವೇ ಇಲ್ಲ. ಅಣೆಕಟ್ಟಿಗೆ ಪಂಪು ಜೋಡಿಸುವುದರಲ್ಲೇ ವರ್ಷಗಳನ್ನೇ ನುಂಗುತ್ತಿದೆ. ಬರಪೀಡಿತ ಜಿಲ್ಲೆಗಳೆಂದರೆ ಬಿಜೆಪಿಗೆ ಅಪಥ್ಯ! ಇದು ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ.

ನನ್ನ ಸರಕಾರದ ನಂತರ @BJP4Karnataka, @INCKarnataka ಪಕ್ಷಗಳು ತಲಾ 5 ವರ್ಷ ಆಡಳಿತ ನಡೆಸಿದರೂ ಯೋಜನೆ ಪೂರ್ಣವಾಗಲಿಲ್ಲ.‌ 3 ವರ್ಷದಿಂದ @BJP4Karnataka ಸರಕಾರಕ್ಕೆ ಯರಗೋಳ್‌ ಕಡೆ ಚಿತ್ತವೇ ಇಲ್ಲ. ಅಣೆಕಟ್ಟಿಗೆ ಪಂಪು ಜೋಡಿಸುವುದರಲ್ಲೇ ವರ್ಷಗಳನ್ನೇ ನುಂಗುತ್ತಿದೆ. ಬರಪೀಡಿತ ಜಿಲ್ಲೆಗಳೆಂದರೆ ಬಿಜೆಪಿಗೆ ಅಪಥ್ಯ! ಇದು ನಾಚಿಕೆಗೇಡು.6/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 4, 2022

ನೆರೆ ರಾಜ್ಯಗಳ ಜತೆ ನೀರಿಗಾಗಿ ಗುದ್ದಾಡುವ ಸರಕಾರಕ್ಕೆ ಮಳೆ ನೀರಿನ ಕನಿಷ್ಠ ಪ್ರಜ್ಞೆಯೇ ಇಲ್ಲ. ಬದಲಿಗೆ ಬೆಂಗಳೂರಿನ ವಿಷತ್ಯಾಜ್ಯ ನೀರನ್ನು ಅರೆಬರೆ ಸಂಸ್ಕರಿಸಿ ಹರಿಸುತ್ತಿದೆ. ಈ ಜಿಲ್ಲೆಗಳನ್ನು ಭವಿಷ್ಯದಲ್ಲಿ ರಾಜ್ಯದ ಅತಿದೊಡ್ಡ ʼಆನಾರೋಗ್ಯ ಕೂಪʼವನ್ನಾಗಿ ಮಾಡಲೊರಟಿದೆ. ಈ ಜಿಲ್ಲೆಯ ʼಸ್ವಯಂಘೋಷಿತ ಭಗೀರಥʼರ ಹುನ್ನಾರವೂ ಇದೇ!

ಕೆಲ ವರ್ಷದಿಂದ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸಮೃದ್ಧ ಮಳೆ ಆಗುತ್ತಿದೆ. ಕೆರೆಗಳಲ್ಲಿ ಮಳೆನೀರು ನಿಲ್ಲದೆ, ಪಕ್ಕದ ಆಂಧ್ರ, ತಮಿಳುನಾಡು ಪಾಲಾಗುತ್ತಿದೆ. ಗುತ್ತಿಗೆದಾರರ ಜೇಬು ತುಂಬಿಸಲು ರಾಷ್ಟ್ರೀಯ ಪಕ್ಷಗಳ ಜನವಿರೋಧಿ ಸರಕಾರಗಳು KC ವ್ಯಾಲಿ, HN ವ್ಯಾಲಿಯಂಥ ಕೆಟ್ಟ ಯೋಜನೆಗಳನ್ನು ರೂಪಿಸಿ ಹಣ ಲೂಟಿ ಹೊಡೆಯುತ್ತಿವೆ. ಕೆರೆಕಟ್ಟೆ,ಕಾಲುವೆ,ಗೋಕುಂಟೆಗಳಂಥ ಸಾಂಪ್ರದಾಯಿಕ ಜಲಮೂಲಗಳನ್ನು ನಾಶಗೊಳಿಸಿ ಕಾಗದದ ಮೇಲಷ್ಟೇ ಬಣ್ಣಬಣ್ಣವಾಗಿ ಕಾಣುವ, ದುಡ್ಡು ಹೊಡೆಯುವ ಯೋಜನೆಗಳು ಇನ್ನಾದರೂ ನಿಲ್ಲಲಿ. ಈ ಜಿಲ್ಲೆಗಳನ್ನು ʼಶಾಶ್ವತ ಮರುಭುಮಿʼ ಮಾಡುವುದು ಬೇಡ. ಮಳೆ ನೀರನ್ನು ಸದ್ಬಳಕೆ ಮಾಡಿಕೊಂಡರೆ ಬರಪೀಡಿತ ಜಿಲ್ಲೆಗಳ ಬವಣೆ ನೀಗುತ್ತದೆ.

ಶೀಘ್ರದಲ್ಲೇ ನಾನು ಯರಗೋಳ್‌ ಅಣೆಕಟ್ಟೆಗೆ ಭೇಟಿ ನೀಡುತ್ತೇನೆ. ಗಂಗಾ ಮಾತೆಗೆ ಪೂಜೆ ಸಲ್ಲಿಸಿ ಬಾಗೀನ ಸಮರ್ಪಿಸುತ್ತೇನೆ. ಕೋಲಾರ,ಚಿಕ್ಕಬಳ್ಳಾಪುರದಲ್ಲಿ ಮಳೆನೀರು ಉಳಿಸಿ,ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುವುದು ನನ್ನ ವಾಗ್ದಾನ. ಪಂಚರತ್ನ ಕಾರ್ಯಕ್ರಮದಲ್ಲಿ ಇದನ್ನು ಸೇರ್ಪಡೆ ಮಾಡಲಾಗುವುದು ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

10 ಸಾವಿರಕ್ಕು ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ ಉಳಿಸಿಕೊಂಡ ಸುಪ್ರೀಂ ಕೋರ್ಟ್

Next Post

ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?

Related Posts

Uncategorized

DK Shivakumar: ಪಕ್ಷ ನನಗೆ ಸಂಘಟನೆ ಜವಾಬ್ದಾರಿ ಹಾಗೂ ಡಿಸಿಎಂ ಸ್ಥಾನ ನೀಡಿದ್ದು, ನನ್ನ ಗಮನ ಅವುಗಳತ್ತ ಮಾತ್ರ ಇದೆ..

by ಪ್ರತಿಧ್ವನಿ
July 11, 2025
0

ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲ್ಲ. “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ...

Read moreDetails
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
Next Post
ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?

ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada