ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಇಷ್ಟು ಮತಪ್ರಚಾರದಲ್ಲಿ ಬ್ಯುಸಿಯಾಗಿದ್ದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ. ವಿಶ್ರಾಂತಿಗಾಗಿ ಹೆಚ್ಡಿಕೆ ಸಿಂಗಾಪುರಕ್ಕೆ ಹಾರಿದ್ದಾರೆ.

ಮೇ 13ರಂದು ಚುನಾವಣಾ ಫಲಿತಾಂಶದ ದಿನದಂದು ಹೆಚ್ಡಿ ಕುಮಾರಸ್ವಾಮಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ .
ಇನ್ನು ಇದಕ್ಕು ಮುನ್ನ ಕೇತಗಾನಹಳ್ಳಿಯಲ್ಲಿ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, ನನಗೆ ಈ ಬಾರಿ ಅಭ್ಯರ್ಥಿಗಳಿಗೆ ಹಣ ನೀಡೋಕೂ ಆಗಲಿಲ್ಲ. ನಮ್ಮ ಪಕ್ಷಕ್ಕೆ ಈ ಬಾರಿ ಚುನಾವಣಾ ಪ್ರಚಾರಕ್ಕೆ ಹಣದ ಕೊರತೆಯಾಗಿದೆ. ಆದರೂ ನಾವು ಬಹುಮತದೊಂದಿಗೆ ಅಧಿಕಾರ ಗದ್ದುಗೆ ಏರಲಿದ್ದೇವೆ ಎಂದಿದ್ದಾರೆ .