ಇಂಡಿಯಾ v/s ಪಾಕಿಸ್ತಾನ (India v/s Pakistan) ನಡುವಿನ ಚಾಂಪಿಯನ್ ಟ್ರೋಫಿ (Champions trophy) ಪಂದ್ಯ ಕುತೂಹಲ ಕೆರಳಿಸಿದೆ. ಈಗಾಗಲೇ ಪಾಕಿಸ್ತಾನ 242 ರನ್ ಗಳಿಗೆ ಆಲ್ ಔಟ್ ಆಗಿದ್ದು, ಪಾಕ್ ಮೇಲೆ ಭಾರತ ಗೆದ್ದು ಸೇಡು ತೀರಿಸಿಕೊಳ್ಳಬೇಕು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನದಾಸೆಯಾಗಿದೆ.

ಈ ಮಧ್ಯೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕೂಡ ರಿಲ್ಯಾಕ್ಸ್ ಮೂಡ್ ನಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದಾರೆ. ಸದ್ಯ ಬೆಂಗಳೂರಿನ ತಮ್ಮ ನಿವಾಸದಲ್ಲೇ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇಂದು ಭಾರತ – ಪಾಕಿಸ್ತಾನ ನಡುವಿನ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ವೀಕ್ಷಣೆ ಮಾಡುತ್ತಾ ಉತ್ತಮ ಸಮಯ ಕಳೆಯುತ್ತಿರುವ ಕುಮಾರಸ್ವಾಮಿ ಭಾರತ ಗೆದ್ದು ಬೀಗಲಿ ಎಂದು ಆಶಿಸಿದ್ದಾರೆ.