ರಾಮನಗರ : ಜೆಡಿಎಸ್ ಭದ್ರಕೋಟೆ ರಾಮನಗರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇವರು ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡ್ತಿದ್ದಾರೆ. ಒಂದು ದಿನ ಭಾಷಣ ಮಾಡಿ ಹೋಗಬಹುದಲ್ವಾ..? ಮೋದಿನಾದರೂ ಕರೆಸಲಿ, ಅಮೆರಿಕ ಅಧ್ಯಕ್ಷರನ್ನಾದರೂ ಕರೆಸಲಿ ನಂಗೆ ಯಾವುದೇ ಆತಂಕ ಇಲ್ಲ ಎಂದು ಹೇಳಿದ್ದಾರೆ.
ಮಂಡ್ಯ, ತುಮಕೂರು, ಮೈಸೂರಿನಿಂದ ಜನರನ್ನು ಕರೆಸಬಹುದು. ಕೇಂದ್ರ ಸಚಿವ ಅಮಿತ್ ಶೋ ರೋಡ್ ಶೋ ಕೂಡ ನಾನು ನೋಡಿದ್ದೇನೆ. ಆದರೆ ನಾಲ್ಕು ತಿಂಗಳಿಂದ ನಾವು ನಡೆಸಿದ ರೋಡ್ ಶೋಗಳ ಮುಂದೆ ಇದ್ಯಾವ ಲೆಕ್ಕ ಎಂದು ವ್ಯಂಗ್ಯವಾಡಿದ್ದಾರೆ.