• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂತ್ರಸ್ತ ಮಹಿಳೆಯರಿಗೆ SIT ಅಧಿಕಾರಿಗಳ ಹಿಂಸೆ, ವೇಶ್ಯಾವಾಟಿಕೆ ಕೇಸ್ ಹಾಕುವ ಬೆದರಿಕೆ : ಮಾಜಿ ಸಿಎಂ HDK

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೆಲವೇ ದಿನಗಳಲ್ಲಿ ಜೆಡಿಎಸ್ ಕಣ್ಮರೆ : ಕೈ ಮುಖಂಡ ರಮೇಶ್ ಬಾಬು ತೀವ್ರ ವಾಗ್ದಾಳಿ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್‌ ಸರಕಾರಕ್ಕೆ ಅನುಕೂಲ ಆಗುವ ರೀತಿಯಲ್ಲಿ ಹೇಳಿಕೆ ನೀಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಎಸ್ಐಟಿ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಸಂತ್ರಸ್ತ ಮಹಿಳೆ ಒಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.ಈ ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಸಚಿವ ಕೃಷ್ಣ ಬೈರೇಗೌಡರೇ.. ಈಗ ಏನು‌ ಹೇಳುತ್ತೀರಿ? ಕಂಡ ಕಂಡವರ ಮನೆ ಬಾಗಿಲಿಗೆ ಹೋಗಿ ಬೆದರಿಕೆ ಹಾಕುತ್ತಿದ್ದೀರಿ. ನಿಮ್ಮ ತನಿಖಾ ತಂಡದ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿರುವುದು ಸುಳ್ಳೇ? ಎಲ್ಲೆಲ್ಲಿ ಏನೆಲ್ಲಾ ನಿಮ್ಮ ಅಧಿಕಾರಿಗಳು ಮಾಡುತ್ತಿದ್ದಾರೆ ಎನ್ನುವ ಮಾಹಿತಿ ನನಗೂ ಬರುತ್ತಿದೆ. ನಾವು ಹೇಳಿದ ಹಾಗೆಯೇ ಹೇಳಿಕೆ ಕೊಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ನಿಮ್ಮ ಅಧಿಕಾರಿಗಳು ಬೆದರಿಕೆ ಹಾಕುತ್ತಿಲ್ಲವೇ? ನಿಜ ಹೇಳಿ. ಇದೇನಾ ತನಿಖೆ ನಡೆಸುವ ರೀತಿ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ರಕ್ಷಣೆ ಮಾಡಿರುವ ಮಹಿಳೆಯನ್ನು ಎಲ್ಲಿ ಇಟ್ಟಿದ್ದೀರಿ?

ಹಾಸನ ಅಶ್ಲೀಲ ವಿಡಿಯೋಗಳು ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಬಗ್ಗೆ ಕೃಷ್ಣಭೈರೇಗೌಡರು ಮಾಡಿರುವ ಟೀಕೆಗಳಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಅವರು; ಕಿಡ್ನಾಪ್ ಪ್ರಕರಣದಲ್ಲಿ ರಕ್ಷಣೆ ಮಾಡಿರುವ ಆ ಮಹಿಳೆಯನ್ನು ಎಲ್ಲಿ ಇಟ್ಟಿದ್ದೀರಿ ಎಂದು ಪ್ರಶ್ನಿಸಿದರು.ಕಿಡ್ನಾಪ್ ಆಗಿದ್ದಾರೆನ್ನಲಾದ ಮಹಿಳೆಯನ್ನು ರಕ್ಷಣೆ ಮಾಡಿದ್ದೇವೆ ಎಂದು ಹೇಳಿದ್ದೀರಿ. ಎಲ್ಲಿ ರಕ್ಷಣೆ ಮಾಡಿದಿರಿ ಅವರನ್ನು? ಆ ಮಹಿಳೆಯನ್ನು ಈಗ ಎಲ್ಲಿ ಇರಿಸಿದ್ದೀರಿ? ಇದುವರೆಗೂ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೇಳಿಕೆ ಕೊಡಿಸಲಿಲ್ಲ ಯಾಕೆ? ಎಂದು ಅವರು ಸರಣಿ ಪ್ರಶ್ನೆಗಳನ್ನು ಕೇಳಿದರು. ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಕರೆದು ಕೊಂಡು ಬಂದಿದ್ದೀರಿ. ಜಾಮೀನು ಪಡೆಯಲು ಹೋದ ವಕೀಲರನ್ನು ಕರೆದುಕೊಂಡು ಬಂದಿದ್ದೀರಾ.. ಕಿಡ್ನಾಪ್ ಗೆ ಒಳಪಟ್ಟರೆನ್ನಲಾದ ಹೆಣ್ಣುಮಗಳನ್ನೂ ಕರೆದುಕೊಂಡು ಬಂದಿದ್ದೀರಿ. ಅವರಿಂದ ಏನು ಹೇಳಿಕೆ ಪಡೆದಿದ್ದೀರಿ? ಎಲ್ಲಿಂದ ಆಕೆಯನ್ನು ಕರೆದುಕೊಂಡು ಬಂದಿದ್ದೀರಿ? ಎಂದು ನೇರ ಪ್ರಶ್ನೆಗಳನ್ನು ಕೇಳಿದರು ಅವರು.

ಒಕ್ಕಲಿಗ ಸಚಿವರು, ಸಂಸದರು, ಶಾಸಕರು ನನ್ನ ವಿರುದ್ಧ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಅವರ ಉದ್ದೇಶ ಇರುವುದು ನೊಂದವರಿಗೆ ನ್ಯಾಯ ಕೊಡಿಸುವುದಲ್ಲ. ನನ್ನ ವಿರುದ್ಧ ದಾಳಿ ಮಾಡುವುದಷ್ಟೇ ಅವರ ಗುರಿ. ಅವರು ಪೆನ್ ಡ್ರೈವ್ ಗಳನ್ನು ಹಂಚಿಕೆ ಮಾಡಿದ ತಮ್ಮ ಪಕ್ಷದ, ಸರಕಾರದ ʼಖಳನಾಯಕʼನನ್ನು ರಕ್ಷಣೆ ಮಾಡಿಕೊಳ್ಳಲು ಜಾತಿ ಅಸ್ತ್ರ ಬಳಕೆ ಮಾಡಿದ್ದಾರೆ. ನಾನು ಅಂತಹ ಕೆಲಸ ಮಾಡಲ್ಲ. ಇಲ್ಲಿ ನಾನು ಜಾತಿಯನ್ನು ಎಳೆದು ತರುವುದಿಲ್ಲ. ಏಕಾಂಗಿಯಾಗಿಯೇ ಇದೆಲ್ಲವನ್ನೂ ಎದುರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.

Tags: #sandalwood #kannadacinemaindustry #rockingstaryash #radhikapandith #socialmedia #videoviral #pratidhvani #pratidhvanidigital #pratidhvaninewsPrajwal Revannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ

Next Post

SSLC EXAM – 2 ಟೈಂ ಟೇಬಲ್ ರಿಲೀಸ್

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
SSLC EXAM – 2 ಟೈಂ ಟೇಬಲ್ ರಿಲೀಸ್

SSLC EXAM - 2 ಟೈಂ ಟೇಬಲ್ ರಿಲೀಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada