
ಮಳೆ ಹಾಗೂ ಬೆಣ್ಣೆತೊರ ನದಿ ನೀರಿನ ಪ್ರವಾಹಕ್ಕೆ ತುತ್ತಾಗಿರುವ ಕಾಳಗಿ ತಾಲೂಕಿನ ಮಲಘಾಣ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಕಾಳಗಿ ಹಾಗೂ ಚಿತ್ತಾಪುರ ತಾಲೂಕಿನ ಮಳೆ ಹಾಗೂ ಪ್ರವಾಹಕ್ಕಿಡಾಗಿದ್ದು, ಗ್ರಾಮಗಳ ವಸ್ತುಸ್ಥಿತಿ ಕುರಿತು ಸಮಗ್ರ ವರದಿಯನ್ನು ವಾರದೊಳಗೆ ಸಲ್ಲಿಸುವಂತೆ ಜಿಪಂ ಸಿಇಒ ಭಂವರ್ ಸಿಂಗ್ ಮೀನಾ ಅವರಿಗೆ ಸಚಿವರು ಆದೇಶ ನೀಡಿದರು.

ಗ್ರಾಮದ ಬಳಿಯ ಜಮೀನೊಂದರಲ್ಲಿ ಹಾನಿಗೊಳಗಾದ ಕಬ್ಬು ಬೆಳೆಯನ್ನು ಪರಿಶೀಲಿಸಿದ ಸಚಿವರು ತಾಲೂಕಿನಲ್ಲಿ ಹಾನಿಗೊಳಗಾದ ಕೃಷಿ ಬೆಳೆಗಳ ಹಾನಿ ಬಗ್ಗೆ ಸಮಗ್ರವಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ಅವರಿಗೆ ಆದೇಶಿಸಿದರು.









