• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಣಿಗಲ್ ಜನರ ನ್ಯಾಯಯುತ ಪಾಲಿನ ನೀರಿಗೆ ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಅನಿವಾರ್ಯ: ಶಾಸಕ ಡಾ. ಎಚ್.ಡಿ. ರಂಗನಾಥ್

ಪ್ರತಿಧ್ವನಿ by ಪ್ರತಿಧ್ವನಿ
June 1, 2025
in Top Story, ಕರ್ನಾಟಕ
0
ಕುಣಿಗಲ್ ಜನರ ನ್ಯಾಯಯುತ ಪಾಲಿನ ನೀರಿಗೆ ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಅನಿವಾರ್ಯ: ಶಾಸಕ ಡಾ. ಎಚ್.ಡಿ. ರಂಗನಾಥ್
Share on WhatsAppShare on FacebookShare on Telegram

“ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು ಪಡೆಯಲು ವಂಚಿತವಾಗಿದ್ದು, ಈ ಪಾಲಿನ ನೀರು ಪಡೆಯಲು ಲಿಂಕ್ ಕೆನಾಲ್ ಯೋಜನೆ ಅನಿವಾರ್ಯ. ಇದಕ್ಕಾಗಿ ಉಗ್ರ ಹೋರಾಟಕ್ಕೂ ಸಿದ್ಧ” ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್ ತಿಳಿಸಿದ್ದಾರೆ.

ADVERTISEMENT

“ವೈ.ಕೆ. ರಾಮಯ್ಯ ಅವರ ಹೋರಾಟದ ಫಲವಾಗಿ ತುಮಕೂರು ಜಿಲ್ಲೆಯು ಹೇಮಾವತಿ ನೀರಿನ ಶೇ.49 ರಷ್ಟು ಪಾಲನ್ನು ಪಡೆಯುತ್ತಿದೆ. ಹೇಮಾವತಿ ಹೋರಾಟದ ತವರು ಕುಣಿಗಲ್ ತಾಲೂಕು. ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಟ್ಟ ಮೂಲ ಫಲಾನುಭವಿಗಳಾಗಿದ್ದರೂ ತಾಲೂಕು ತನ್ನ ಪಾಲಿನ ನೀರು ಪಡೆಯಲು ಸಾಧ್ಯವಾಗಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ನಮಗೆ ಹರಿದಿರುವುದು ಕೇವಲ 300- 500 ಎಂಸಿಎಫ್ ನೀರು ಮಾತ್ರ. ಅಂದರೆ ಶೇ. 90 ನೀರು ನಮಗೆ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಅನ್ಯಾಯ ಸರಿಪಡಿಸಿ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಹರಿಸಲು 2018ರಲ್ಲಿ ಈ ಲಿಂಕ್ ಕೆನಾಲ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಯಿತು. ಹಲವಾರು ಕಾರಣಗಳಿಂದಾಗಿ ಕಾಮಗಾರಿಯು ವಿಳಂಭವಾಗಿತ್ತು. ಈ ಎಲ್ಲಾ ಅಡೆ-ತಡೆಗಳನ್ನು ಮೀರಿ ಕಾಮಗಾರಿಯು ಪ್ರಾರಂಭವಾಗಿ ಕುಣಿಗಲ್ ಜನತೆಯ ದಶಕಗಳ ಕನಸು ನನಸಾಗುವ ಹೊತ್ತಿನಲ್ಲಿ ಈ ಯೋಜನೆ ವಿರೋಧಿಸಿ ಹೋರಾಟಗಳು ನಡೆಯುತ್ತಿರುವುದು ವಿಷಾದನೀಯ ಸಂಗತಿ” ಎಂದು ಹೇಳಿದ್ದಾರೆ.

“ಕುಣಿಗಲ್ ತಾಲೂಕಿನ ಜನ ತನ್ನ ಪಾಲಿನ ನೀರು ಸಿಗದೇ ಇದ್ದರೂ, ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಡದೇ ಇರುವ ಜಿಲ್ಲೆಯ ಕೆಲವು ತಾಲ್ಲೂಕುಗಳ ಭಾಗಗಳಿಗೆ ಕುಡಿಯುವ ನೀರಿಗಾಗಿ ಹೇಮಾವತಿ ನೀರನ್ನು ಹಂಚಿಕೆ ಮಾಡಿದಾಗಲೂ ಯಾವುದೇ ವಿರೋಧ ವ್ಯಕ್ತಪಡಿಸದೇ ಔದಾರ್ಯತೆ ತೋರಿ ಸೌಹಾರ್ದತೆ ಮೆರೆದಿದ್ದರು. ಆದರೆ ಇಂದು ನಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ಅಡ್ಡಿಯುಂಟು ಮಾಡುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ” ಎಂದು ತಿಳಿಸಿದ್ದಾರೆ.

#watch kannadiga auto driver: ಇದೇ ಕೆಲಸ ಆ ಚಾಲಕ ಆಕೆಗೆ ಮಾಡಿದ್ರೆ.? #auto #autodriver #pratidhvani

ಈ ಲಿಂಕ್ ಕೆನಾಲ್ ಪೈಪ್‌ಲೈನ್ ಕಾಮಗಾರಿಯನ್ನು ಕೇವಲ ಕುಣಿಗಲ್ ತಾಲ್ಲೂಕಿಗೆ ಹಂಚಿಕೆಯಾಗಿರುವ 388 ಕ್ಯೂಸೆಕ್ಸ್ ನೀರು ಮಾತ್ರ ಹರಿಸಲು ಸಾಧ್ಯವಾಗುವಂತೆ ಮಾತ್ರ ವಿನ್ಯಾಸಗೊಳಿಸಲಾಗಿದ್ದು, ಕುಣಿಗಲ್ ತಾಲ್ಲೂಕಿನ ಪಾಲಿನ ನೀರನ್ನು ಮಾತ್ರ ಕುಣಿಗಲ್ ತಾಲ್ಲೂಕಿಗೆ ಹರಿಸುವುದು ಲಿಂಕ್ ಕೆನಾಲ್ ಕಾಮಗಾರಿಯ ಏಕೈಕ ಉದ್ದೇಶವ. ಇದರಿಂದ ಜಿಲ್ಲೆಯ ಇತರೇ ತಾಲ್ಲೂಕುಗಳ ಪಾಲಿನ ನೀರಿಗೆ ಯಾವುದೇ ದಕ್ಕೆಯಾಗುವುದಿಲ್ಲ. ಇದೇ ವಿಚಾರವಾಗಿ ಅಧ್ಯಯನಕ್ಕಾಗಿ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯು ಸಹ ಈ ಯೋಜನೆ ಅಗತ್ಯತೆ ಹಾಗೂ ಇತರೆ ತಾಲೂಕಿನ ನೀರಿಗೆ ಧಕ್ಕೆಯಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು” ಎಂದಿದ್ದಾರೆ.

“ಕೆಲವು ಪಟ್ಟಭದ್ರರು ತಮ್ಮ ರಾಜಕೀಯ ಸ್ವಹಿತಾಸಕ್ತಿಗಳಿಗೆ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಾ, ಜಿಲ್ಲೆಯ ಜನತೆಯ ಮಧ್ಯೆ ದ್ವೇಷದ ಬೀಜ ಬಿತ್ತಲು ಮುಂದಾಗಿದ್ದಾರೆ. ಜಿಲ್ಲೆಯ ರೈತ ಬಾಂಧವರು ಮತ್ತು ಸಂಘ-ಸಂಸ್ಥೆಗಳು ಇಂತಹ ರಾಜಕೀಯ ಸ್ವಹಿತಾಸಕ್ತಿಯ ಅಪಪ್ರಚಾರಗಳಿಗೆ ಕಿವಿಗೊಡದೇ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಂಡಿರುವ ಲಿಂಕ್ ಕೆನಾಲ್ ಕಾಮಗಾರಿಗೆ ಅಡ್ಡಿಪಡಿಸದೇ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಈ ಯೋಜನೆ ಜಾರಿಗೆ ಸರಿಯಾಗಿ ಸಹಕಾರ ಸಿಗದಿದ್ದರೆ, ಜಿಲ್ಲೆಯ ಮಗನಾಗಿ ಕುಣಿಗಲ್ ತಾಲೂಕಿನ ಜನತೆ ಪರವಾಗಿ ಉಗ್ರ ಹೋರಾಟ ಮಾಡಲು ಸಿದ್ಧನಿದ್ದೇನೆ” ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಂದೇಶ ರವಾನಿಸಿದ್ದಾರೆ.

Tags: BJPCongress PartyDr Ranganathdr ranganath kunigal mladr ranganath mladr ranganath mla kunigalhr ranganathkunigalkunigal congress mla dr. ranganathkunigal mlakunigal mla dr ranganathkunigal mla ranganathkunigal mla ranganath speech in assemblykunigal ranganathkunigal ranganath mlamla dr ranganathmla kunigal ranganathmla ranganathranganathranganath kunigal mlaನರೇಂದ್ರ ಮೋದಿಬಿಜೆಪಿ
Previous Post

ಬೆಂಗಳೂರಲ್ಲಿ ಆಟೋ ಡ್ರೈವರ್ ಜೊತೆ ಹಿಂದಿ ಯುವತಿ ಭಾರೀ ಕಿರಿಕ್ – ಕನ್ನಡಿಗ ಚಾಲಕನಿಗೆ ಚಪ್ಪಲಿಯಿಂದ ಥಳಿಸಿ ದುರ್ವರ್ತನೆ  

Next Post

ಆತ್ಮಹತ್ಯೆ ತಡೆಯುವುದು ಹೇಗೆ?

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ಆತ್ಮಹತ್ಯೆ ತಡೆಯುವುದು ಹೇಗೆ?

ಆತ್ಮಹತ್ಯೆ ತಡೆಯುವುದು ಹೇಗೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada