ಬೆಂಗಳೂರು : ಅಧಿಕಾರಕ್ಕೆ ಬರ್ತಿದ್ದಂತೆಯೇ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಒಂದೊಂದೆ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಸಿದ್ಧತೆಯಲ್ಲಿದೆ. ಆಗಸ್ಟ್ 17ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಬಗ್ಗೆ ಚಿಂತಿಸಲಾಗ್ತಾ ಇದ್ದು ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಬೆಳಗಾವಿಯನ್ನು ಆಯ್ಕೆ ಮಾಡಿಕೊಂಡಿದೆ ಎನ್ನಲಾಗಿದೆ.
ಅಂದಹಾಗೆ ಕಾಂಗ್ರೆಸ್ ಬೆಳಗಾವಿಯನ್ನೇ ಆಯ್ಕೆ ಮಾಡಿಕೊಳ್ಳುವ ಹಿಂದೆ ಬಲವಾದ ಕಾರಣ ಕೂಡ ಇದೆ. ಈ ಬಾರಿಯ ಚುನಾವಣೆಯಲ್ಲಿ ಬೆಳಗಾವಿ ಕಾಂಗ್ರೆಸ್ ಪಾಲಿಗೆ ಅದೃಷ್ಟದ ಜಿಲ್ಲೆ ಎನಿಸಿಕೊಂಡಿತ್ತು. ಇಲ್ಲಿಂದಲೇ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದ ಕಾಂಗ್ರೆಸ್ ಇದರಲ್ಲಿ ಯಶಸ್ಸನ್ನು ಕಂಡಿತ್ತು . ಹೀಗಾಗಿ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲೇ ಚಾಲನೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗ್ತಿದೆ.
ಅಲ್ಲದೇ ಉತ್ತರ ಕರ್ನಾಟಕವನ್ನು ಹಿಡಿದಿಟ್ಟುಕೊಳ್ಳುವುದು ಕೂಡ ಕಾಂಗ್ರೆಸ್ ಲೆಕ್ಕಾಚಾರವಾಗಿದೆ. ಬಿಜೆಪಿಯ ಮೇಲೆ ಲಿಂಗಾಯಿತರು ಮುನಿಸಿಕೊಂಡಿದ್ದಾರೆ. ಹೀಗಾಗಿ ಹೆಚ್ಚೆಚ್ಚು ಯೋಜನೆಗಳನ್ನು ಉತ್ತರ ಕರ್ನಾಟಕ ಭಾಗದಲ್ಲಿಯೇ ಜಾರಿಗೆ ತಂದು ಉತ್ತರ ಕರ್ನಾಟಕವನ್ನು ಕಾಂಗ್ರೆಸ್ನ ಭದ್ರಕೋಟೆಯನ್ನಾಗಿ ಮಾರ್ಪಾಡು ಮಾಡುವುದು ಹಸ್ತಪಾಳದ ಲೆಕ್ಕಾಚಾರವಾಗಿದೆ .
![](https://pratidhvani.com/wp-content/uploads/2023/06/PRAJA.png)