ಬೆಳಗಾವಿ : ಔರಂಗಜೇಬ ಹಾಗೂ ಟಿಪ್ಪು ಸುಲ್ತಾನ್ರನ್ನು ವರ್ಣಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ವಿರೋಧ ಹೆಚ್ಚಾಗಿದ್ದು ಕೊಲ್ಹಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರದ ರೂಪವನ್ನು ಪಡೆದುಕೊಂಡಿದ್ದು ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ. ಕೊಲ್ಹಾಪುರದಲ್ಲಿ ಸೆಕ್ಷನ್ 144 ಜಾರಿಯಾಗಿದೆ. ಇಲ್ಲದೇ ಇಂದು ಮಧ್ಯರಾತ್ರಿ 12ಗಂಟೆವರಗೂ ಕೊಲ್ಹಾಪುರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
![](https://pratidhvani.com/wp-content/uploads/2023/06/police-bans-1_202204806811-1024x768.jpg)
ಮಹಾರಾಷ್ಟ್ರದ ಗಡಿಯಲ್ಲಿರುವವರ ಸೋಶಿಯಲ್ ಮೀಡಿಯಾದ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಜೂನ್ 19ರವರೆಗೆ ನಿಷೇಧಾಜ್ಞೆ ಜಾರಿಯಾಗಿದೆ.
ಹಿಂಸಾಚಾರ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಕೊಲ್ಹಾಪುರ ಉಸ್ತುವಾರಿ ಸಚಿವ ದೀಪಕ್ ಕೇಸರಕರ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಸಚಿವ ದೀಪಕ್ ಕೇಸರಕರ್ ಅಧಿಕಾರಿಗಳಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.