ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ನಂತರ (Pahalgam terror attack) ಪಾಕಿಸ್ತಾನದ (Pakistan) ವಿರುದ್ಧ ಭಾರತ ಆಪರೇಷನ್ ಸಿಂಧೂರ (Operation sindhoor) ನಡೆಸಿದ್ದು, ಆ ನಂತರ ಬಹುತೇಕ ಯುದ್ಧದ ಛಾಯೆ ಆವರಿಸಿದೆ. ಹಗಲು ರಾತ್ರಿ ಭಾರತ-ಪಾಕಿಸ್ತಾನ ಮಧ್ಯೆ ದಾಳಿ ಪ್ರತಿದಾಳಿ ನಡೆಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿಯಲ್ಲೂ ಹೈ ಅಲರ್ಟ್ ಜಾರಿಯಾಗಿದೆ.

ಹೀಗಾಗಿ ಕಲಬುರಗಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ತೀವ್ರ ತಪಾಸಣೆ ನಡೆಸಿದೆ. ಕಲಬುರಗಿ ನಗರ ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದ್ದು, ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತ, ಜಿಲ್ಲಾಧಿಕಾರಿ ಕಚೇರಿ, ಬಸ್ ಸ್ಯಾಂಡ್, ರೈಲ್ವೆ ನಿಲ್ದಾಣ, ಸೇರಿದಂತೆ ಜನಬೀಡ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗಿದೆ.

ಇನ್ನು ರಸ್ತೆ ಬದಿ ಬಿದ್ದಿರುವ ಅನಾಮೇಧಯ ವಸ್ತುಗಳು, ಜೊತೆಗೆ ಬೈಕ್ ಗಳನ್ನ ಸಹ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.