• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜಾವೇದ್ ಅಖ್ತರ್ ಹೂಡಿದ್ದ ಮಾನನಷ್ಟ ಮೊಕದ್ದಮೆ: ಕಂಗನಾ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 9, 2021
in ದೇಶ
0
ಜಾವೇದ್ ಅಖ್ತರ್ ಹೂಡಿದ್ದ ಮಾನನಷ್ಟ ಮೊಕದ್ದಮೆ: ಕಂಗನಾ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್
Share on WhatsAppShare on FacebookShare on Telegram

ತಮ್ಮ ವಿರುದ್ಧದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಲು ನಟಿ ಕಂಗನಾ ರನೌತ್ ಸಲ್ಲಿಸಿದ್ದಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.

ADVERTISEMENT

ಕಳೆದ ವರ್ಷ ನವೆಂಬರ್ನಲ್ಲಿ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿಗೀತ ರಚನೆಕಾರ, ಲೇಖಕ ಜಾವೇದ್ ಅಖ್ತರ್ ಅವರು ಕಂಗನಾ ವಿರುದ್ಧಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಟಿವಿ ಸಂದರ್ಶನಗಳಲ್ಲಿತನ್ನ ವಿರುದ್ಧಮಾನಹಾನಿ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಅಖ್ತರ್ ಆರೋಪಿಸಿದ್ದರು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈವರೆಗೆ ಅಖ್ತರ್ ದೂರಿನ ಹಿನ್ನೆಲೆಯಲ್ಲಿ ನೀಡಿರುವ ಆದೇಶಗಳು, ಸಮನ್ಸ್ಗಳನ್ನೂ ಒಳಗೊಂಡಂತೆ ಅವರ ದೂರಿನ ಆಧಾರದಲ್ಲಿ ಚಾಲನೆ ನೀಡಿರುವ ಎಲ್ಲ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಪಡಿಸಿಬೇಕು ಎನ್ನುವುದು ಕಂಗನಾ ಅವರ ಮನವಿಯಾಗಿತ್ತು.

ಅಖ್ತರ್ ಅವರ ದೂರಿಗೆ ಸಂಬಂಧಿಸಿದಂತೆ ಪೊಲೀಸರಿಗೆ ವಿಚಾರಣೆ ನಡೆಸಲು ನಿರ್ದೇಶಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕಿರುವ ವಿವೇಚನಾಧಿಕಾರವನ್ನು ಎತ್ತಿ ಹಿಡಿದ ನ್ಯಾ. ರೇವತಿ ಮೋಹಿತೆ ದೆರೆ ಅವರು ಕಂಗನಾ ಮನವಿಯನ್ನು ವಜಾಗೊಳಿಸಿದರು.

ಕಂಗನಾ ಪರ ವಕೀಲ ರಿಜ್ವಾನ್ ಸಿದ್ದಿಕಿ, ದೂರುದಾರರನ್ನು ಪರೀಕ್ಷಿಸುವುದು ಹಾಗೂ ದೂರಿನಲ್ಲಿ ತಿಳಿಸಿರುವ ಸಾಕ್ಷಿಯನ್ನು ಪರೀಕ್ಷಿಸುವುದು ಮ್ಯಾಜಿಸ್ಟ್ರೇಟ್ ಅವರ ಕರ್ತವ್ಯವಾಗಿದೆ. ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 202ರ ಪ್ರಕಾರ ಮ್ಯಾಜಿಸ್ಟ್ರೇಟ್ ಅವರು ಇದನ್ನು ಪಾಲಿಸಬೇಕಿತ್ತೇ ಹೊರತು ತಮ್ಮ ಪರವಾಗಿ ಜುಹು ಪೊಲೀಸರಿಗೆ ಪ್ರಕರಣದ ಸಂಬಂಧ ತನಿಖೆ ನಡೆಸುವಂತೆ ಸುಮ್ಮನೆ ಸೂಚಿಸಬಾರದಿತ್ತು ಎಂದು ವಾದಿಸಿದ್ದರು.

ಇದಕ್ಕೆ ಪ್ರತಿಯಾಗಿ ಅಖ್ತರ್ ಪರ ವಕೀಲ ಜೇ ಕೆ ಭಾರಧ್ವಜ್, ಮ್ಯಾಜಿಸ್ಟ್ರೇಟ್ ಅವರ ಮುಂದೆ ಮೂರು ಆಯ್ಕೆಗಳಿರುತ್ತವೆ. ತಾವೇ ಖುದ್ದು ತನಿಖೆ ನಡೆಸುವುದು ಅಥವಾ ಪೊಲೀಸ್ ಅಧಿಕಾರಿಯ ಮೂಲಕ ತನಿಖೆ ನಡೆಸುವುದು ಇಲ್ಲವೇ ಮೂರನೇ ಪ್ರತ್ಯೇಕ ತನಿಖೆ ನಡೆಸುವುದು ಎಂಬುದಾಗಿ ವಾದಿಸಿದ್ದರು. ಮ್ಯಾಜಿಸ್ಟ್ರೇಟ್ ಅವರು ಈ ಮೂರರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಇದರಲ್ಲಿ ಯಾವುದೇ ಲೋಪವಿಲ್ಲ ಎಂದು ವಾದಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದಬಾಂಬೆ ಹೈಕೋರ್ಟ್ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತ್ತು.

Tags: ಕಂಗನಾಕೆ ಭಾರಧ್ವಜ್ಜಾವೇದ್ ಅಖ್ತರ್ಬಾಂಬೆ ಹೈಕೋರ್ಟ್ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ರಿಜ್ವಾನ್ ಸಿದ್ದಿಕಿ
Previous Post

ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶರಿಯಾ ಕಾನೂನು ಜಾರಿಗೊಳಿಸಿದ ತಾಲಿಬಾನ್; ಅಫ್ಘಾನರ ಗೋಳು ಹೇಳತೀರದು

Next Post

ಮೈಸೂರು ದಸರಾ ಆಚರಣೆ ಕುರಿತು ಉಸ್ತುವಾರಿ ಸಚಿವರ ಸುದ್ದಿಗೋಷ್ಠಿ : ST Somashekar

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post

ಮೈಸೂರು ದಸರಾ ಆಚರಣೆ ಕುರಿತು ಉಸ್ತುವಾರಿ ಸಚಿವರ ಸುದ್ದಿಗೋಷ್ಠಿ : ST Somashekar

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada