ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಉನ್ನತ ಹುದ್ದೆಯಲ್ಲಿದ್ದಾರೆ, ಪ್ರಭಾವಿಗಳು ಎಂಬ ಕಾರಣಕ್ಕೆ ನೀವು ಇಡುವಡೆಗೆ ಅವರ ಮೇಲೆ ಏನು ಕ್ರಮ ಕೈಗೊಂಡಿಲ್ಲ. ಅಂತಿಮವಾಗಿ ಕೊನೆಯ ಅವಕಾಶ ಅಂತ ನಿಮಗೆ ಇನ್ನೆರಡು ವಾರ ಸಮಯ ಕೊಡುತ್ತೇನೆ. ಅಷ್ಟರೊಳಗೆ ಏನಾದರೂ ಕ್ರಮಕ್ಕೆ ಮುಂದಾಗಬಹುದಾ ನೋಡಿ, ಇಲ್ಲವಾದ್ರೆ ನಿಮ್ಮನ್ನು ಎಲ್ಲಿಗೆ ಕಳಿಸಬೇಕೋ ಅಲ್ಲಿಗೇ ಕಳಿಸುತ್ತೇನೆ. ಹದಿನೈದು ದಿನ ಜೈಲಿನಲ್ಲಿದ್ದು ಬಂದರೆ ಸರಿಹೋಗ್ತಿರಿ…! ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಜೊತೆಗೆ ಮತ್ತಿತರರು ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಗೆ ಕೋರ್ಟ್ ಈ ರೀತಿ ಚಾಟಿ ಬೀಸಿದೆ.
ಸುಮ್ಮನೆ ಗೊಡ್ಡು ನೆಪ ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ನ್ಯಾಯಾಲಯದ ಆದೇಶಗಳನ್ನು ಪಾಲನೆ ಮಾಡಿಲ್ಲ ಅಂತ ನಿಮ್ಮ ಸಂಬಳ ಕಟ್ ಸರಿಮಾಡಿಕೊಳ್ಳುವಿರಿ ಎಂದು ಎಚ್ಚರಿಸಿತು.ಈ ಹೈಕೋರ್ಟ್ ಆದೇಶದ ಅನುಪಾಲನೆಗೆ ಮೂರು ತಿಂಗಳಾದರೂ ಕಾಲಾವಕಾಶ ನೀಡಬೇಕು ಎಂದು ಕೋರ್ಟ್ ಗೆ ಕೋರಿಕೊಳ್ಳಲಾಯ್ತು. ಆದರೆ ನ್ಯಾಯಪೀಠ, ಈ ಮನವಿಯನ್ನು ತಳ್ಳಿ ಹಾಕಿದೆ. ಈ ಹಿಂದಿನ ವಿಚಾರಣೆ ವೇಳೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿರಬೇಕು ಎಂದು ನ್ಯಾಯಪೀಠ ಆದೇಶಿಸಿತ್ತು.