• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಟ್ಲ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರಿಗೆ ನಿರ್ಬಂಧ: ಸಚಿವರ ಮಾತನ್ನೇ ಉಲ್ಲಂಘಿಸಿದ್ರಾ ಪ್ರಾಂಶುಪಾಲೆ?

ಫೈಝ್ by ಫೈಝ್
February 16, 2022
in ಕರ್ನಾಟಕ
0
ವಿಟ್ಲ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರಿಗೆ ನಿರ್ಬಂಧ: ಸಚಿವರ ಮಾತನ್ನೇ ಉಲ್ಲಂಘಿಸಿದ್ರಾ ಪ್ರಾಂಶುಪಾಲೆ?
Share on WhatsAppShare on FacebookShare on Telegram

ಉಡುಪಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿ ತರಗತಿಗೆ ಬರಬಾರದೆಂದು ಕೇಸರಿ ಧಾರಿ ವಿದ್ಯಾರ್ಥಿಗಳು ಮಾಡಿರುವ ಪ್ರತಿಭಟನೆ ರಾಜ್ಯದ ಬಹುತೇಕ ಹಿಜಾಬ್‌ಧಾರಿ ವಿದ್ಯಾರ್ಥಿನಿಯರಿಗೆ ಕಂಟಕವಾಗಿ ಪರಿಣಮಿಸಿದೆ. ಹಿಜಾಬ್‌ ಧರಿಸುವ ತಮ್ಮ ಹಕ್ಕಿನ ಕುರಿತು ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರು ಹೈಕೋರ್ಟ್‌ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ಹಂತದಲ್ಲಿದೆ.

ADVERTISEMENT

ಈ ನಡುವೆ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದ್ದು, ಕಾಲೇಜು ಅಭಿವೃದ್ಧಿ ಮಂಡಳಿ ನಿಗದಿಪಡಿಸಿದ ವಸ್ತ್ರಸಂಹಿತೆ ಅನುಸರಿಸಬೇಕು.  ಯಾವುದೇ ವಿದ್ಯಾರ್ಥಿಗಳು ಹಿಜಾಬ್‌ ಅಥವಾ ಕೇಸರಿ ಶಾಲು ಧರಿಸಿ ಬರಬಾರದೆಂದು ಹೇಳಿದೆ.

ಅದಾಗ್ಯೂ, ಚಾಮರಾಜನಗರದಲ್ಲಿ ಹೇಳಿಕೆ ಕೊಟ್ಟಿದ್ದ ಸಚಿವ ಅಶ್ವತ್ಥ ನಾರಾಯಣ ಅವರು ಡಿಗ್ರಿ ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಅನ್ವಯ ಆಗುವುದಿಲ್ಲ ಎಂದು ಹೇಳಿದ್ದರು.

ಅದರಂತೆ, ಮಂಗಳೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಆದರೆ, ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವನ್ನು ಉಲ್ಲೇಖಿಸಿ ಕಾಲೇಜು ಪ್ರಾಂಶುಪಾಲೆ ಶ್ರೀಜಾ ಅವರು ವಿದ್ಯಾರ್ಥಿನಿಯರನ್ನು ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶವನ್ನು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶ ನೀಡದ ಕಾರಣ ವಿದ್ಯಾರ್ಥಿನಿಯರು ತಮ್ಮ ಮನೆಗಳಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.  

ಈ ಕುರಿತು ಮಂಗಳೂರು ವಿಶ್ವವಿದ್ಯಾಲಯದ ಕಛೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಪ್ರಶ್ನಿಸಿದಾಗ, ವಸ್ತ್ರ ಸಂಹಿತೆ ಇರುವ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಇಲ್ಲ. ಶಿಕ್ಷಣ ಸಚಿವರು ಹೇಳಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಉತ್ತರಿಸಿದ್ದಾರೆ. ವಿಟ್ಲ ಸರ್ಕಾರಿ ಕಾಲೇಜಿನಲ್ಲಿ ನಡೆದ ಬಗ್ಗೆ ಪ್ರಶ್ನಿಸಿದಾಗ ಪ್ರಾಂಶುಪಾಲೆಯೊಂದಿಗೆ ಮಾತನಾಡಿ ಹೆಚ್ಚಿನ ಮಾಹಿತಿಯನ್ನು ತಿಳಿಸುತ್ತೇನೆ ಎಂದು ಅವರು ತಿಳಿಸಿ ಫೋನ್‌ ಕರೆ ಕಟ್‌ ಮಾಡಿದ್ದಾರೆ. ತದ ನಂತರ ಆ ಸಂಖ್ಯೆಗೆ ಮಾಡಿರುವ ಕರೆಯನ್ನು ಅವರು ಸ್ವೀಕರಿಸಿಲ್ಲ.

ಉನ್ನತ ಶಿಕ್ಷಣ ಸಚಿವರ ಹೇಳಿಕೆಯ ಆಧಾರದ ಮೇಲೆ ಕಾಲೇಜಿನ ಪ್ರಾಂಶುಪಾಲರನ್ನು ಪ್ರಶ್ನಿಸಿದಾಗ ಅವರು, ʼನಮಗೆ ನಮ್ಮ ಮೇಲಿನ ಅಧಿಕಾರಿಗಳಿಂದ ಆದೇಶ ಬಂದಿದೆ. ಅದನ್ನಷ್ಟೇ ನಾವು ಪಾಲಿಸುತ್ತಿದ್ದೇವೆʼ ಎಂದು ತಿಳಿಸಿದ್ದಾರೆ. ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಅವರು, ಸೂಚನಾ ಫಲಕದಲ್ಲಿ ಹಾಕಿರುವ ಹೈಕೋರ್ಟ್‌ ಮಧ್ಯಂತರ ಆದೇಶದ ಪ್ರತಿಯನ್ನು ತೋರಿಸಿ, ನಾವು ಅದನ್ನಷ್ಟೇ ಫಾಲೋ ಮಾಡುತ್ತಿದ್ದೇವೆ. ಮಾಧ್ಯಮಗಳೊಂದಿಗೆ ಮಾತನಾಡದಂತೆ ನಮಗೆ ನಿರ್ಬಂಧವಿದೆ ಎಂದು ತಿಳಿಸಿದ್ದಾರೆ.

ಇನ್ನು, ಕಾಲೇಜಿನ ಅಭಿವೃಧ್ಧಿ ಮಂಡಳಿ ನಿಗದಿಪಡಿಸಿರುವ ವಸ್ತ್ರ ಸಂಹಿತೆ ಮಾದರಿಯೇನು ಎಂಬ ಪ್ರಶ್ನೆಗೆ ಕಾಲೇಜಿನ ಕಡೆಯಿಂದ ಸಮರ್ಪಕವಾದ ಉತ್ತರ ದೊರೆತಿಲ್ಲ. ಕಾಲೇಜಿನ ಅಧಿಕೃತ ವೆಬ್‌ಸೈಟಿನಲ್ಲಿ ಸಮವಸ್ತ್ರ ಧರಿಸಬೇಕೆಂದು ಇದೆ ಎಂದು ಸಿಬ್ಬಂದಿ ಒಬ್ಬರು ತಿಳಿಸಿದಾಗ್ಯೂ, ಆ ಸಮವಸ್ತ್ರ ಯಾವ ಮಾದರಿಯದ್ದು, ಅದರಲ್ಲಿ ತಲೆ ಮುಚ್ಚಬಾರದು ಎಂದು ಉಲ್ಲೇಖಿಸಲಾಗಿದೆಯೇ ಎಂಬ ಪ್ರಶ್ನೆಗೆ ಸಮರ್ಪಕ ಉತ್ತರ ಸಿಕ್ಕಿಲ್ಲ. ವೆಬ್‌ಸೈಟಿನಲ್ಲಿ ಪ್ರಕಟಗೊಂಡಿರುವ ವಿದ್ಯಾರ್ಥಿಗಳಿಗೆ ನೀತಿ ಸಂಹಿತೆಯ 3ನೇ ನಿಯಮದಲ್ಲಿ “ಎಲ್ಲಾ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಲ್ಲಿ ಸಮವಸ್ತ್ರದಲ್ಲಿರಬೇಕು ಮತ್ತು ಅವರು ಕಾಲೇಜನ್ನು ಪ್ರತಿನಿಧಿಸುವಾಗ ಸಮವಸ್ತ್ರವನ್ನು ಧರಿಸಬೇಕು” ಎಂದಿದೆ. ಆದರೆ, ಆ ಸಮವಸ್ತ್ರ ಯಾವ ಮಾದರಿಯದ್ದು ಎನ್ನುವುದರ ಬಗ್ಗೆ ಸ್ಪಷ್ಟ ಉಲ್ಲೇಖಗಳಿಲ್ಲ.


ಅದೂ ಮಾತ್ರವಲ್ಲದೆ, ಮಂಗಳವಾರ ಚಾಮರಾಜನಗರದಲ್ಲಿ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್‌ ಅವರು ಸ್ಪಷ್ಟವಾಗಿ, ʼಡಿಗ್ರಿ  ಕಾಲೇಜಿನಲ್ಲಿ ಹಿಜಾಬ್‌ ಗೆ  ಯಾವ ನಿರ್ಬಂಧವಿಲ್ಲ, ಅಲ್ಲಿ ಹಾಕಬಹುದು, ಆದರೆ ಪಿಯು ಮತ್ತು ಶಾಲೆಗಳಲ್ಲಿ ನಿಗದಿ ಪಡಿಸಿದ ಸಮವಸ್ತ್ರ ಧರಿಸಬೇಕುʼ ಎಂದು ಹೇಳಿದ್ದಾರೆ.  

ಅಶ್ವತ್ಥ ನಾರಾಯಣ ಅವರ ಈ ಹೇಳಿಕೆಯನ್ನು ಬುಧವಾರದ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಕುರಿತು ಸ್ಪಷ್ಟೀಕರಣ ಕೇಳಿದ್ದಾರೆ.

ಅದಕ್ಕೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವರು ತಮ್ಮ ಇಲಾಖೆಯ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅದರಲ್ಲಿ ಇನ್ನು ನಮ್ಮ ಸ್ಪಷ್ಟೀಕರಣದ ಅಗತ್ಯವಿಲ್ಲ ಎಂದಿದ್ದಾರೆ. ಅಂದರೆ ಸಿಎಂ ಕೂಡಾ, ಅಶ್ವತ್ಥ ನಾರಾಯಣ ಅವರ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ಸಚಿವರು ಡಿಗ್ರಿ ಕಾಲೇಜಿನಲ್ಲಿ ಸಮವಸ್ತ್ರಕ್ಕೆ ಅವಕಾಶ ಇದೆ ಎಂದು ಹೇಳಿಕೆ ನೀಡಿದ ಒಂದು ದಿನದ ಬೆನ್ನಲ್ಲೇ, ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಿ ತರಗತಿ ಪ್ರವೇಶಕ್ಕೆ ಅನುವು ಮಾಡಿಕೊಡದೆ ಇರುವುದು ಯಾವ ಆಧಾರದ ಮೇಲೆ ಎಂಬ ಪ್ರಶ್ನೆ ಉದ್ಭವವಾಗಿದೆ.

Tags: ashwath narayanGovt First Grade College Vitlahigher education ministerhijab controversyStudentsಅಶ್ವತ್ಥ ನಾರಾಯಣಉಡುಪಿಉನ್ನತ ಶಿಕ್ಷಣವಿಟ್ಲ ಸರ್ಕಾರಿ ಪದವಿ ಕಾಲೇಜುವಿದ್ಯಾರ್ಥಿನಿಯರುಸಿಎಂ ಬಸವರಾಜ್‌ ಬೊಮ್ಮಾಯಿಹಿಜಾಬ್‌ ವಿವಾದಹೈ ಕೋರ್ಟ್‌
Previous Post

ಪ್ರಾರ್ಥನಾ ಭಜನೆ ಮಾಡಿದ ಪ್ರಧಾನಿ ಮೋದಿ! | Narendra Modi |

Next Post

ಪ್ರಜ್ಞಾವಂತಿಕೆಯನ್ನೇ ಕಳೆದುಕೊಳ್ಳುತ್ತಿರುವ ಸಮಾಜದಲ್ಲಿ ಮಾಧ್ಯಮವೂ ದಿಕ್ಕು ತಪ್ಪುತ್ತಿದೆ

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಪ್ರಜ್ಞಾವಂತಿಕೆಯನ್ನೇ ಕಳೆದುಕೊಳ್ಳುತ್ತಿರುವ ಸಮಾಜದಲ್ಲಿ ಮಾಧ್ಯಮವೂ ದಿಕ್ಕು ತಪ್ಪುತ್ತಿದೆ

ಪ್ರಜ್ಞಾವಂತಿಕೆಯನ್ನೇ ಕಳೆದುಕೊಳ್ಳುತ್ತಿರುವ ಸಮಾಜದಲ್ಲಿ ಮಾಧ್ಯಮವೂ ದಿಕ್ಕು ತಪ್ಪುತ್ತಿದೆ

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada