ಕರ್ನಾಟಕದಲ್ಲಿ ಮುಸ್ಲಿಂ ಮಹಿಳೆಯರ (Muslim Womens) ಮೇಲೆ ಹೆಚ್ಚುತ್ತಿರುವ ಕಿರುಕುಳ ಮತ್ತು ದೌರ್ಜನ್ಯವನ್ನು ವಿರೋಧಿಸಿ ಶನಿವಾರದಂದು ಮಹಿಳೆಯರು ಸೇರಿದಂತೆ ಲೈಂಗಿಕ ಅಲ್ಪಸಂಖ್ಯಾತರು (transgender persons) ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ ಮೆರವಣಿಗೆ ಮಾಡಿ ಪ್ರತಿಭಟಿಸಿದರು.
100ಕ್ಕೂ ಹೆಚ್ಚು ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ (krantiveera sangolli rayanna to freedom park) ಮೆರವಣಿಗೆ ನಡೆಸಿ ಸಂವಿಧಾನ ನೀಡಿರುವ ಘನತೆ, ಸ್ವಾಯತ್ತತೆ, ಬಹುತ್ವ, ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು.
ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ತಜ್ಞರು, ಸಾಹಿತಿಗಳು, ಸಮಾಜ ಸೇವಕರು, ಕಲಾವಿದರು ಮತ್ತಿತರರು ಮುಸ್ಲಿಂ ಮಹಿಳೆಯರಿಗೆ ಒಗ್ಗಟ್ಟು ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿಶಾಲಾ-ಕಾಲೇಜುಗಳಲ್ಲಿ ಸಂವಿಧಾನದಲ್ಲಿ ನೀಡಲಾಗಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಿಜಾಬ್ ಧರಿಸಿ ಬರುವ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಾಲಾ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ. ಮಾಧ್ಯಮಗಳು ಇದನ್ನು ಅಮಾನವೀಯವಾಗಿ ಬಿಂಬಿಸುತ್ತಿವೆ. ಮಕ್ಕಳು ಸೇರಿದಂತೆ ಶಿಕ್ಷಕಿಯರು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗೆ ಮಣಿದು ಹಿಜಾಬ್ ತೆಗೆಯುವುದನ್ನು ಚಿತ್ರೀಕರಿಸಿ ಅವಮಾನಮಾಡುತ್ತಿವೆ. ಅಲ್ಲದೆ, ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ಜನರಲ್ಲಿ ಭಯವುಂಟುಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.