ಉತ್ತರ ಮತ್ತು ಪೂರ್ವ ಭಾರತದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತದಲ್ಲಿ ಅಂದಾಜಿಗಿಂತ ಹೆಚ್ಚು ಮಂದಿ ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗಿದೆ.
ಕಳೆದ ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶ ಉತ್ತರಾಖಂಡ ಮತ್ತು ಒಡಿಶಾದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಮಳೆಯಿಂದಾಗಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ನೂರಾರು ಹಳ್ಳಿಗಳು, ಮಣ್ಣಿನಿಂದ ಮಾಡಿದ ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಜಲಾವೃತವಾಗಿವೆ. ಮುಂದಿನ ಎರಡು ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.