• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೆಹರು ಕಾಲದಿಂದಲೂ ಹಿಂದಿ ಹೇರಿಕೆ ಇದೆ: ಸಂಗೀತ ನಿರ್ದೇಶಕ ಹಂಸಲೇಖ

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in Top Story, ಇದೀಗ, ಕರ್ನಾಟಕ, ಸಿನಿಮಾ
0
ಹಂಸಲೇಖ

ಹಂಸಲೇಖ

Share on WhatsAppShare on FacebookShare on Telegram

ನೆಹರು ಕಾಲದಿಂದಲೂ ಹಿಂದಿ ಭಾಷೆ ಹೇರಿಕೆ ಮಾಡುವ ಕಾರ್ಯ ಆರಂಭವಾಯಿತು ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ADVERTISEMENT

ಮೈಸೂರಿನ ಪತ್ರಕರ್ತರ ಸಂಘದಲ್ಲಿ ಮಂಗಳವಾರ (ಸೆಪ್ಟೆಂಬರ್ 11) ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

ಅಂದಿನಿಂದಲೂ ಹಿಂದಿಯನ್ನು ರಾಷ್ಟ್ರೀಯ ಭಾಷೆ ಮಾಡಲು ಯತ್ನಿಸಲಾಗುತ್ತಿದೆ. ಇಂದಿಗೂ ಕೂಡ ಹಿಂದಿ ಭಾಷೆಯನ್ನು ಹೇರಿಕೆ ಮಾಡಲಾಗುತ್ತಿದೆ. ನನಗೆ ಕನ್ನಡ ಒಂದಂಶ ಆಗಬೇಕು ಎಂಬ ಇರಾದೆಯಿದೆ. ಕನ್ನಡದ ಅಸ್ಮಿತೆ ಕಾಪಾಡುವ ಕೆಲಸವಾಗಬೇಕು. ಕನ್ನಡಕ್ಕಾಗಿ ಕಾವಲಿಟ್ಟು, ಕನ್ನಡವನ್ನು ರಕ್ಷಿಸಬೇಕು. ಹಿಂದಿ ಹೇರಿಕೆ ಇಂದಿನಿಂದ ಇಲ್ಲ, ನಾನು 8 ನೇ ತರಗತಿ ಓದುತ್ತಿದ್ದ ಸಮಯದಿಂದಲೂ ಇದೆ. ದೆಹಲಿಗೆ ಕನ್ನಡ ಬೇಕಾಗಿಲ್ಲ, ನಮಗೆ ಹಿಂದಿ ಬೇಕಾಗಿಲ್ಲ. ಆದರೆ ನಮಗೆ ದೆಹಲಿ ಬೇಕಾಗಿದೆ. ಹಿಂದಿ ಹೇರುವ ಹುನ್ನಾರ ಹಿಂದಿನ ಕಾಲದಿಂದಲೂ ಕೂಡ ಇದೆ. ಈಗ ಅದು ಹೆಚ್ಚಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ಕೆಲವರು ಇದನ್ನು ಕಾವ್ಯಕ್ಕೆ ಸಿಕ್ಕ ಗೌರವ ಅಂದ್ರು. ಸೋಷಿಯಲ್ ಜಸ್ಟಿಸ್ ಅಂತ ಕೆಲವರು ಹೇಳಿದ್ರು. ಅದ್ಯಾವುದನ್ನೂ ವ್ಯಾಖ್ಯಾನಿಸಲು ಕಷ್ಟ. ನಾನು ಸಿನಿಮಾ ರೈಟರ್. ನನ್ನನ್ನು ಕವಿ ಅಂದರೆ, ಕವಿ ಪಟ್ಟ ಬೇಡ ಅಂತೀನಿ. ಕವಿ ಪಟ್ಟ ತೆಗೆದುಕೊಂಡರೆ ಮೇಲು, ಮಧ್ಯ, ಕೆಳಗೆ ಅಂತ ಮೂರು ಭಾಗ ಮಾಡುತ್ತಾರೆ. ದಸರಾ ಉದ್ಘಾಟನೆ ಮಾಡುವ ಭಾಗ್ಯ ಸಿಕ್ಕಿದ್ದು ಸಾಮಾಜಿಕ ಕಲಾ ನ್ಯಾಯ ಅಂತ ಹೇಳುತ್ತೇನೆ. ಸಾಮಾಜಿಕ ನ್ಯಾಯವು ಅಲ್ಲ, ಕಾವ್ಯಕ್ಕೆ ಸಿಕ್ಕ ನ್ಯಾಯ ಅಂತಲೂ ಹೇಳುವುದಿಲ್ಲ ಎಂದು ಹಂಸಲೇಖ ಹೇಳಿದರು.

ಬರದ ನಡುವೆ ಅದ್ದೂರಿ ದಸರಾ ಆಚರಣೆ ವಿಚಾರ ಪ್ರಶ್ನೆಗೆ, ರೈತರ ವಿಚಾರವನ್ನೂ ಗಮನಿಸಬೇಕು. ಹಬ್ಬದ ಮೂಲವೇ ರೈತ. ಅದರ ಬಗ್ಗೆ ನನ್ನ ಚಿಂತೆ ಜಾಸ್ತಿ ಇದೆ. ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡಬೇಕು ಎಂಬುದು ನನ್ನ ಆಸೆ. ರೈತರ ಮನಸ್ಸಿಗೆ ನೋವಾಗುವ ದುಂದು ಬೇಡ ಅನ್ನೋದು ನನ್ನ ಭಾವನೆ. ಸ್ಮಾರ್ಟ್ ಸಿಟಿಗಿಂತ ಸ್ಮಾರ್ಟ್ ವಿಲೇಜ್ ಆಗಬೇಕಿದೆ. ಕೃಷಿ ತಜ್ಞರ ಸಹಾಯದಿಂದ ಸ್ಮಾರ್ಟ್ ವಿಲೇಜ್ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಮೊದಲು ತಾಯಿ ಮಕ್ಕಳಿಗೆ ಕನ್ನಡದ ಬಗ್ಗೆ ಹೇಳಿಕೊಡಬೇಕು. ಇತ್ತೀಚೆಗೆ ಮಕ್ಕಳನ್ನು ಇಂಗ್ಲಿಷ್ ನಲ್ಲೇ ಓದಿಸಬೇಕೆಂಬ ಆಸೆ ವ್ಯಕ್ತಪಡಿಸುತ್ತಾರೆ. ಕೆಲಸ ಸಿಗೋದು ಸಹ ಇಂಗ್ಲಿಷ್ ಇದ್ದರೆ ಮಾತ್ರ. ಹಾಗಾಗಿ ಮನೆಯಲ್ಲೂ ಇಂಗ್ಲಿಷ್ ಕಲಿಸುವ ಹಂತಕ್ಕೆ ಹೋಗಿದ್ದಾರೆ. ಇಂಗ್ಲಿಷ್ ಕೆಲಸಕ್ಕೆ ಇಟ್ಟುಕೊಳ್ಳಿ, ಕನ್ನಡದ ಅಸ್ಮಿತೆ ಉಳಿಸಲು ಕಲಿಯಿರಿ. ಶಾಲೆಯಿಂದ ಮಾತ್ರವಲ್ಲ, ಮನೆಯಿಂದಲೇ ಕನ್ನಡ ಕಲಿಕೆ ಆಗಬೇಕು. ಈ ಮೂಲಕ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಆಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಹಿಷ ದಸರಾ ಆಚರಣೆ ಕುರಿತ ಪ್ರಶ್ನೆಗೆ, ಅಕಪಕ್ಕದ ಮನೆಯ ವಿಚಾರ ನನಗೆ ಏಕೆ.? ನನ್ನನ್ನು ಕರೆದಿರೋದು ದಸರಾ ಉದ್ಘಾಟನೆಗೆ. ಅದು ಬಿಟ್ಟು ಬೇರೆ ವಿಚಾರಗಳ ಬಗ್ಗೆ ಚರ್ಚೆ ಬೇಡ. ಮಹಿಷ ದಸರಾ ಉದ್ಘಾಟನೆಗೆ ನನ್ನನ್ನು ಏಕೆ ಕರೆಯುತ್ತಾರೆ. ನಾನು ಈಗಾಗಲೇ ನಾಡಹಬ್ಬ ದಸರಾ ಉದ್ಘಾಟಕನಾಗಿದ್ದೇನೆ. ಎರಡು ಕಾರ್ಯಕ್ರಮ ಒಬ್ಬನೇ ಉದ್ಘಾಟಿಸಲು ಹೇಗೆ ಸಾಧ್ಯ ಎಂದರು.

Tags: DararaHamsalekhaHindi ImpositionJawaharlal Nehrumahisha dasaraMusic Director Hamsalekhaಖ್ಯಾತ ಸಂಗೀತ ನಿರ್ದೇಶಕ ಹಂಸಲೇಖಜವಾಹರ್ ಲಾಲ್ ನೆಹರುಹಂಸಲೇಖಹಿಂದಿ ಹೇರಿಕೆ
Previous Post

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮುಸ್ಲಿಂ ಯುವಕರ ಜೋಡಿ ಕೊಲೆ ಆರೋಪಿ ಗೋರಕ್ಷಕ ಮೋನು ಮಾನೇಸರ್ ಅರೆಸ್ಟ್

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
Next Post
ಮುಸ್ಲಿಂ ಯುವಕರ ಜೋಡಿ ಕೊಲೆ ಆರೋಪಿ ಗೋರಕ್ಷಕ ಮೋನು ಮಾನೇಸರ್ ಅರೆಸ್ಟ್

ಮುಸ್ಲಿಂ ಯುವಕರ ಜೋಡಿ ಕೊಲೆ ಆರೋಪಿ ಗೋರಕ್ಷಕ ಮೋನು ಮಾನೇಸರ್ ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada