• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದು ಹಿಂದುತ್ವವಾದಿಗಳು : ರಾಹುಲ್ ಗಾಂಧಿ

Any Mind by Any Mind
January 30, 2022
in ದೇಶ
0
ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದು ಹಿಂದುತ್ವವಾದಿಗಳು : ರಾಹುಲ್ ಗಾಂಧಿ
Share on WhatsAppShare on FacebookShare on Telegram

ಮಹಾತ್ಮ ಗಾಂಧಿಯವರ 74ನೇ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, “ಹಿಂದುತ್ವವಾದಿಗಳು” ರಾಷ್ಟ್ರಪಿತ ಇನ್ನಿಲ್ಲ ಎಂದು ಭಾವಿಸುತ್ತಾರೆ ಆದರೆ ಅವರು ಜೀವಂತವಾಗಿದ್ದಾರೆ, ಅಲ್ಲಿ ಸತ್ಯವಿದೆ ಎಂದಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಹಿಂದುತ್ವವಾದಿ’ಯೊಬ್ಬ ಗಾಂಧೀಜಿಗೆ ಗುಂಡು ಹಾರಿಸಿದ್ದಾನೆ. ಗಾಂಧೀಜಿ ಇನ್ನಿಲ್ಲ ಎಂದು ಎಲ್ಲಾ ಹಿಂದುತ್ವವಾದಿಗಳು ಭಾವಿಸಿದ್ದಾರೆ. ಎಲ್ಲಿ ಸತ್ಯವಿದೆಯೋ ಅಲ್ಲಿ ಬಾಪು ಇನ್ನೂ ಜೀವಂತವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಿಂದಿಯಲ್ಲಿ ಟ್ವೀಟ್ ಮಾಡಿ ‘ಫಾರೆವರ್ ಗಾಂಧಿ’ ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಭಾರತೀಯ ಸ್ವಾತಂತ್ರ್ಯ ಆಂದೋಲನದಲ್ಲಿ ರಾಜಕೀಯ ಹಾಗೂ ಆಧ್ಯಾತ್ಮಿಕ ನಾಯಕರಾಗಿದ್ದ ‘ರಾಷ್ಟ್ರಪಿತ’ ಮಹಾತ್ಮ ಗಾಂಧೀಜಿಯವರು (ಅಕ್ಟೋಬರ್ 2, 1869 – ಜನವರಿ 30, 1948) ಅವರು ನಮ್ಮನ್ನಗಲಿ 74 ವರ್ಷಗಳೇ ಸಂದಿವೆ. ಅಹಿಂಸೆ ಹಾಗೂ ಅಸಹಕಾರ ಚಳುವಳಿ ಮೂಲಕ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾತ್ಮ ಗಾಂಧಿ ಅವರನ್ನು 1948 ಜನವರಿ 30ರಂದು ನಾಥೂರಾಂ ಗೋಡ್ಸೆ ಗುಂಡಿಕ್ಕಿ ಕೊಂದರು. ರಾಷ್ಟ್ರಪಿತರನ್ನು ಕೊಂದ ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.

ತಮ್ಮ ಟ್ವಿಟರ್ ನಲ್ಲಿ ರಾಹುಲ್ ಗಾಂಧಿ ಅವರು, ಮಹಾತ್ಮ ಗಾಂಧಿಯವರ ಉಲ್ಲೇಖವನ್ನು ಸಹ ಹಂಚಿಕೊಂಡಿದ್ದಾರೆ: “ನಾನು ಹತಾಶೆಗೊಂಡಾಗ, ಇತಿಹಾಸದುದ್ದಕ್ಕೂ ಸತ್ಯ ಮತ್ತು ಪ್ರೀತಿಯ ಮಾರ್ಗವು ಯಾವಾಗಲೂ ಗೆದ್ದಿದೆ ಎಂದು ನಾನು ನೆನಪಿಸಿಕೊಳ್ಳುತ್ತೇನೆ. ಕ್ರೂರರು ಮತ್ತು ಕೊಲೆಗಾರರು ಸ್ವಲ್ಪ ಸಮಯದವರೆಗೆ ಕಾಣಿಸಬಹುದು. ಆದರೆ ಕಡೆಯಲ್ಲ ಅವರು ಸೋಲುತ್ತಾರೆ ಕೆಲಗೆ ಬಿದ್ದೇ ಬೀಳುತ್ತಾರೆ, ಸತ್ಯಕ್ಕೆ ಜಯವಾಗುತ್ತದೆ.” ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಾತ್ಮ ಗಾಂಧಿಯವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿ, ಅಹಿಂಸಾ (ಅಹಿಂಸೆ) ಕುರಿತು ಟ್ವೀಟರ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ, “ನಾವು ರಾಷ್ಟ್ರಪಿತರಿಗೆ ಅವರ ಪುಣ್ಯತಿಥಿಯಂದು ನಮ್ಮ ಶ್ರದ್ಧಾಂಜಲಿಗಳನ್ನು ಅರ್ಪಿಸುತ್ತೇವೆ. ಈ ದಿನವನ್ನು ಹುತಾತ್ಮರ ದಿನವಾಗಿಯೂ ಆಚರಿಸಲಾಗುತ್ತದೆ, ನಾವು ಎಲ್ಲಾ ವೀರ ಪುರುಷ ಮತ್ತು ಮಹಿಳೆಯರಿಗೆ ನಮಸ್ಕರಿಸುತ್ತೇವೆ. ” “ನಮ್ಮ ಪ್ರೀತಿಯ ಬಾಪು ಅವರು ಈ ಕಠಿಣ ಸಮಯದಲ್ಲಿ ನಮ್ಮನ್ನು ಮುನ್ನಡೆಸಲು ಇಂದು ನಮ್ಮ ನಡುವೆ ಇಲ್ಲದಿರಬಹುದು ಆದರೆ ದಬ್ಬಾಳಿಕೆ, ನಿರಾಸಕ್ತಿ, ಅನ್ಯಾಯ ಮತ್ತು ಸುಳ್ಳಿನ ವಿರುದ್ಧ ನಿರ್ಭಯವಾಗಿ ಮತ್ತು ಪಟ್ಟುಬಿಡದೆ ಹೋರಾಡುವ ಅವರ ಸಮೃದ್ಧ ಮಾರ್ಗಗಳು ಇದ್ದೇ ಇರುತ್ತವೆ” ಎಂದು ಕಾಂಗ್ರೆಸ್ ಹೇಳಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿಮಹಾತ್ಮ ಗಾಂಧಿರಾಹುಲ್ ಗಾಂಧಿ
Previous Post

ಕಾಂಗ್ರೆಸ್ ಪಕ್ಷದಿಂದ ‘ಸಬ್ ಕಾ ಹಾತ್, ಸಬ್ ಕಾ ಸಾತ್’ ಮಂತ್ರ ಪಠಣ

Next Post

ನಾಳೆಯಿಂದ ಬಜೆಟ್ ಅಧಿವೇಶನ ಪ್ರಾರಂಭ : ಇಲ್ಲಿದೆ ಪ್ರಮುಖ 10 ಅಂಶಗಳು

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ನಾಳೆಯಿಂದ ಬಜೆಟ್ ಅಧಿವೇಶನ ಪ್ರಾರಂಭ : ಇಲ್ಲಿದೆ ಪ್ರಮುಖ 10 ಅಂಶಗಳು

ನಾಳೆಯಿಂದ ಬಜೆಟ್ ಅಧಿವೇಶನ ಪ್ರಾರಂಭ : ಇಲ್ಲಿದೆ ಪ್ರಮುಖ 10 ಅಂಶಗಳು

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada