• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಪಕ್ಷದ ಫ್ಯಾಮಿಲಿ ಬಿಸಿನೆಸ್ʼಗೆ ಸಂಘದಲ್ಲಿಯೇ ತರಬೇತಿ ನೀಡಲಾಗುತ್ತಿದೆಯೇ? – ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಕೆ ಕುಮಾರಸ್ವಾಮಿ ಪ್ರಶ್ನೆ

Any Mind by Any Mind
October 7, 2021
in ಕರ್ನಾಟಕ, ರಾಜಕೀಯ
0
ಬಿಜೆಪಿ ಪಕ್ಷದ ಫ್ಯಾಮಿಲಿ ಬಿಸಿನೆಸ್ʼಗೆ ಸಂಘದಲ್ಲಿಯೇ ತರಬೇತಿ ನೀಡಲಾಗುತ್ತಿದೆಯೇ? – ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಕೆ ಕುಮಾರಸ್ವಾಮಿ ಪ್ರಶ್ನೆ
Share on WhatsAppShare on FacebookShare on Telegram

ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಆರೆಸ್ಸೆಸ್ ಕುರಿತಾದ  ಟೀಕೆಗೆ ಪ್ರತಿದಾಳಿ ನಡೆಸಿದ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಕೆ ಕುಮಾರಸ್ವಾಮಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಹೆಚ್‌ಕೆ ಕುಮಾರಸ್ವಾಮಿ ʼಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು RSS ಬಗ್ಗೆ ನೀಡಿದ ಹೇಳಿಕೆಯಿಂದ  ನೀವೆಲ್ಲರೂ ಮೈಪರಚಿಕೊಳ್ಳುತ್ತಿರುವುದು ನೋಡಿದರೆ ಸತ್ಯ ಎಷ್ಟು ಕಹಿಯಾಗಿರುತ್ತದೆ ಎಂಬುದು ಅರ್ಥವಾಗುತ್ತದೆ. ಟೀಕೆ ಮಾಡುವ ಭರದಲ್ಲಿ ಕಟೀಲ್ ಅವರು ʼಫ್ಯಾಮಿಲಿ ಬಿಸಿನೆಸ್ʼ ಬಗ್ಗೆ ಹೇಳಿದ್ದಾರೆ. ಆದರೆ, ನಿಮ್ಮ ಪಕ್ಷದ ಫ್ಯಾಮಿಲಿ ಬಿಸಿನೆಸ್ʼಗೆ ಸಂಘದಲ್ಲಿಯೇ ತರಬೇತಿ ನೀಡಲಾಗುತ್ತಿದೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡಿದ ಅವರು, ʼಆಪರೇಷನ್ ಕಮಲದ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಅವರ ಸರಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯನ್ನು ಕಣ್ಣೀರಿಡುತ್ತಲೇ ಕಳೆದುಕೊಂಡರು! ಯಾಕೆ? ಅದು ಫ್ಯಾಮಿಲಿ ಬಿಸಿನೆಸ್ʼನಿಂದ ಅಲ್ಲವೇ? ನಿಮ್ಮ ಪಕ್ಷದ ಶಾಸಕರೇ ಹಾದಿಬೀದಿಯಲ್ಲಿ ನಿಂತು ನಿಮ್ಮ ಮುಖ್ಯಮಂತ್ರಿಯ ʼಫ್ಯಾಮಿಲಿ ಬಿಸಿನೆಸ್ʼ ಬಗ್ಗೆ ಟೀಕೆ ಮಾಡಿದ್ದನ್ನು ಮರೆತುಬಿಟ್ಟಿರಾ ಕಟೀಲ್ ಅವರೇ? ಅನುಗ್ರಹದ ಹಿತ್ತಲಿನಲ್ಲಿ ನಡೆದ ವ್ಯವಹಾರಗಳ ಬಗ್ಗೆ ಹೇಳಲಿಲ್ಲವೇ?ʼ ಎಂದು ತಿರುಗೇಟು ನೀಡಿದ್ದಾರೆ.

ʼಐಎಎಸ್, ಐಪಿಎಸ್ ಅಭ್ಯರ್ಥಿಗಳಿಗೆ ತರಬೇತಿ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದೀರಿ, ಸರಿ. ಸಂಘದ ಸ್ವಯಂಸೇವಕರು ದೇಶ ಸೇವೆ ಮಾಡುತ್ತಿದ್ದಾರೆ ಎನ್ನುತ್ತೀರಿ. ಹಾಗಾದರೆ, ಎಲ್ಲರನ್ನೂ ಗಡಿಗೆ ಕಳಿಸಿ. ಗಡಿಯಲ್ಲಿ ಈಗ ಉದ್ವಿಗ್ನ ಪರಿಸ್ಥಿತಿ ಇದೆ. ಕಟೀಲ್ ಅವರೇ, ಸುಖಾಸುಮ್ಮನೆ ಮಾತನಾಡುವುದಲ್ಲ, ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲʼ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/HK_Kumaraswamy/status/1445970674053312512?t=xgIVMpScQs1F07ipD_4dNA&s=19
Tags: BJPRSSಆರೆಸ್ಸೆಸ್ಎಚ್ ಡಿ ಕುಮಾರಸ್ವಾಮಿಜೆಡಿಎಸ್ನಳಿನ್ ಕುಮಾರ್ ಕಟೀಲ್ಫ್ಯಾಮಿಲಿ ಬಿಸಿನೆಸ್ʼಬಿಜೆಪಿಸ್ವಯಂಸೇವಕರುಹೆಚ್‌ಕೆ ಕುಮಾರಸ್ವಾಮಿ
Previous Post

ಜಿಡಿಎಸ್ ನವರು ಕಾಂಗ್ರೆಸ್ ಸೋಲಿಸಲು ಅಥವಾ ಬಿಜೆಪಿ ಗೆಲ್ಲಿಸಲು ತಮ್ಮ ಅಭ್ಯರ್ಥಿ ಕಣಕ್ಕಿಳಿಸಿದ್ದಾರೋ? DKShivakumar

Next Post

2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ

Related Posts

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ
ರಾಜಕೀಯ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

by ಪ್ರತಿಧ್ವನಿ
April 23, 2026
0

ತಮಿಳುನಾಡಿನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಮಹತ್ವವನ್ನು ಮನದಟ್ಟು ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.“2026ರ ವಿಧಾನಸಭಾ ಚುನಾವಣೆಯಲ್ಲಿ ನಾನು ನನ್ನ ಮತವನ್ನು...

Read moreDetails
ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

April 23, 2026
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
Next Post
2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ

2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada