ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಮಗ್ರವಾಗಿ ಸಭೆ ಮಾಡುತ್ತೇನೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಮಾತನಾಡಿದ್ದಾರೆ. ಈಗ ೧೨ ದೇಶಗಳಲ್ಲಿ ಈ ತಳಿ ಬಂದಿದೆ. ಅಂತರಾಷ್ಟ್ರೀಯ ವಿಮಾನಗಳು ಬರ್ತಾ ಇದ್ದಾವೆ. ಬಹಳ ಎಚ್ಚರಿಕೆಯಿಂದ ಪರೀಕ್ಷೆ ಮಾಡುತ್ತಿದ್ದೇವೆ. ಹಿಂದೆ ಬಂದವರನ್ನು ತಪಾಸಣೆ ಮಾಡಿದ್ದೇವೆ. ಹಾಗಾಗಿ ಜನರಿಗೆ ಮತ್ತಷ್ಟು ತೊಂದರೆ ಕೊಡುವುದು ಬೇಡ. ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ತಿಳಿಸಿದರು.