ನಮ್ಮ ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಸದ್ದಿಲ್ಲದೆ ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾಗಿರುತ್ತವೆ, ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಕಂಬ್ಳಿಹುಳ.
ಈಗಾಗಲೇ ಟೈಟಲ್ ಮೂಲಕ ಸಿನಿರಸಿಕರ ಗಮನ ಸೆಳೆದಿದ ಚಿತ್ರತಂಡಕ್ಕೆ ಗೃಹ ಸಚಿವ ಆರಹ ಜ್ಞಾನೇಂದ್ರ ಸಾಥ್ ನೀಡಿದ್ದಯ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸಿನಿಮಾ ಮಾಯಾಜಗತ್ತು ಸಿಹಿ ಕಹಿ ಎಲ್ಲವೂ ಇದರಲ್ಲಿರುತ್ತೆ. ಒಂದು ಹೋರಾಟದ ಮನೋಭಾವ ಇದ್ದಾಗ ಮಾತ್ರ ಸಿನಿಮಾ ಮಾಡಲು ಸಾಧ್ಯ ಈ ಚಿತ್ರದ ನಿರ್ಮಾಪಕರಲ್ಲಿಯೂ ಅಂತಹದ್ದೊಂದು ಹೋರಾಟದ ಮನೋಭಾವ ಇದ್ದಿದ್ದರಿಂದ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮಲೆನಾಡಿನ ಯುವಕರು ತಾವು ಬೆಳೆದಂತ ಊರು, ಪರಿಸರ, ಬದುಕು ಇವುಗಳ ಆಧಾರ ಮೇಲೆ ಕಥೆ ಕಟ್ಟಿ ಸಿನಿಮಾ ಮಾಡುತ್ತಾರೆ. ನೈಜತೆಯಿಂದ ಕೂಡಿರುವ ‘ಕಂಬ್ಳಿಹುಳ’ ಸಿನಿಮಾ ಟ್ರೇಲರ್ ನೋಡಿದಾಗ ನನಗೂ ಅದೇ ಅನಿಸಿದ್ದು, ಖಂಡಿತಾ ಸಿನಿಮಾ ಯಶಸ್ಸು ಆಗುತ್ತೆಂದು ಭವಿಷ್ಯ ನುಡಿದಿದ್ದಾರೆ.

ಚಿತ್ರದ ನಿರ್ದೇಶಕ ನವನ್ ಶ್ರೀನಿವಾಸ್ ಮಾತನಾಡಿ ಇಡೀ ಸಿನಿಮಾ ತಂಡ ಹೊಸಬರಿಂದ ಕೂಡಿದ್ದರಿಂದ 90 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವು. ಇದೀಗ ಅಷ್ಟು ದಿನಗಳ ಶ್ರಮ ನವೆಂಬರ್ 4ರಂದು ತೆರೆ ಮೇಲೆ ಅನಾವರಣಗೊಳ್ಳುತ್ತಿದೆ. ಮಲೆನಾಡು ಭಾಗದಲ್ಲಿ ನಡೆಯುವ ಪ್ರೇಮಕಥೆ ಇದು. ನಾನು ಕೂಡ ಮಲೆನಾಡಿನವನಾದ್ದರಿಂದ ಈಸಿಯಾಗಿ ಹೇಳಬಹುದೆಂದು ಆ ಭಾಗದ ಕಥೆಯನ್ನೇ ಆಯ್ಕೆ ಮಾಡಿಕೊಂಡೆ. ಖಂಡಿತಾ ಸಿನಿಮಾ ಎಲ್ಲರಿಗೂ ಒಳ್ಳೆಯ ಫೀಲ್ ಕೊಡಲಿದೆ ಎಂದು ಹೇಳಿದ್ದಾರೆ.
ನಾಯಕ ಅಂಜನ್ ನಾಗೇಂದ್ರ ಮಾತನಾಡಿ ಕಂಬ್ಳಿಹುಳ ನನಗೆ ಹೊಸ ಜೀವನ ಕೊಟ್ಟಂತ ಸಿನಿಮಾ. ನಿರ್ದೇಶಕರಿಗೆ ನನಗೆ ಯಾವುದಾದರೂ ಪಾತ್ರ ಕೊಡಿ ಮಾಡುತ್ತೇನೆ ಎಂದಿದ್ದೆ ಒಂದಷ್ಟು ದಿನಗಳ ನಂತರ ಈ ಸಿನಿಮಾದಲ್ಲಿ ಹೀರೋ ಪಾತ್ರ ಮಾಡಬೇಕು ಎಂದ್ರು. ನಾನು ರಂಗಭೂಮಿ ಕಲಾವಿದನಾದ್ದರಿಂದ ಸಿನಿಮಾ ನಟನೆಗೆ ಹೊಂದಿಕೊಳ್ಳಲು ಒಂದಿಷ್ಟು ವರ್ಕ್ ಶಾಪ್ ಮಾಡಿ ನಟಿಸಿದ್ದೇನೆ. ಇಲ್ಲಿವರೆಗೆ ನಮ್ಮ ಸಿನಿಮಾಗೆ ಹೇಗೆ ಸಪೋರ್ಟ್ ಮಾಡಿದ್ದೀರಾ ಹಾಗೆಯೇ ಬಿಡುಗಡೆಯಾದ ಮೇಲು ಪ್ರೀತಿ ತೋರಿಸಿ ಪ್ರೋತ್ಸಹಿಸಿ ಎಂದು ವಿನಂತಿಸಿದ್ದಾರೆ.
ಚಿತ್ರದ ನಾಯಕಿ ಅಶ್ವಿತಾ ಆರ್ ಹೆಗ್ಡೆ ಮಾತನಾಡಿ ಚಿತ್ರದಲ್ಲಿ ಮಲೆನಾಡಿನಲ್ಲಿ ವಾಸವಾಗಿರುವ ಮಲಯಾಳಿ ಹುಡುಗಿಯ ಪಾತ್ರ ನಿರ್ವಹಿಸುತ್ತಿದ್ದೇನೆ. ಮೂಲತಃ ನಾನು ರಂಗಭೂಮಿ ಕಲಾವಿದೆ. ನಮ್ಮೆಲ್ಲರಿಗೂ ಚಿತ್ರರಂಗ ಹೊಸತು. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಹೊಸಬರ ಸಿನಿಮಾ ನೋಡಿ ಹಾರೈಸಿ. ಅವಕಾಶ ನೀಡಿದ್ದಕ್ಕಾಗಿ ಚಿತ್ರದ ನಿರ್ದೇಶಕರಿಗೆ ನಾನು ಥ್ಯಾಂಕ್ಸ್ ಹೇಳುತ್ತೇನೆ ಎಂದು ಹೇಳಿದ್ದಾರೆ.
https://mobile.twitter.com/JnanendraAraga/status/1583052928444952577






