ಕಾಲು ಜಾರಿ ಬಿದ್ದು ಪೆಟ್ಟ ಮಾಡಿಕೊಂಡಿದ್ದ ಸಾಲುಮರದ ತಿಮ್ಮಕ್ಕ ( saalumarada thimmakka ) ಅವರನ್ನು ಬೆಂಗಳೂರಿನ ( Bengaluru ) ಜಯನಗರದ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಸಾಲು ಮರದ ತಿಮ್ಮಕ್ಕ ಅವರ ಅಭಿಮಾನಿಗಳು ಮತ್ತು ಪರಿಸರ ಪ್ರೇಮಿಗಳು ( Nature Lovers ) ಆತಂಕ ವ್ಯಕ್ತ ಪಡಿಸಿದ್ದರು, ಮರಗಳನ್ನೇ ( trees ) ಮಕ್ಕಳಂತೆ ( Children ) ಮಮಕಾರದಿಂದ ನೀರೆರೆದು ಪೋಷಿಸಿ, ಪ್ರಕೃತಿ ಮಾತೆಗೆ ಕೊಡುಗೆ ನೀಡಿ ಮಾದರಿಯಾಗಿದ್ದ ಮಹಾತಾಯಿ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಆರೋಗ್ಯ ಈಗ ಸುದಾರಿಸಿಕೊಳ್ಳುತ್ತಿದ್ದು ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದು ಬಂದಿದೆ.
![](https://pratidhvani.com/wp-content/uploads/2023/08/download-13.jpeg)
ಸಾಲು ಮರದ ತಿಮ್ಮಕ್ಕನವರು ಕಾಲು ಜಾರಿ ಬಿದ್ದಿದ್ದರಿಂದ ಬೆನ್ನು ಮೂಳೆಗೆ ಪೆಟ್ಟಾಗಿದೆ, ಭಾನುವಾರ ಸಂಜೆ ಬೆಂಗಳೂರಿನ ಜಯನಗರದ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದಿದ್ದರು. ಸದ್ಯ ಆಸ್ಪತ್ರೆಯಲ್ಲಿ ಸಾಲು ಮರದ ತಿಮ್ಮಕ್ಕನವರಿಗೆ ಎಂಆರ್ಐ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಕಾಲು ಜಾರಿ ಬಿದ್ದ ಹಿನ್ನೆಲೆಯಲ್ಲಿ ಬೆನ್ನು ಮೂಳೆಯಲ್ಲಿ ನೋವು ಕಾಣಿಸಿಕೊಂಡಿದೆ.
ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಇನ್ನು ರಾಜ್ಯ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಚಿಕಿತ್ಸೆಗೆ ಸರಕಾರದಿಂದ ಎಲ್ಲಾ ರೀತಿಯಾದ ನೆರವನ್ನ ನೀಡಲಾಗುತ್ತೆ ಎಂಬ ಮಾಹಿತಿಯನ್ನ ನೀಡಿದ್ದಾರೆ.