• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in Top Story, ಕರ್ನಾಟಕ, ರಾಜಕೀಯ
0
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Share on WhatsAppShare on FacebookShare on Telegram

ಬೆಂಗಳೂರು : ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಂತ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದರಲ್ಲಿ ತಪ್ಪೇನಿದೆ ? ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪ್ರಶ್ನಿಸಿದ್ದಾರೆ.

ADVERTISEMENT

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಪರಮೇಶ್ವರ್‌ ಹೇಳಿರುವುದರಲ್ಲಿ ತಪ್ಪಿಲ್ಲ. ಅವರ ಬೇಡಿಕೆ ಸರಿಯಾಗಿಯೇ ಇದೆ. ನಮ್ಮ ಕಾಂಗ್ರೆಸ್‌ ಪಕ್ಷಕ್ಕೆ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದ ಮತದಾರರೇ ಮುಖ್ಯವಾಗಿದ್ದಾರೆ. ಎಂಟು ವರ್ಷ ಅಧ್ಯಕ್ಷರಾಗಿ ಪರಮೇಶ್ವರ ಅವರೂ ಇದ್ರೂ, ಬಹಳಷ್ಟು ಕಾರ್ಯಕ್ರಮ ಮಾಡಿದ್ರೂ ಸರ್ಕಾರ ಬಂತೂ. ಆ ರೀತಿ ಆಗಬೇಕು ಅನ್ನೋದು ನಮ್ಮ ಭಾವನೆ. ಹೀಗಾಗಿ ಅವರಿಗೂ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕೆಂಬ ಆಸೆ ಬಹಳ ದಿನಗಳಿಂದಲೂ ಇದೆ ಎನ್ನುವ ಮೂಲಕ ಜಾರಕಿಹೊಳಿ ದಲಿತ್‌ ಕಾರ್ಡ್‌ ಉರುಳಿಸಿದ್ದಾರೆ.

ಪಕ್ಷ ಅಧಿಕಾರಕ್ಕೆ ತಂದಿರುವ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಗೆ ಪ್ರತಿಕಿಯಿಸಿ, ಅವರು ಸರಿಯಾಗಿ ಹೇಳಿದಾರೆ. ಈ ಪಕ್ಷ ಅಧಿಕಾರಕ್ಕೆ ಬರಲು
ಬಹಳಷ್ಟು ಜನ ಪ್ರತ್ಯಕ್ಷವಾಗಿ ಪರೋಕ್ಷವಾಗಿ ದುಡಿದಿದ್ದಾರೆ. ಈ ಹಿಂದೆ1960ರಲ್ಲಿ ತೇನ್ ಸಿಂಗ್ ಹಿಮಾಲಯ ಪರ್ವತ ಏರಿದಾಗ ಇಡೀ ಜಗತ್ತಿನ ಎಲ್ಲಾ ಪತ್ರಿಕೆಗಳು ತೇನ್ ಸಿಂಗ್ ಹಿಮಾಲಯ ಏರಿದ್ರೂ ಅಂತಾ ಬರೆದರು. ಅವರ ಜೊತೆಗೆ ಇನ್ನೂ 14ಜನ ಇದ್ರೂ ಅವರ ಹೆಸರು ಬರಲಿಲ್ಲ. ಇದು ಹಾಗೆಯೇ ಆಗಿದೆ ಎಂದು ಉದಾಹರಣೆಯ ಮೂಲಕ ಪರೋಕ್ಷವಾಗಿ ಡಿಕೆಶಿಗೆ ಸತೀಶ್‌ ತಿರುಗೇಟು ನೀಡಿದ್ದಾರೆ.

Satish Jarkiholi: ನಾನೇ 5 ವರ್ಷ ಸಿಎಂ ಎಂದ ಸಿದ್ದು.. ಸಾಹುಕಾರ್ ಖಡಕ್ ರಿಯಾಕ್ಷನ್  #pratidhvani

ಪಕ್ಷಕ್ಕಾಗಿ ದುಡಿದವರು ಇನ್ನೂ ಬಹಳಷ್ಟು ಜನರು ಇದಾರೆ. ಆ ತೇನ್ ಸಿಂಗ್ ಜೊತೆಗೆ ಟೆಂಟ್ ಹೊರುವವರು, ಚಹಾ ಮಾಡಿದವರು ಸೇರಿ ಎಲ್ಲರೂ ಹಿಮಾಲಯ ಪರ್ವತ ಏರಿದ್ದರು. ಆದರೆ ಅವರ ಹೆಸರು ಎಲ್ಲಿಯೂ ಬರಲಿಲ್ಲ ಕೇವಲ ತೇನ್ ಸಿಂಗ್ ಹೆಸರಷ್ಟೇ ಬಂತು. ಇಲ್ಲಿಯೂ ಹಾಗೆ ಪಕ್ಷ ಬರಲು ಹದಿನಾಲ್ಕು ಇರಬಹುದು ಅಥವಾ ಎಲ್ಲಾ ಶಾಸಕರದ್ದು ಅವರದೇ ಆದ ಕೊಡುಗೆ ಇದೆ. ಸರ್ಕಾರ ಬರಲು ಅವರದೇ ಸ್ವಂತ ಎಪರ್ಟ್ ಇದೆ. ಸ್ವಾಭಾವಿಕವಾಗಿ ಎಲ್ಲರೂ ಕ್ಲೈಮ್ ಮಾಡೋರೆ. ಎಂದು ಹೇಳಿದ್ದಾರೆ.

ಕೆಲವೇ ಜನರಿಂದ ಅಧಿಕಾರ ಬಂದಿದೆ ಅನ್ನೋದನ್ನು ನಾನು ಕೂಡ ಒಪ್ಪುವುದಿಲ್ಲ. ಒಂದು ಕೋಟಿಗೂ ಅಧಿಕ ಜನ ನಮಗೆ ವೋಟ್ ಹಾಕಿದ್ದಾರೆ. ಹೀಗಾಗಿ ಶಾಸಕರು, ಸಚಿವರು ನಮ್ಮ ಇತಿಮಿತಿಯಲ್ಲಿರಬೇಕು ಎಲ್ಲಾ ನನ್ನಿಂದ ಆಗಿದೆ ಅನ್ನೋದು ತಪ್ಪು. ಇದೆಲ್ಲಾ ನಮ್ಮ ಗಮನಕ್ಕೆ ಇರಬೇಕು ಎಂದು ಚಾಟಿ ಬೀಸಿದ್ದಾರೆ.

Satish Jarakiholi on Siddaramaiah: ಸಿಎಂ ಸಿದ್ರಾಮಯ್ಯ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೀಗ್ಯಾಕಂದ್ರು?

ಈಗ ನಮ್ಮ ಶಾಸಕರು ಸಹ ತಮ್ಮದೇ ಆದ ಕಷ್ಟದಲ್ಲಿ ಇದ್ದಾರೆ. ಮೊದಲು ಆಯ್ಕೆಯಾದವರು ಸೇರಿದಂತೆ, ಪಕ್ಷದ ಜೊತೆಗೆ ಶಾಸಕರ ಶ್ರಮ, ಕಾರ್ಯಕರ್ತರ ಶ್ರಮದಿಂದ ಸರ್ಕಾರ ಬಂದಿದೆ ಅನ್ನೋದು ಗಮನಿಸಬೇಕು. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು ಅನ್ನೋದು ನಮ್ಮ ಉದ್ದೇಶ. ಮುಖ್ಯಮಂತ್ರಿಯನ್ನು ಮಾಡೋದು ಬಿಡೋದು ಹೈಕಮಾಂಡ್‌ ಕೈಯಲ್ಲಿದೆ. ಒನ್‌ಮ್ಯಾನ್ ಬಗ್ಗೆ ಹೇಳಲು ಹೋಗುವುದಿಲ್ಲ, ಆದರೆ ಪಕ್ಷ ಬರಲು ಎಲ್ಲರ ಸಹಕಾರ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

Tags: CM Siddaramaiahcongressdcm dk shivkumarMinister Satish JarakiholiPolitics
Previous Post

ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!

Next Post

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada