ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಗಂಡಸಿ ಬಳಿ ನಡೆದಿದೆ.
ರಮೇಶ್ (45) ಮೃತ ವ್ಯಕ್ತಿ
ಬುಧವಾರ ರಾತ್ರಿ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಗಂಡಸಿ ಬಳಿ ಎದುರಿನಿಂದ ಬರುತ್ತಿದ್ದ ಬೈಕ್’ಗೆ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ.
ಗಂಭೀರವಾರ ಗಾಯಗೊಂಡಿದ್ದ ರಮೇಶ್ ಅವರನ್ನು ಕೂಡಲೇ ಗಂಡಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಿಯೇ ರಮೇಶ್ ಮೃತಪಟ್ಟಿದ್ದರು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
![](https://pratidhvani.com/wp-content/uploads/2022/12/death16167350591629007045164259657316579402901672403775.jpg)
ಅಪಘಾತ ನಡೆದ ಸಂದರ್ಭದಲ್ಲಿ ಗೃಹ ಸಚಿವರು ಪ್ರಯಾಣಿಸುತ್ತಿದ್ದ ಕಾರು ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿತ್ತು. ಅಪಘಾತದ ಬಗ್ಗೆ ಸಚಿವರಿಗೆ ನಾವು ಮಾಹಿತಿ ನೀಡದೇ ಇರುವುದರಿಂದ, ತೀರ್ಥಹಳ್ಳಿ ತಲುಪುವವರೆಗೆ ಘಟನೆ ಬಗ್ಗೆ ಅವರಿಗೆ ಗೊತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನಂತೆ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳ ನಂತರ ಮೃತದೇಹವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡುವುದಾಗಿ ತಿಳಿಸಿದ್ದಾರೆ.