ಕೋಲಾರ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹೂಡಿ ವಿಜಯ್ ಕುಮಾರ್ ತೀರ್ಮಾನಿಸಿದ್ದಾರೆ.

ಇದರ ಜೊತೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದು ಮನೆಯ ಮುಂದಿದ್ದ ಪ್ರಧಾನಿ ಭಾವಚಿತ್ರ ಹರಿದು ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿಯಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯರಾಗಿ ಇದ್ದವರೂ ಸಹ ಇಂದು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಬೆಂಬಲಿಗರ ಜೊತೆ ಸಭಡ ನಡೆಸಿದ ಹೂಡಿ ವಿಜಯ್ ಕುಮಾರ್ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರ ಘೋಷಿಸಿದ್ದಾರೆ. ಬಿಜೆಪಿ ರಾಜ್ಯ ಫಲಾನುಭವಿಗಳ ಪ್ರಕೋಷ್ಠ ಸದಸ್ಯ ಸ್ಥಾನಕ್ಕೆ ಹೂಡಿ ವಿಜಯ್ ಕುಮಾರ್ ರಾಜೀನಾಮೆ ನೀಡುವ ವೇಳೆಯಲ್ಲಿ ಹೂಡಿ ವಿಜಯ್ ಕುಮಾರ್ ಪತ್ನಿ ಕಣ್ಣೀರು ಹಾಕಿದ ದೃಶ್ಯ ಕಂಡು ಬಂತು.