ನಮ್ಮ ನಡೆ ಮತಗಟ್ಟೆ ಕಡೆ, ಮತದಾನ ಮಾಡಿದವನೇ ಹೀರೊ , ಮತದಾನ ನಮ್ಮ ಹಕ್ಕು , ಚುನಾವಣಾ ಪರ್ವ ದೇಶದ ಗರ್ವ
ಹೈಲೈಟ್ಸ್ :..
“ ಯಕ್ಷಗಾನದಮೂಲಕಮತದಾನಜಾಗೃತಿಅಭಿಯಾನ “
ಧ್ವಜಾರೋಹಣ ಕಾರ್ಯಕ್ರಮ. ಮತದಾನ ಜಾಗೃತಿ *ಮತದಾನ ನಮ್ಮ ಕರ್ತವ್ಯ-ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳೋಣ :

ಹೊಸಗುಂದ : Sagara : May 01 : ತಾಲ್ಲೂಕು ಸ್ವೀಪ್ ಸಮಿತಿ ಸಾಗರ ರವರಿಂದ ಸಾಗರ ತಾಲ್ಲೂಕು ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಗುಂದ ಗ್ರಾಮದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದಿನಾಂಕ : 30-04-2024 ರಂದು ವಿಶಿಷ್ಟ ರೀತಿಯ ಜನಜಾಗೃತಿ ಸ್ವೀಪ್ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಸದೃಢ ದೇಶ ಕಟ್ಟುವ ಕೆಲಸವನ್ನು ಮತ ಚಲಾಯಿಸುವ ಮೂಲಕ ನಾವೆಲ್ಲ ಮಾಡಬೇಕು – ಕಾರ್ಯ ನಿರ್ವಾಹಕ ಅಧಿಕಾರಿ ಸುನೀತಾ ಎ .ಎಸ್
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ರೀತಿಯ ಸರ್ಕಾರ ರಚಿಸಬೇಕು ಎಂಬ ಅಧಿಕಾರ ಪ್ರಜೆಗಳಿಗೆ ಇರುತ್ತದೆ , ದೇಶವನ್ನು ಕಾಯುವ ಕೆಲಸ ಸೈನಿಕ ಮಾಡುತ್ತಾನೆ. ಆದರೆ ದೇಶವನ್ನು ಕಟ್ಟುವ ಕೆಲಸ ಮತದಾನದ ಮೂಲಕ ಆಗಬೇಕು, ಭಾರತೀಯ ಸಂವಿಧಾನ ನಮಗೆ ಮತದಾನ ಮಾಡುವ ಹಕ್ಕನ್ನು ನೀಡಿದ್ದು, ನಾವೆಲ್ಲರೂ ಮತದಾನವನ್ನು ನಮ್ಮ ಕರ್ತವ್ಯ ಎಂದು ಭಾವಿಸಿ ಮತದಾನ ಮಾಡೋಣ , ಅದಕ್ಕಾಗಿ ಐದು ವರ್ಷಕ್ಕೆ ಒಮ್ಮೆ ಬರುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿ ಸದೃಢ ದೇಶ ಕಟ್ಟುವ ಕೆಲಸವನ್ನು ಮತ ಚಲಾಯಿಸುವ ಮೂಲಕ ನಾವೆಲ್ಲ ಮಾಡಬೇಕು ಎಂದು ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಸುನೀತಾ ಎ .ಎಸ್ ಕರೆ ನೀಡಿದರು.
ಯಕ್ಷಗಾನದಮೂಲಕಮತದಾನಜಾಗೃತಿಅಭಿಯಾನ
ಮತದಾನ ಜಾಗೃತಿ ಅಭಿಯಾನದಲ್ಲಿ ಶ್ರೀ ಚೌಡಮ್ಮ ದೇವಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಸಿಗಂದೂರುರವರಿಂದ ವಿಶಿಷ್ಟ ರೀತಿಯ ಯಕ್ಷಗಾನ ಪ್ರದರ್ಶನದ ಮೂಲಕ ಮತದಾನ ಜಾಗೃತಿಯನ್ನು ಮೂಡಿಸಲಾಯಿತು.
ಮತದಾನ ಜಾಗೃತಿ ಅಭಿಯಾನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯ ಮುಂಭಾಗದಲ್ಲಿ ಜಾಗೃತ ಮತದಾರರ ವೇದಿಕೆ ಹಾಗೂ ಗ್ರಾಮ ಪಂಚಾಯತ್ ಸ್ವೀಪ್ ಸಮಿತಿಯಿಂದ ಏ.30 ರಂದು ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರು ನಮ್ಮ ನಡೆ ಮತಗಟ್ಟೆ ಕಡೆ, ಮತದಾನ ಮಾಡಿದವನೇ ಹೀರೊ , ಮತದಾನ ನಮ್ಮ ಹಕ್ಕು , ಚುನಾವಣಾ ಪರ್ವ ದೇಶದ ಗರ್ವ &, *ಮತದಾನ ನಮ್ಮ ಕರ್ತವ್ಯ-ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳೋಣ : ಎಂದು ವಿಶಿಷ್ಟ ರೀತಿಯಲ್ಲಿ – ಸದರಿ ಯಕ್ಷಗಾನ ಪ್ರದರ್ಶನವನ್ನು ಶ್ರೀ ಆನಂದ್ ಅಂಕೋಲಾ ರವರ ಭಾಗವತಿಕೆಯಲ್ಲಿ ಮತ್ತು ಉದಯ್ ಕಲ್ಲಾಳ್, ಧನಂಜಯ್ ಪುರದಮಠ, ದೇವೇಂದ್ರ ಇಡುವಾಣಿ, ಮಹೇಶ, ನಾರಾಯಣ , ಗೌಡ ನಾಗಭೂಷಣ ಮುಂತಾದ ಪಾತ್ರಧಾರಿಗಳು ಶ್ರೀ ಚಂದ್ರಪ್ಪ ರವರ ನಿರ್ದೇಶನದಡಿಯಲ್ಲಿ ಯಕ್ಷಗಾನ ಪ್ರದರ್ಶನದ ಮೂಲಕ ಮತದಾನ ಜಾಗೃತಿಯನ್ನು ಮೂಡಿಸಿದರು.
” ಮತದಾನದ ಬಗ್ಗೆ ಜಾನಪದ ಶೈಲಿಯಹಾಡು “
ಮತದಾನ ಮಾಡುವ ಬಗ್ಗೆ ಜಾನಪದ ಶೈಲಿಯಲ್ಲಿ ಹಾಡು ಹೇಳುವ ಮೂಲಕ ಮತ ದಾನದ ಬಗ್ಗೆ ಜಾಗೃತಿ ಮೊಡಿಸುವ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಾಗರ ತಾಲ್ಲೂಕು ಪಂಚಾಯತಿಯ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಾಪಂ.ಸಾಗರ ರವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಸಾಗರ ತಾಲ್ಲೂಕಿನ 35 ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಚಿತ್ರ – ಮಾಹಿತಿ – ತೀರ್ಥಹಳ್ಳಿ ಅನಂತ ಕಲ್ಲಾಪುರ





