• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರಾಜವರ್ಧನ್‌ ಅಭಿನಯದ ʻಪ್ರಣಯಂʼ ಶ್ರೀಮಂತಿಕೆಗೆ ಹಾಟ್ ಟ್ರೈಲರ್

Any Mind by Any Mind
January 19, 2024
in ಸಿನಿಮಾ
0
ರಾಜವರ್ಧನ್‌ ಅಭಿನಯದ ʻಪ್ರಣಯಂʼ ಶ್ರೀಮಂತಿಕೆಗೆ ಹಾಟ್ ಟ್ರೈಲರ್
Share on WhatsAppShare on FacebookShare on Telegram

ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ “ಪ್ರಣಯಂ” ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ADVERTISEMENT

ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನೀಡಿದ ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ. ಫೆಬ್ರವರಿ 9ಕ್ಕೆ ರಾಜ್ಯಾದ್ಯಂತ ತೆರೆಕಾಣುತ್ತಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಾಜಿ ಉಪ ಮೇಯರ್ ಮೋಹನ್ ರಾಜು ಟ್ರೈಲರ್ ರಿಲೀಸ್ ಮಾಡಿ ಈ ಟೈಟಲ್ ಕನ್ನಡದ ಜೊತೆ ತೆಲುಗು ಭಾಷೆಗೂ ಹತ್ತಿರವಾಗುವಂತಿದೆ. ಹಾಡು, ಕಾನ್ಸೆಪ್ಟ್ ಎರಡೂ ಚೆನ್ನಾಗಿದೆ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್ ಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಝಂಕಾರ್ ಮ್ಯೂಸಿಕ್ ಈ ಚಿತ್ರದ ಹಾಡುಗಳನ್ನು ಹೊರತಂದಿದೆ. ಕುನಾಲ್ ಗಾಂಜಾವಾಲ, ಶ್ರೇಯಾ ಘೋಷಾಲ್ ಇತರರು ದನಿಯಾಗಿದ್ದಾರೆ. ಚಿತ್ರದಲ್ಲಿ ಗೋವಿಂದೇಗೌಡ, ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್ ಉಳಿದ ಪಾತ್ರಗಳಲ್ಲಿ ನಟಿಸಿದ್ದಾರೆ. ಮನೋಮೂರ್ತಿ ಅವರ ಸಂಗೀತ ನಿರ್ದೇಶನ, ವಿ. ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ. ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಪ್ರಣಯಂ ಚಿತ್ರಕ್ಕಿದೆ.

ಈ ಚಿತ್ರದಲ್ಲಿ ಜಯಂತ್ ಕಾಯ್ಕಿಣಿ ಅವರು ೩ ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವಿ.ನಾಗೇಶ್ ಆಚಾರ್ಯ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಮನೋಮೂರ್ತಿ ಚಿತ್ರದಲ್ಲಿ ೫ ಹಾಡಿದ್ದು, ಕ್ಯಾಮೆರಾ ವರ್ಕ್ ಅದ್ಭುತವಾಗಿ ಮೂಡಿಬಂದಿದೆ. ಪ್ರಣಯಂ ಅಂದ್ರೆ ಲವ್, ಅದನ್ನಿಲ್ಲಿ ಢಿಫರೆಂಟಾಗಿ ಹೇಳಿದ್ದಾರೆ. ಖಂಡಿತ ಈ ವರ್ಷದ ಮೊದಲ ಹಿಟ್ ಸಿನಿಮಾ ಆಗುತ್ತೆ ಎಂದರು.



ನಂತರ ಜಯಂತ್ ಕಾಯ್ಕಿಣಿ ಮಾತನಾಡಿ, ಪರಮೇಶ್ ತುಂಬಾ ಜೋಷ್ ಇರುವಂಥ ಪ್ರೊಡ್ಯೂಸರ್ ಸಿನಿಮಾಗಾಗಿ ತುಂಬಾ ಕಷ್ಟಪಡುತ್ತಾರೆ. ಮನೋಮೂರ್ತಿ ಹಾಗೂ ನಮ್ಮ ದಾಂಪತ್ಯಕ್ಕೆ ೧೭ ವರ್ಷ ಆಯ್ತು. ಆಗಿದ್ದ ಕುತೂಹಲ, ಚಡಪಡಿಕೆ ಈಗಲೂ ಇದೆ. ಹಿಂದೆ ಪರಮೇಶ್ ಅವರ ಕರಿಯ, ಗಣಪ, ಪಾರಿಜಾತ ಚಿತ್ರಗಳಿಗೂ ನಾನೇ ಸಾಂಗ್ ಬರೆದಿದ್ದೆ. ಇದರಲ್ಲಿ ೩ ಹಾಡನ್ನು ಬರೆದಿದ್ದೇನೆ ಎಂದು ಹೇಳಿದರು. ನಿರ್ದೇಶಕ ದತ್ತಾತ್ರೇಯ ಮಾತನಾಡುತ್ತ ನಾನು ಈ ಸ್ಕ್ರಿಪ್ಟ್ ಮಾಡಿಕೊಂಡು ಬಂದಾಗ ನಿರ್ಮಾಪಕರು ತುಂಬಾ ಚೆನ್ನಾಗಿ ಬಂದಿದೆ ಎಂದು ಖುಷಿಯಿಂದ ಹಗ್ ಮಾಡಿದರು. ಸುಮಾರು ಲೊಕೇಶನ್ ಗಳನ್ನು ನೋಡಿ ಕೊನೆಗೆ ಮಡಿಕೇರಿಯಲ್ಲಿ ನಮಗೆ ಬೇಕಾದ ಲೊಕೇಶನ್ ಸಿಕ್ತು. ಎಲ್ಲಾ ಲೆಜೆಂಡರಿಗಳ ಸಹಕಾರದಿಂದ ಸಿನಿಮಾ ಅದ್ಭುತವಾಗಿ ಬಂದಿದೆ. ನಾಗೇಶ್ ನನಗೆ ಇನ್ನೊಂದು ಕಣ್ಣಿದ್ದ ಹಾಗೆ. ತುಂಬಾ ಚೆನ್ನಾಗಿ ಶೂಟ್ ಮಾಡಿಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಳ್ಳೆಯ ಸಿನಿಮಾ ಕೊಟ್ಟಿದ್ದೇವೆ. ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

ನಾಯಕ ರಾಜವರ್ಧನ್ ಮಾತನಾಡುತ್ತ ಬಿಚ್ಚುಗತ್ತಿಗೂ ಮುಂಚೆಯೇ ಪರಮೇಶ್ ಈ ಕಥೆಯನ್ನು ಹೇಳಿದರು .ಇವತ್ತಿನ ಫ್ಯಾಮಿಲಿಗಳಲ್ಲಿ ಈ ಥರದ ಘಟನೆಗಳು ನಡೆಯುತ್ತಲೇ ಇವೆ. ಅಂಥಾ ಒಂದು ಸ್ಟ್ರಾಂಗ್ ಕಂಟೆಂಟ್ ಇಟ್ಟುಕೊಂಡು ನಾವೀ ಸಿನಿಮಾ ಮಾಡಿದ್ದೇವೆ. ಬಿ.ಸಿ. ಸೆಂಟರ್ ಆಡಿಯನ್ಸ್ ಗಳಿಗೆ ಬೇಕಾದ ಕಾನ್ಸೆಪ್ಟ್ ಚಿತ್ರದಲ್ಲಿದೆ. ಆಗಿನ್ನೂ ವಿದೇಶದಿಂದ ಬರುವ ಗೌತಂ ಎಂಬ ಪಾತ್ರ ಮಾಡಿದ್ದೇನೆ. ಆತ 5-10 ದಿನದಲ್ಲಿ ಸ್ವಂತ ರಿಲೇಶನ್ ನಲ್ಲೇ ಹುಡುಗಿಯೊಬ್ಬಳನ್ನು ಮದುವೆಯಾಗ್ತಾನೆ. ಆನಂತರ 15-20 ದಿನಗಳಲ್ಲಿ ನಡೆಯುವ ಕಥೆ, ನನ್ನದು ತುಂಬಾ ಇನ್ ಟೆನ್ಸಿವ್ ಆಗಿರುವ ಪಾತ್ರ. ಮನೋಮೂರ್ತಿ, ಜಯಂತ್ ಕಾಯ್ಕಿಣಿ ಅವರಂಥ ಲೆಜೆಂಡರಿಗಳ‌ ಜೊತೆ ಕೆಲಸ ಮಾಡಿದ್ದು ನನ್ನ ಅದೃಷ್ಟ ಎಂದರು.
ನಿರ್ಮಾಪಕ ಪರಮೇಶ್ ಮಾತನಾಡುತ್ತ ನಮ್ಮ ಚಿತ್ರವನ್ನು ಫೆ.9ರಂದು ರಿಲೀಸ್ ಮಾಡುತ್ತಿದ್ದೇವೆ. ನಾನು ಈವರೆಗೆ 9 ಸಿನಿಮಾ ಮಾಡಿದ್ದೇನೆ. ಆದರೂ ಗಾಂಧಿನಗರದಲ್ಲಿ ಪ್ರೊಡ್ಯೂಸರ್ ಗೆ ನೆಲೆಯೆ ಇಲ್ಲದಾಗಿದೆ. ನಮ್ಮದು ತುಂಬಾ ಕ್ರಿಟಿಕಲ್ ಫೀಲ್ಡ್. ಈಗ ಸಿನಿಮಾ ಹೇಗೋ ಮಾಡಿಬಿಡಬಹುದು. ರಿಲೀಸ್ ಮಾಡೋದು ತುಂಬಾ ಕಷ್ಟ. ರಿಲೀಸ್ ಡೇಟ್ ಅನೌನ್ಸ್ ಮಾಡಲಿಕ್ಕೇ ಭಯವಾಗುತ್ತೆ. ಬಿಡುಗಡೆಗೇ 2ಕೋಟಿ ಬೇಕಾಗುತ್ತೆ, ಎಲ್ಲಿಂದ ತರೋದು. ಹಾಗೂ, ರಿಲೀಸ್ ಮಾಡಲು ಮೂರು ಸಲ ಟ್ರೈ ಮಾಡಿದೆ. ಆಗಲಿಲ್ಲ. ಈಗ ಧೈರ್ಯ ಮಾಡಿದ್ದೇನೆ. ಇಂಡಸ್ಟ್ರಿಗೆ ಒಂದೊಳ್ಳೆ ಸಿನಿಮಾ ಕೊಟ್ಟಿದ್ದೇನೆ. ಜನ ಕೈ ಹಿಡಿಯುತ್ತಾರೆಂಬ ನಂಬಿಕೆಯಿದೆ ಎಂದರು.

Previous Post

ಕರ್ನಾಟಕ ಲೋಕಸೇವಾ ಆಯೋಗದಿಂದ ಇಲಾಖಾ ವಿದ್ಯಾರ್ಥಿನಿಲಯಗಳ ವಾರ್ಡನ್ ನೇಮಕಾತಿ ಪತ್ರ ವಿತರಣೆ

Next Post

ರಾಮಲಲ್ಲಾ‌ ಮೂರ್ತಿಯ ಮೊದಲ ಚಿತ್ರ ಹೊರಕ್ಕೆ: ಬಾಲರಾಮನ ಮುಖದ ಲಕ್ಷಣ ಕಣ್ತುಂಬಿಕೊಳ್ಳಲು ಕಾದಿರುವ ಭಕ್ತಸಮೂಹ

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
BBK  12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

BBK 12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

January 16, 2026
BBK 12: ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು: ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ

BBK 12: ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು: ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ

January 16, 2026
BIGG BOSS 12 – ಗಿಲ್ಲಿ ಗೆಲ್ಲಿಸಿದ ಗೂಗಲ್‌ : ರನ್ನರ್‌ ಅಪ್‌ ಯಾರು ಗೊತ್ತಾ..?

BIGG BOSS 12 – ಗಿಲ್ಲಿ ಗೆಲ್ಲಿಸಿದ ಗೂಗಲ್‌ : ರನ್ನರ್‌ ಅಪ್‌ ಯಾರು ಗೊತ್ತಾ..?

January 16, 2026
Next Post
ರಾಮಲಲ್ಲಾ‌ ಮೂರ್ತಿಯ ಮೊದಲ ಚಿತ್ರ ಹೊರಕ್ಕೆ: ಬಾಲರಾಮನ ಮುಖದ ಲಕ್ಷಣ ಕಣ್ತುಂಬಿಕೊಳ್ಳಲು ಕಾದಿರುವ ಭಕ್ತಸಮೂಹ

ರಾಮಲಲ್ಲಾ‌ ಮೂರ್ತಿಯ ಮೊದಲ ಚಿತ್ರ ಹೊರಕ್ಕೆ: ಬಾಲರಾಮನ ಮುಖದ ಲಕ್ಷಣ ಕಣ್ತುಂಬಿಕೊಳ್ಳಲು ಕಾದಿರುವ ಭಕ್ತಸಮೂಹ

Please login to join discussion

Recent News

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada