ಬೆಂಗಳೂರು:
ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇಸ್ರೇಲ್ ದಾಳಿಯ ನಂತರ ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್ಪಿಜಿ ಸರಬರಾಜು ಮೇಲೆ ಬೀರಿದೆ. ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ
ತೈಲ ಕಂಪನಿಗಳು 70 ದಿನಗಳವರೆಗೆ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದ್ದವು. ಆದರೆ, ಇದೀಗ ಏಕಾಏಕಿ ಪೂರೈಕೆಯನ್ನು ಸ್ಥಗಿತಗೊಳಿಸಿರುವುದು ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದೆ. ಕೂಡಲೇ ಸಂಬಂಧಪಟ್ಟ ಕೇಂದ್ರ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಗ್ಯಾಸ್ ಪೂರೈಕೆಯನ್ನು ತಕ್ಷಣವೇ ಪುನರಾರಂಭಿಸುವಂತೆ ಹೋಟೆಲ್ ಮಾಲೀಕರ ಸಂಘ ಆಗ್ರಹಿಸಿದೆ.
ಇಂದಿನಿಂದ ರಾಜ್ಯದಾದ್ಯಂತ ರಾಜ್ಯ ಬಂದ್ ಹಿನ್ನೆಲೆ ಜನಸಾಮಾನ್ಯರು, ಊಟದ ನಾಗರಿಕರು, ಪ್ರವಾಸಿಗರು ಹಾಗೂ ಇತರ ಸೇವೆಗಳ ಮೇಲೆ ದೊಡ್ಡ ಪ್ರಮಾಣದ ಪರಿಣಾಮ ಬೀರುತ್ತದೆ ಎಂದು ತಿಳಿಸಲಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಮತ್ತು ನ್ಯಾಯಾಂಗದ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಹೋಟೆಲು ಉದ್ಯಮವು ನಿರಂತರವಾಗಿ ಸೇವೆ ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.

ಕಳೆದ ಸುಮಾರು 70 ದಿನಗಳಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ರಾಜ್ಯ ಬಂದ್ಗೆ ಕರೆ ನೀಡಿರುವುದು ನಮಗೆ ತಿಳಿದಿದೆ. ಆದರೆ ಹೋಟೆಲು ಉದ್ಯಮವು ಸಾರ್ವಜನಿಕರಿಗೆ ಅವಶ್ಯಕ ಸೇವೆ ಒದಗಿಸುವ ಕ್ಷೇತ್ರವಾಗಿರುವುದರಿಂದ ರಾಜ್ಯ ಬಂದ್ನಿಂದ ಹೋಟೆಲು ಸೇವೆಗಳಿಗೆ ಯಾವುದೇ ವ್ಯತ್ಯಯ ಉಂಟಾಗದಂತೆ ಹೋಟೆಲುಗಳನ್ನು ತೆರೆಯಲಾಗುವುದು ಎಂದು ಸಂಘ ತಿಳಿಸಿದೆ.

ರಾಜ್ಯ ಬಂದ್ ಹಿನ್ನೆಲೆಯಲ್ಲಿ ಕೆಲವೊಂದು ಹೋಟೆಲುಗಳು ಬಂದ್ ಆಗಬಹುದು. ಈ ವಿಚಾರವಾಗಿ ಇಂದು ಸಂಜೆ 7.30 ಗಂಟೆಗೆ ಸಂಘದ ವತಿಯಿಂದ ತುರ್ತು ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೋಟೆಲ್ ಸಂಘದವರು ಹೇಳಿದ್ದಾರೆ.






