ನಿನ್ನೆ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು ಸಹಿತ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ದರ್ಬೆಯಲ್ಲಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದೆ.
![](https://pratidhvani.com/wp-content/uploads/2024/06/IMG_8094.jpeg)
ಇನ್ನು ಭಾರೀ ಮಳೆಗೆ ರಸ್ತೆಗಳು ನದಿಯಂತಾದವು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲೇ ನೀರು ನಿಂತಿದೆ. ಹೀಗಾಗಿ ರಸ್ತೆಯಲ್ಲಿ ನೀರು ಹೆಚ್ಚಾಗಿ ಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
![](https://pratidhvani.com/wp-content/uploads/2024/06/IMG_8092.jpeg)
ಯಾದಗಿರಿ ಜಿಲ್ಲೆಯಾದ್ಯಂತ ಕೂಡ ವರುಣಾರ್ಭಟಿಸಿದ್ದಾನೆ. ನಿನ್ನೆ ಸಂಜೆಯಿಂದ ಬೆಳಗಿನವರೆಗೆ ಸುರಿದ ಮಳೆಗೆ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ರಾತ್ರಿಯಿಡೀ ಆತಂಕದಲ್ಲಿ ಇರುವಂತಾಗಿದೆ. ಹಾವು-ಚೇಳುಗಳು ಮನೆಗೆ ಎಂಟ್ರಿ ಕೊಡ್ತಿರೋದ್ರಿಂದ ಜನರು ರಾತ್ರಿ ಪೂರ್ತಿ ಜಾಗರಣೆ ಕೂರುವಂತಾಗಿದೆ.