• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ADVERTISEMENT

ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು ಗುರುವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.

“ಕುಮಾರಸ್ವಾಮಿ ಆಗಲಿ, ನಾನಾಗಲಿ, ಬಿಜೆಪಿಯವರಾಗಲಿ ಎಲ್ಲರೂ ಅವರವರ ಪಕ್ಷದ ರಾಜಕಾರಣ ಮಾಡುತ್ತಾರೆ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ. ಈ ವಿಚಾರಕ್ಕೇ ಮೈತ್ರಿಯಲ್ಲಿ ತಿಕ್ಕಾಟ ನಡೆಯುತ್ತಿರಬಹುದು” ಎಂದು ತಿಳಿಸಿದರು.

“ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸುಮಾರು 10 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೆಲೆ ಇರುವ ಪ್ರದೇಶ. ಇಲ್ಲಿ ಬಿಜೆಪಿಯವರು ಜೆಡಿಎಸ್ ನವರನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ ಅದನ್ನು ಸಹಿಸಿಕೊಳ್ಳಲು ಜೆಡಿಎಸ್ ಗೆ ಸಾಧ್ಯವೇ? ಜೆಡಿಎಸ್ ಹಾಗೂ ಬಿಜೆಪಿ ವಿಲೀನವಾಗುವುದಾದರೆ ಈ ರೀತಿ ಮಾಡಬಹುದು” ಎಂದರು.

ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ:

ಪೆನ್ ಡ್ರೈವ್ ವಿಚಾರವಾಗಿ ನಿಮ್ಮ ಮೇಲೆ ಆರೋಪ ಮಾಡಿದ್ದ ಕುಮಾರಸ್ವಾಮಿ ಅವರು ಈಗ ಪ್ರೀತಂಗೌಡ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, “ಈಗ ಆ ವಿಚಾರ ಬೇಡ, ಆಮೇಲೆ ಮಾತನಾಡೋಣ. ಈಗ ಪಾದಯಾತ್ರೆ ಬಗ್ಗೆ ಚರ್ಚೆ ಮಾಡೋಣ. ನಾವು ಅವರ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಸರಕಾರದ ಕಾಲದ 30 ಹಗರಣಗಳಿವೆ. ದಿನಾ ಒಂದೊಂದು ಹಗರಣ ಬಿಚ್ಚಿಡುತ್ತೇವೆ. ಅವರ ಪಾದಯಾತ್ರೆ ಅಂತಿಮ ರೂಪುರೇಷೆ ಬಂದರೆ ನಾವು ನಮ್ಮ ಕಾರ್ಯಸೂಚಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ ರಾಜಭವನದ ಮೂಲಕ ರಾಜ್ಯ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಸಚಿವ ಸಂಪುಟ ಸಭೆ ಬಳಿಕ ನಾನು ಬಂದು ವಿವರಣೆ ನೀಡುತ್ತೇನೆ. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಿದೆ” ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಬಗ್ಗೆ ಪ್ರಧಾನಮಂತ್ರಿಗಳ ಜತೆ ಚರ್ಚೆ

ಪ್ರಧಾನ ಮಂತ್ರಿಗಳ ಭೇಟಿ ವಿಚಾರವಾಗಿ ಕೇಳಿದಾಗ, “ಬೆಂಗಳೂರು ಬಹಳ ಪ್ರಮುಖವಾದ ನಗರ. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಆದಾಯ ನೀಡುತ್ತಿರುವ ನಗರ. ವಿಶ್ವದ ನಾಯಕರು ಹಾಗೂ ವಿಶ್ವದ ಹೂಡಿಕೆದಾರರು ಬೆಂಗಳೂರಿನ ಮೇಲೆ ಆಸಕ್ತಿ ಹೊಂದಿದ್ದಾರೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಅನೇಕ ಮೂಲಭೂತ ಸೌಕರ್ಯ ಯೋಜನೆಗಳನ್ನು ನೀಡಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ವಿಮಾನ ನಿಲ್ದಾಣ ಮೇಲ್ಸೇತುವೆ, ನೆಲಮಂಗಲ ಮೇಲ್ಸೆತುವೆ ಯೋಜನೆಗಳನ್ನು ನೀಡಲಾಗಿತ್ತು. ಈಗ ಜನಸಂಖ್ಯೆ ಹೆಚ್ಚಾಗಿರುವ ಕಾರಣ ವರ್ತುಲ ರಸ್ತೆಗೆ ಮಿಲಿಟರಿ ಭೂಮಿ ಬೇಕಾಗಿದೆ. ಅದನ್ನು ದೊರಕಿಸಿಕೊಡುವಂತೆ ಮನವಿ ಮಾಡಿದ್ದೇವೆ. ಈ ವಿಚಾರವಾಗಿ ರಕ್ಷಣಾ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿದ್ದೇವೆ. ಸುರಂಗ ರಸ್ತೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಇದರ ಜತೆಗೆ ಈ ಹಿಂದೆ ಬಜೆಟ್ ನಲ್ಲಿ ಘೋಷಣೆಯಾಗಿರುವ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಮನವಿ ಪರಿಶೀಲಿಸುವುದಾಗಿ ಪ್ರಧಾನಿಯವರು ಭರವಸೆ ನೀಡಿದ್ದಾರೆ” ಎಂದರು.

Tags: BJPCongress PartyDKShivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹೆಮ್ಮಿಗೆ’ ಸೇತುವೆ ಕಂಪ್ಲೀಟ್ ಮುಳುಗಡೆ.. ವಾಹನ ಸಂಚಾರ ಸ್ಥಗಿತ..!

Next Post

ಸಾಲಬಾಧೆ ಇಂದ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ನಿಖಿಲ್

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post

ಸಾಲಬಾಧೆ ಇಂದ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ನಿಖಿಲ್

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada