• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮನಮೋಹನ್ ಸಿಂಗ್​ ಅವರನ್ನು ಭಾರತ ಹೇಗೆಲ್ಲಾ ನೆನಪಿಸಿಕೊಳ್ಳಬೇಕು..?

ಕೃಷ್ಣ ಮಣಿ by ಕೃಷ್ಣ ಮಣಿ
December 27, 2024
in Top Story, ಕರ್ನಾಟಕ, ರಾಜಕೀಯ
0
ಮನಮೋಹನ್ ಸಿಂಗ್​ ಅವರನ್ನು ಭಾರತ ಹೇಗೆಲ್ಲಾ ನೆನಪಿಸಿಕೊಳ್ಳಬೇಕು..?
Share on WhatsAppShare on FacebookShare on Telegram

ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್​, ರಾಜಕಾರಣಕ್ಕೆ ಬರುವ ಮೊದಲು ಅರ್ಥಶಾಸ್ತ್ರದ ಪ್ರೊಫೆಸರ್​ ಆಗಿದ್ದವರು. ರಾಜಕಾರಣಕ್ಕೆ ಬರುವ ಮುನ್ನವೇ ತಮ್ಮ ಛಾಪು ಒತ್ತಿದ್ದ ಮಹಾನ್​ ಮೇಧಾವಿ. ಭಾರತದ ಆರ್ಥಿಕತೆಯಲ್ಲಿ ಸಲಹೆ ಸೂಚನೆ ಕೊಡುತ್ತಿದ್ದರು. ಅದೇ ಕಾರಣಕ್ಕೆ ಮನಮೋಹನ್ ಸಿಂಗ್​ ಅವರನ್ನು ಆರ್​ಬಿಐ ಗೌರ್ನರ್​ ಆಗಿ ನೇಮಕ ಮಾಡಲಾಯ್ತು. ಅಲ್ಲಿಂದ ಮುಂದೆ ಭಾರತದ ಅರ್ಥಶಾಸ್ತ್ರಜ್ಞರಾಗಿ, ಆರ್ಥಿಕ ಸುಧಾರಕ ಕೆಲಸ ಮಾಡಿದರು. ಮೊದಲ ಬಾರಿಗೆ 1991ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಕೂಡಲೇ ಪಿವಿ ನರಸಿಂಹರಾವ್​ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು.

ADVERTISEMENT

ಆ ನಂತರ ವಾಜಪೇಯಿ ಸರ್ಕಾರದಲ್ಲಿ ಮನಮೋಹನ್ ಸಿಂಗ್​ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ನಿಬಾಯಿಸಿದ್ರು. ಆ ನಂತರ 2004ರಲ್ಲಿ ದೇಶದ 13ನೇ ಪ್ರಧಾನಮಂತ್ರಿಯಾಗಿ ಆಯ್ಕೆ ಆದ ಬಳಿಕ ಪ್ರಧಾನಿಯಾಗಿ ಸುದೀರ್ಘ 10 ವರ್ಷಗಳ ಸೇವೆ ಸಲ್ಲಿಸಿದ್ದಾರೆ. 2004-2014ರವರೆಗೆ ದೇಶದ ಪ್ರಧಾನಿಯಾಗಿದ್ದ ಸಿಂಗ್, ನೆಹರೂ ಬಳಿಕ ಪ್ರಧಾನಿಯಾಗಿ 2ನೇ ಬಾರಿ ಆಯ್ಕೆಯಾದ ಖ್ಯಾತಿ ಪಡೆದರು.

ಆಕ್ಸ್​ಫರ್ಡ್​ ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿರುವ ಮನಮೋಹನ್​ ಸಿಂಗ್​, 1966-69ರವರೆಗೆ ವಿಶ್ವಸಂಸ್ಥೆಯಲ್ಲೂ ಸೇವೆ ಸಲ್ಲಿಸಿದ್ದಾರೆ. 1970 ರಿಂದ 1980 ರಲ್ಲಿ ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ ಸಿಂಗ್​, 1972 ರಲ್ಲಿ ಭಾರತ ಸರ್ಕಾರ ಆರ್ಥಿಕ ಸಲಹೆಗಾರ, 1982-85ರ ಅವಧಿಯಲ್ಲಿ ಆರ್​​ಬಿಐ ಗವರ್ನರ್, 1985-87 ರಲ್ಲಿ ಯೋಜನಾ ಆಯೋಗದ ಅಧ್ಯಕ್ಷ, 1987-1990 ಸ್ವಿಟ್ಜರ್​ಲ್ಯಾಂಡ್​ನ ಸೌತ್​ ಕಮಿಷನ್​ನ ಸೆಕ್ರೆಟರಿ ಜನರಲ್​ ಆಗಿಯೂ ಸೇವೆ ಸಲ್ಲಿಸಿದ್ದಾರೆ.

Manmohan Singh Passes Away: ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅಂತಿಮ ದರ್ಶನ ಪಡೆದ ರಾಹುಲ್,ಪ್ರಿಯಾಂಕಾ..!

ಪಂಜಾಬ್​ ಮೂಲದ ಮನಮೋಹನ್​ ಸಿಂಗ್​, ರಾಜ್ಯಸಭೆಗೆ ಅಸ್ಸಾಂನಿಂದ ನಿರಂತರ ಆಯ್ಕೆ ಆಗುತ್ತಿದ್ದರು ಎನ್ನುವುದು ಮತ್ತೊಂದು ವಿಶೇಷ. 1991 ರಿಂದ 2024ರವರೆಗೂ ರಾಜ್ಯಸಭೆ ಸದಸ್ಯರಾಗಿದ್ದ ಸಿಂಗ್, 1991ರಲ್ಲಿ ಪಿ.ವಿ ನರಸಿಂಹರಾವ್ ಸಂಪುಟ ಸೇರ್ಪಡೆ ಆಗಿ, ಹಣಕಾಸು ಸಚಿವರಾಗಿ ಕೆಲಸ ಮಾಡಿದರು. ದೇಶದ ಹಣಕಾಸು ವ್ಯವಸ್ಥೆ ಸುಧಾರಣೆಗೆ ಹಲವು ಕ್ರಮಗಳನ್ನು ಕೈಗೊಂಡ ಮನಮೋಹನ್​ ಸಿಂಗ್​, ಅರ್ಥ ವ್ಯವಸ್ಥೆ ಸುಸ್ಥಿರವಾಗಲು ಹಲವು ಸುಧಾರಣಾ ಕ್ರಮಗಳನ್ನು ತೆಗೆದುಕೊಂಡರು. ಆರ್ಥಿಕ ದುಸ್ಥಿತಿಯನ್ನು ಸರಿದಾರಿಗೆ ತರಲು ಸಿಂಗ್​ ಸುಧಾರಣಾ ಕ್ರಮಗಳು ಕಾರಣಕರ್ತರಾದರು. ಭಾರತದ ಅರ್ಥ ವ್ಯವಸ್ಥೆ ಮೇಲೆತ್ತಿದ ಬಳಿಕ ಜಾಗತಿಕ ಮಟ್ಟದಲ್ಲಿ ಆರ್ಥಿಕ ಕ್ಷೇತ್ರದಲ್ಲೂ ಖ್ಯಾತಿ ಪಡೆದರು.

ವಿಶ್ವಮಟ್ಟದಲ್ಲಿ ಆರ್ಥಿಕ ತಜ್ಞರಾಗಿ ಬೆಳೆದ ಮನಮೋಹನ್​ ಸಿಂಗ್​, 1996ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸೋಲುಂಡು 1998ರಲ್ಲಿ ರಾಜ್ಯಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ನೇಮಕ ಆದರು. 2004ರಲ್ಲಿ ಪ್ರಧಾನಿಯಾದ ಮೊದಲ ಅವಧಿಯಲ್ಲೇ ಹಲವು ಸುಧಾರಣೆ ಕ್ರಮ ತೆಗೆದುಕೊಂಡ ಸಿಂಗ್​, ಗ್ರಾಮೀಣ ಆರೋಗ್ಯ ಮಿಶನ್​, ಆಧಾರ್ ಕಾರ್ಡ್​​, ನರೇಗಾ ಕೂಲಿಕಾಳು ಯೋಜನೆ, ಮಾಹಿತಿ ಹಕ್ಕು ಕಾಯ್ದೆ ಜಾರಿ ಮಾಡಿದರು. ಯುಪಿಎ-1 ಅವಧಿಯಲ್ಲಿ ಇಡೀ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಬಿದ್ದಾಗಲೂ ಭಾರತದ ಅರ್ಥ ವ್ಯವಸ್ಥೆ ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಂಡ ಖ್ಯಾತಿ ಮನಮೋಹನ್​ ಸಿಂಗ್​ ಅವರಿಗೆ ಸಲ್ಲುತ್ತದೆ.

2009ರಲ್ಲಿ ಯುಪಿಎ-2 ಅವಧಿಯಲ್ಲೂ ಪ್ರಧಾನಿಯಾಗಿ ಮನಮೋಹನ್​ ಸಿಂಗ್​ ಆಯ್ಕೆಯಾದರು. ಶಿಕ್ಷಣ ಹಕ್ಕು ಕಾಯ್ದೆ, ಸರ್ವ ಶಿಕ್ಷಣ ಅಭಿಯಾನ, ದೇಶಾದ್ಯಂತ 8 ಐಐಟಿಗಳ ಸ್ಥಾಪನೆ ಮಾಡುವ ಮೂಲಕ ಖ್ಯಾತಿ ಪಡೆದರು. ಆದರೆ ಸರ್ಕಾರದಲ್ಲಿ ಇತರೆ ಸಚಿವರು ನಡೆಸಿದ ಅಕ್ರಮಗಳಿಂದ ಅಪಖ್ಯಾತಿಗೂ ಗುರಿಯಾಗಿ ಅಧಿಕಾರ ಕಳೆದುಕೊಳ್ಳಬೇಕಾಯ್ತು. ಎಂದಿಗೂ ಯಾರೊಂದಿಗೂ ಹೆಚ್ಚು ಮಾತನಾಡದ ಮನಮೋಹನ್​ ಸಿಂಗ್​ ಆಡಳಿತದಲ್ಲಿ ಸೂಕ್ಷ್ಮ ಮತಿಗಳಾಗಿದ್ದರು. ಬುದ್ಧಿವಂತಿಕೆಯಿಂದ ಕೆಲಸ ಮಾಡುತ್ತಿದ್ದರು. ಆದರೆ ರಾಜಕಾರಣಿಯಾಗಿ ತಂತ್ರಗಾರಿಕೆ ಮಾಡುವುದು ಗೊತ್ತಿಲ್ಲದ ಕಾರಣಕ್ಕೆ ಎಂದೂ ಲೋಕಸಭೆಗೆ ಆಯ್ಕೆಯಾಗಲು ಸಾಧ್ಯವಾಗಲಿಲ್ಲ ಅನ್ನೋದು ಬೇಸರದ ಸಂಗತಿ.

Tags: dr manmohan singhformer pm manmohan singhformer pm manmohan singh diedformer prime minister manmohan singhManmohan Singhmanmohan singh breaking newsmanmohan singh deathmanmohan singh death newsmanmohan singh death news livemanmohan singh is no moremanmohan singh latest newsmanmohan singh newsmanmohan singh passes awaymanmohan singh passingmanmohan singh took his last breathremembering manmohan singhrip manmohan singh
Previous Post

ಬ್ಲಾಡರ್ ಇನ್ಫೆಕ್ಷನ್ ಆದಾಗ ಕಾಡುವ ಪ್ರಮುಖ ರೋಗಲಕ್ಷಣಗಳು ಇವುಗಳೆ.!

Next Post

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ದುರ್ಮರಣ ! 

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ದುರ್ಮರಣ ! 

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣ - ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ದುರ್ಮರಣ ! 

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada