• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಲಯವಾರು ಕೇಂದ್ರ ಸರ್ಕಾರ ಕೊಟ್ಟ ಅನುದಾನದ ಲೆಕ್ಕಚಾರ ಹೇಗಿದೆ..?

ಕೃಷ್ಣ ಮಣಿ by ಕೃಷ್ಣ ಮಣಿ
February 2, 2025
in ಕರ್ನಾಟಕ, ರಾಜಕೀಯ
0
ವಲಯವಾರು ಕೇಂದ್ರ ಸರ್ಕಾರ ಕೊಟ್ಟ ಅನುದಾನದ ಲೆಕ್ಕಚಾರ ಹೇಗಿದೆ..?
Share on WhatsAppShare on FacebookShare on Telegram

ರಕ್ಷಣಾ ಕ್ಷೇತ್ರಕ್ಕೆ ಬಜೆಟ್​​ನಲ್ಲಿ 6.81 ಲಕ್ಷ ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಇದು 6,21,940 ಕೋಟಿ ರೂಪಾಯಿ ಆಗಿತ್ತು. ಬಜೆಟ್‌ನಲ್ಲಿ ಒಟ್ಟು ರಕ್ಷಣಾ ಬಂಡವಾಳ ವೆಚ್ಚವನ್ನು 1.92 ಲಕ್ಷ ಕೋಟಿ ರೂಪಾಯಿಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ ಪಿಂಚಣಿಗಾಗಿ 1.61 ಲಕ್ಷ ಕೋಟಿ ರೂಪಾಯಿ, ರಾಜಸ್ವ ವೆಚ್ಚ 4.8 ಲಕ್ಷ ಕೋಟಿ ರೂಪಾಯಿ ಇದೆ. ಬಂಡವಾಳ ವೆಚ್ಚದ ಅಡಿಯಲ್ಲಿ ವಿಮಾನ ಮತ್ತು ಏರೋ ಇಂಜಿನ್‌ಗಳಿಗೆ 48,614 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ನೌಕಾಪಡೆಗೆ 24,390 ಕೋಟಿ ರೂಪಾಯಿ ತೆಗೆದಿಡಲಾಗಿದೆ. ಇತರೆ ಉಪಕರಣಗಳ ಖರೀದಿಗೆ 63,099 ಕೋಟಿ ರೂಪಾಯಿ ಘೋಷಿಸಲಾಗಿದೆ.

ADVERTISEMENT

ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮೊದಲ ಆದ್ಯತೆ ನೀಡಲಾಗಿದೆ.. ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿಯನ್ನು ಈಗಿರುವ 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. ಇದರೊಂದಿಗೆ ರೈತರಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸಲು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಘೋಷಿಸಲಾಗಿದೆ.. ಈ ಯೋಜಯಿಂದ 1.7 ಕೋಟಿ ರೈತರಿಗೆ ಅನುಕೂಲ ಆಗಲಿದೆ. ಹೆಚ್ಚಿನ ಇಳುವರಿಯ ಬೀಜಗಳಿಗಾಗಿ ರಾಷ್ಟ್ರೀಯ ಮಿಷನ್ ಆರಂಭ ಮಾಡಲು ನಿರ್ಧಾರ ಮಾಡಿದ್ದು, ಉತ್ಪಾದನೆ, ಮಾರಾಟ, ಮಾರುಕಟ್ಟೆ ಸೃಷ್ಟಿಗೆ ರಾಜ್ಯಗಳಲ್ಲಿ ಮಖಾನಾ ಬೋರ್ಡ್ ಸ್ಥಾಪನೆ ಮಾಡುವುದಾಗಿ ಕೇಂದ್ರ ವಿತ್ತ ಸಚಿವರು ಘೋಷಿಸಿದ್ದಾರೆ.

ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳ ಉತ್ತೇಜನಕ್ಕೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. MSMEಗೆ ನೀಡಲಾಗುತ್ತಿರುವ ಸಾಲದ ಮಿತಿಯನ್ನು 5 ಕೋಟಿ ರೂಪಾಯಿಯಿಂದ 10 ಕೋಟಿ ರೂಪಾಯಿಗಳವರೆಗೂ ಏರಿಸಲಾಗಿದೆ. ರಫ್ತುದಾರ MSME ಗಳಿಗೆ 20 ಕೋಟಿ ರೂಪಾಯಿಗಳವರೆಗೂ ದೀರ್ಘಾವಧಿ ಸಾಲಗಳು ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ ನೀಡಿದ್ದಾರೆ. ಚರ್ಮೋದ್ಯಮ, ಪಾದರಕ್ಷೆ ಉತ್ಪಾದನೆಗೆ ವಿಶೇಷ ಸವಲತ್ತು ನೀಡಲಾಗುತ್ತದೆ.. ಈ ಮೂಲಕ ಚರ್ಮೋದ್ಯಮದಲ್ಲಿ 22 ಲಕ್ಷ ಜನರಿಗೆ ಉದ್ಯೋಗ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.

Siddaramaiah: ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #UnionBudget2025 #modi

ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮಧ್ಯಮ, ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕಾ ವಲಯಕ್ಕೆ ಭರ್ಜರಿ ಕೊಡುಗೆ ಕೊಟ್ಟಿದೆ. ಮೊದಲ ಬಾರಿ ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ಸಮುದಾಯದವರು ಹಾಗೂ ಮಹಿಳೆಯರಿಗೆ 2 ಕೋಟಿ ರೂಪಾಯಿವರೆಗೂ ಸಾಲ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಉದ್ಯೋಗ ಸೃಷ್ಟಿಗೆ ಸಹಾಯ ಆಗುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಹಾಲುಣಿಸುವ ತಾಯಂದಿರಿಗೆ ಪೋಶಕಾಂಶಭರಿತ ಆಹಾರ ಒದಗಿಸುವ ಯೋಜನೆ ಈ ಬಾರಿಯ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ. ಇದರಿಂದ ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವ 1 ಕೋಟಿ ಬಾಣಂತಿಯರಿಗೆ ಅನುಕೂಲ ಆಗಲಿದೆ ಎನ್ನಲಾಗಿದೆ.

xr:d:DAF32zida6U:999,j:3801455488270840303,t:24020208

ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್‌ ತೆರೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬ್ರಾಡ್‌ಬ್ಯಾಂಡ್ ಅಳವಡಿಸುವುದಾಗಿಯೂ ಬಜೆಟ್​ನಲ್ಲಿ ಘೋಷಿಸಲಾಗಿದೆ.. ವೈದ್ಯಕೀಯ ವಲಯದ ಸಂಶೋಧನೆಗೆ 20 ಸಾವಿರ ಕೋಟಿ ಮೀಸಲಿಡಲಾಗಿದೆ.. 36 ಜೀವ ಉಳಿಸುವ ಔಷಧಿಗಳನ್ನು ಮೂಲಭೂತ ಕಸ್ಟಮ್ ಸುಂಕಗಳಿಂದ ಸಂಪೂರ್ಣವಾಗಿ ವಿನಾಯಿತಿ ನೀಡುವುದಾಗಿ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಪ್ರಮುಖವಾಗಿ ಕ್ಯಾನ್ಸರ್‌ ಮತ್ತು ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ದೊಡ್ಡಮಟ್ಟದ ಅನುಕೂಲವಾಗಲಿದೆ ಎನ್ನಲಾಗಿದೆ.

Tags: 2025 budgetbudgetbudget 2025budget 2025 datebudget 2025 expectationsbudget 2025 income taxbudget 2025 indiabudget 2025 livebudget 2025 newsbudget 2025 stocksbudget expectations 2025budget session 2025income tax budget 2025india budget 2025Union Budgetunion budget 2025union budget 2025 dateunion budget 2025 income taxunion budget 2025 indiaunion budget 2025 liveunion budget 2025 news
Previous Post

ನವೆಂಬರ್‌ಗೆ ರಾಜ್ಯ ಸರ್ಕಾರದಲ್ಲಿ ಮ್ಯೂಸಿಕಲ್‌ ಚೇರ್‌ ಆಟ ಶುರು..!

Next Post

“ರೋಹಿತ್ ಶರ್ಮಾ ಕುತೂಹಲಭರಿತ ಉತ್ತರ: ‘ಹೆಂಡತಿ ಎಚ್ಚರಿಕೆಯಿಂದ ನೋಡುತ್ತಾಳೆ…!'”

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
Next Post
“ರೋಹಿತ್ ಶರ್ಮಾ ಕುತೂಹಲಭರಿತ ಉತ್ತರ: ‘ಹೆಂಡತಿ ಎಚ್ಚರಿಕೆಯಿಂದ ನೋಡುತ್ತಾಳೆ…!'”

"ರೋಹಿತ್ ಶರ್ಮಾ ಕುತೂಹಲಭರಿತ ಉತ್ತರ: 'ಹೆಂಡತಿ ಎಚ್ಚರಿಕೆಯಿಂದ ನೋಡುತ್ತಾಳೆ…!'"

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada