• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕಾಂಗ್ರೆಸ್​​ನಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆ ಹೇಗಿದೆ..? ಡಿಸಿಎಂ ಗೊಂದಲ ಸರಿ ಆಯ್ತಾ..?

Krishna Mani by Krishna Mani
January 11, 2024
in ಅಂಕಣ, ರಾಜಕೀಯ
0
ಖಾತೆ ವಿತರಣೆ ಸೂಚನೆ, ವಿಶೇಷಚೇತನ ಯುವತಿಗೆ ಬಿಡಿಎ ಫ್ಲಾಟ್, ಬಿಬಿಎಂಪಿ ಕೆಲಸ, ಸಮಸ್ಯೆಗಳಿಗೆ ಸ್ಪಂದಿಸಿ ಜನಮನ ಗೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಕಾಂಗ್ರೆಸ್​(Congress)ನಲ್ಲಿ ಹೆಚ್ಚುವರಿ ಡಿಸಿಎಂ(DCM) ವಿಚಾರವಾಗಿ ಸಾಕಷ್ಟು ದಿನಗಳಿಂದ ಚರ್ಚೆ ನಡೆದಿತ್ತು. ಈ ಬೆಳವಣಿಗೆ ಡಿಸಿಎಂ ಡಿ.ಕೆ ಶಿವಕುಮಾರ್(DK Shivakumar)​ ಕಟ್ಟಿ ಹಾಕುವ ಉದ್ದೇಶದಿಂದಲೇ ನಡೆದಿದೆ ಅನ್ನೋ ಮಾತುಗಳು ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದ್ದವು. ಸಿದ್ದರಾಮಯ್ಯ ಬಣದ ನಾಯಕರೇ ಈ ವಿಚಾರವಾಗಿ ಮಾಧ್ಯಮಗಳ ಎದುರು ಬಹಿರಂಗವಾಗಿ ಮಾತನಾಡಿ ಪಕ್ಷಕ್ಕೆ ಇರಿಸು ಮುರಿಸು ಮಾಡಿದ್ದರು ಅನ್ನೋದು ಕೂಡ ಸತ್ಯ. ಇದೀಗ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಆಯ್ಕೆ ಮಾಡದೆ ಇರಲು ಕಾಂಗ್ರೆಸ್​ ಹೈಕಮಾಂಡ್​ ನಿರ್ಧಾರ ಮಾಡಿದೆ. ಡಿಸಿಎಂ ಸ್ಥಾನದ ಬಗ್ಗೆ ಶುರುವಾಗಿದ್ದ ಚರ್ಚೆಗೆ ಇತಿಶ್ರೀ ಹಾಡಲು ಕಾಂಗ್ರೆಸ್​ ಹೈಕಮಾಂಡ್​ ಯಶಸ್ವಿಯಾಗಿದೆ.

ADVERTISEMENT

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ಸಭೆ..!:
ಕಾಂಗ್ರೆಸ್​ನಲ್ಲಿ ಭಿನ್ನಮತ ಶುರುವಾಗುವ ಭೀತಿಯಲ್ಲಿದ್ದ ಹೈಕಮಾಂಡ್​ ನಾಯಕರು ರಣ್​ದೀಪ್​ ಸಿಂಗ್​​ ಸುರ್ಜೆವಾಲ ಅವರ ಮೂಲಕ ಸಭೆ ನಡೆಸಿದ್ದು ಇನ್ಮುಂದೆ ಡಿಸಿಎಂ ವಿಚಾರವಾಗಿ ಯಾರೊಬ್ಬರೂ ಮಾಧ್ಯಮಗಳ ಎದುರಲ್ಲಿ ಬಹಿರಂಗ ಹೇಳಿಕೆ ನೀಡದಂತೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು, ಕಾಂಗ್ರೆಸ್​​ನಲ್ಲಿನ ಗೊಂದಲ ಎದುರಾದರೆ ಎದುರಾಳಿ ಪಕ್ಷಗಳು ಸುಲಭವಾಗಿ ಗೆಲುವು ಸಾಧಿಸುತ್ತಾರೆ. ಅದಕ್ಕೆ ಅವಕಾಶ ಮಾಡಿಕೊಡುವುದು ಬೇಡ. ಯಾವುದೇ ಬಣಗಳು ಇದ್ದರೂ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿ, ಚುನಾವಣೆಯಲ್ಲಿ ಗೆಲುವು ಒಂದೇ ಮಾನದಂಡ. ನಿಮಗೆ ಸಿಗಬೇಕಿರುವ ಗೌರವ, ಅಧಿಕಾರ ಸಿಗುತ್ತದೆ. ಅದರ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸುರ್ಜೇವಾಲ ತಿಳಿಸಿದ್ದಾರೆ ಎನ್ನಲಾಗಿದೆ.

ಸರ್ಕಾರದಲ್ಲಿ ಪ್ರಮುಖವಾಗಿ ಸಚಿವರು ಮತ್ತು ಶಾಸಕರ ನಡುವೆ ಸಮನ್ವಯತೆ ಕಡಿಮೆ ಆಗಿದೆ ಅನ್ನೋ ಕಾರಣಕ್ಕೆ ಪ್ರಮುಖ ಸಚಿವರ ಜೊತೆಗೆ ಸಭೆ ನಡೆಸಿದ್ದು, ಸಮನ್ವಯತೆ ಮೂಡಿಸೋ ಬಗ್ಗೆ ಗಂಭೀರ ಚರ್ಚೆ ಮಾಡಲಾಗಿದೆ. ಆಪರೇಷನ್ ಹಸ್ತದಿಂದ ಪಕ್ಷಕ್ಕೆ ಲಾಭ ಆಗ್ತಿದ್ಯಾ..? ಅಥವಾ ಪಕ್ಷಕ್ಕೆ ಡ್ಯಾಮೇಜ್ ಆಗ್ತಿದ್ಯಾ..? ಅನ್ನೋ ಬಗ್ಗೆ ಚರ್ಚೆ ನಡೆಸಿದ್ದು, ಪ್ರತೀ ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳು ಯಾರ್ಯಾರಿದ್ದಾರೆ..? ಉಸ್ತುವಾರಿಗಳು ಸೂಚಿಸಿರೋ ಅಭ್ಯರ್ಥಿಗಳು ಅರ್ಹರ..? ಇಲ್ವಾ..? ಅನ್ನೋ ಬಗ್ಗೆಯೂ ಚರ್ಚೆಯಾಗಿದೆ. ಒಮ್ಮತದ ಅಭ್ಯರ್ಥಿ ಯಾರಾಗಬೇಕು..? ಆಯಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಅನುಕೂಲಕರ ವಾತಾವರಣ ಇದ್ಯಾ..? ಇಲ್ವಾ..? ಪ್ರಬಲ ಅಭ್ಯರ್ಥಿಗಳು ಇಲ್ಲದ ಕಡೆ ರಣತಂತ್ರ ಹೇಗಿರಬೇಕು..? ಅನಿವಾರ್ಯತೆ ಎದುರಾದರೆ ಯಾವೆಲ್ಲಾ ಸಚಿವರನ್ನ ಚುನಾವಣಾ ಕಣಕ್ಕಿಳಿಸಬೇಕು..? ನಿಗಮ ಮಂಡಳಿ ನೇಮಕ ಹಾಗೂ ಅಸಮಧಾನಿತರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳೋದು ಹೇಗೆ..? ಅನ್ನೋ ಬಗ್ಗೆಯೂ ಸಲಹೆ ಸೂಚನೆ ನೀಡಲಾಗಿದೆ.

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಎಲ್ಲೆಲ್ಲಿ ಪ್ಲಸ್.. ಎಲ್ಲೆಲ್ಲಿ ಮೈನಸ್ ಆಗುತ್ತೆ. ಗ್ಯಾರಂಟಿಗಳನ್ನ ಮನೆಮನೆಗೆ ತಲುಪಿಸಲು ಕಾರ್ಯತಂತ್ರ ಹೇಗಿರಬೇಕು..? ಎಲ್ಲೆಲ್ಲಿ ಜಾತಿವಾರು ಸಮಾವೇಶ, ಗ್ಯಾರಂಟಿ ಸಮಾವೇಶಗಳನ್ನ ಆಯೋಜಿಸಬೇಕು.. ಸ್ಥಳೀಯ ಮುಖಂಡರಲ್ಲಿರೋ ಅಸಮಧಾನ ಶಮನ ಮಾಡೋದು ಹೇಗೆ..? ಮಿಶನ್ 20 ಸಕ್ಸಸ್ ಗೊಳಿಸಲು ಒಗ್ಗಟ್ಟಿನ ಹೋರಾಟ ರೂಪಿಸೋಲು ನಾಯಕರು ಸಲಹೆ ನೀಡಿದ್ದಾರೆ. ಸಭೆ ಬಳಿಕ ಮಾತನಾಡಿರುವ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ, ಹೆಚ್ಚುವರಿ‌ ಡಿಸಿಎಂ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗಿಲ್ಲ. ಇವೆಲ್ಲಾ ಸಿನಿಮೀಯ ರೀತಿಯ ಮಾತುಕತೆಗಳು. ಜನ ನಮಗೆ ಅಧಿಕಾರ ಕೊಟ್ಟಿದ್ದಾರೆ, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಜೊತೆಗೆ ಇಂದಿನ ಕಾಂಗ್ರೆಸ್​ ರಣತಂತ್ರ ಸಭೆಯಲ್ಲಿ ಭಾಗಿಯಾಗಿದ್ದ ಸಚಿವರೂ ಕೂಡ ಯಾರೊಬ್ಬರೂ ಡಿಸಿಎಂ ಸ್ಥಾನದ ಬಗ್ಗೆ ಮಾತನಾಡಿಲ್ಲ ಅನ್ನೋದು ವಿಶೇಷ. ಒಟ್ಟಾರೆ ಗೊಂದಲ ಸರಿಮಾಡಿರುವ ಕಾಂಗ್ರೆಸ್​ ಹೈಕಮಾಂಡ್​ ಒಗ್ಗಟ್ಟಿ ಮಂತ್ರ ಜಪಿಸಿದೆ ಎನ್ನಬಹುದು.

ಕೃಷ್ಣಮಣಿ

Previous Post

ಹೈ ರಿಸ್ಕ್ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

ಅಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್‌ ನಿರ್ಧಾರ ಸರೀನಾ..? ಎಡವಿದ್ದೆಲ್ಲಿ ಕಾಂಗ್ರೆಸ್‌..?

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಅಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್‌ ನಿರ್ಧಾರ ಸರೀನಾ..? ಎಡವಿದ್ದೆಲ್ಲಿ ಕಾಂಗ್ರೆಸ್‌..?

ಅಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್‌ ನಿರ್ಧಾರ ಸರೀನಾ..? ಎಡವಿದ್ದೆಲ್ಲಿ ಕಾಂಗ್ರೆಸ್‌..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada