• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಲೋಕಸಭಾ ಸಮೀಕ್ಷೆ ಲೆಕ್ಕಾಚಾರ ಎಷ್ಟು ಸತ್ಯ..? ಎಷ್ಟು ನಿಖರ..?

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ರಾಜಕೀಯ
0
ಅವಕಾಶವಾದಿ ವಿಪಕ್ಷಗಳಿಗೆ ಮತದಾರ ಸರಿಯಾದ ಪಾಠ ಕಲಿಸಲಿದ್ದಾರೆ; ಪ್ರಧಾನಿ ಮೋದಿ
Share on WhatsAppShare on FacebookShare on Telegram

ದೇಶದಲ್ಲಿ ಲೋಕಸಭಾ ಚುನಾವಣೆ ಅಂತ್ಯವಾಗಿದೆ. ಚುನಾವಣೆ ಮುಗಿಯುತ್ತಿದ್ದಂತೆ ಮತದಾನೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಹೊರಬಿದ್ದಿದೆ. ಎಲ್ಲಾ ಸಮೀಕ್ಷೆಗಳಲ್ಲೂ ಹೆಚ್ಚು ಕಡಿಮೆ ಒಂದೇ ರೀತಿಯ ಮಾಹಿತಿ ಹೊರ ಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಸತತ ಮೂರನೇ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ ಎನ್ನುತ್ತಿದೆ ಸರ್ವೇ ಮಾಹಿತಿ. ಆದರೆ ಚುನಾವಣೆ ಆರಂಭ ಆದ ಬಳಿಕ ಜನರ ಚಿತ್ತ ಕಾಂಗ್ರೆಸ್​​ ಕಡೆಗೆ ವಾಲಿದ್ದು, ಕೇಸರಿ ಬದಲು ಕಾಂಗ್ರೆಸ್​​ ಕಡೆಗೆ ಒಲವು ಹೆಚ್ಚಾಗಿದೆ ಅನ್ನೋ ಮಾಹಿತಿ ಇತ್ತು. ಆದರೆ ಇದೀಗ ಕಾಂಗ್ರೆಸ್​ ಕೊಂಚ ಸುಧಾರಿಸಿದ್ದು, ಬಿಜೆಪಿಗೆ ಠಕ್ಕರ್​ ಕೊಡುವಷ್ಟು ಶಕ್ತಿ ಬಂದಿಲ್ಲ ಎನ್ನಲಾಗ್ತಿದೆ.

ADVERTISEMENT

ದೆಹಲಿಯಲ್ಲಿ 7ನೇ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ INDIA Bloc ಸಭೆ ನಡೆಸಿದ್ದು, ಕಾಂಗ್ರೆಸ್​​ ನೇತೃತ್ವದ ಸಭೆಯಲ್ಲಿ ಅರವಿಂದ ಕೇಜ್ರಿವಾಲ್​ ಸೇರಿದಂತೆ ಬಹುತೇಕ ಘಟಾನುಘಟಿ ನಾಯಕರು ಭಾಗಿಯಾಗಿ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಸೋನಿಯಾ ಗಾಂಧಿ, ವೇಣುಗೋಪಾಲ್​ ಸೇರಿದಂತೆ ಸಾಕಷ್ಟು ನಾಯಕರು ಭಾಗಿಯಾಗಿ ಕಾಂಗ್ರೆಸ್​ ನೇತೃತ್ವದ ಇಂಡಿಯಾ ಒಕ್ಕೂಟ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಸಭೆ ಬಳಿಕ ಮಾತನಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂಡಿಯಾ ಒಕ್ಕೂಟ ಕನಿಷ್ಟ ಪಕ್ಷ 295 ಸ್ಥಾನಗಳನ್ನು ಗೆಲ್ಲಲಿದೆ ಎಂದಿದ್ದರು.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಕೂಡ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ನಾವು ಡಬಲ್​ ಡಿಜಿಟ್​ ದಾಟುತ್ತೇವೆ ಎಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್​ 20 ಸ್ಥಾನಗಳಲ್ಲಿ ಗೆಲುವು ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​ ಸೇರಿದಂತೆ ಬಹುತೇಕ ಎಲ್ಲಾ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಸಮೀಕ್ಷೆಯಲ್ಲಿ ಅತಿ ಹೆಚ್ಚು ಎಂದರೆ 4-8 ಸ್ಥಾನಗಳಿಗೆ ಕಾಂಗ್ರೆಸ್​ ಗೆಲುವಿನ ಓಟ ಸ್ಥಗಿತ ಆಗಿದೆ. ಬಿಜೆಪಿ ಜೆಡಿಎಸ್​ ಮೈತ್ರಿಕೂಟ ​​ 22-24 ಸ್ಥಾನಗಳನ್ನು ನೀಡಲಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರವೇ ಇದ್ದರೂ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಅಚ್ಚುಕಟ್ಟಾಗಿ ಕೊಟ್ಟರೂ ಮತದಾರರು ಕೈ ಹಿಡಿದಿಲ್ಲ ಎನ್ನುವಂತಾಗಿದೆ.

ಸಮೀಕ್ಷೆಗಳು ಸುಳ್ಳು ಎಂದು ಹೇಳಲಾಗುವುದಿಲ್ಲ. ಒಮ್ಮೊಮ್ಮೆ ಸಂಪೂರ್ಣ ಸತ್ಯ ಎಂದೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಯಾಕೆಂದರೆ ಲಕ್ಷಾಂತರ ಜನರ ನಡುವೆ ಸಮೀಕ್ಷೆ ನಡೆಸುವ ಸಂಸ್ಥೆಗಳು ಕೆಲವೇ ಸಾವಿರ ಜನರನ್ನು ಸಂದರ್ಶನ ಮಾಡುತ್ತಾರೆ. ಪ್ರದೇಶ ಹಾಗು ಆರ್ಥಿಕತೆ ಆಧಾರದಲ್ಲಿ ಜನರನ್ನು ವಿಂಗಡಣೆ ಮಾಡಿ ಜನರಿಂದಲೇ ಅಭಿಪ್ರಾಯ ಸಂಗ್ರಹ ಮಾಡಿರುತ್ತಾರೆ, ಹೀಗಿರುವಾಗ ಸಮೀಕ್ಷೆಗಳಲ್ಲಿ ಕೆಲವೇ ಸಾವಿರ ಜನರು ಭಾಗಿಯಾದರೂ ಅಭಿಪ್ರಾಯ ಅದೇ ರೀತಿಯಲ್ಲಿ ಹೊರ ಬೀಳುತ್ತದೆ. ಸಮೀಕ್ಷೆ ನಡೆಸುವಾಗ ಜನರೇ ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿದ್ದರೆ ಮಾತ್ರ ಸಮೀಕ್ಷೆ ಉಲ್ಟಾ ಆಗುತ್ತದೆ. ಆ ರೀತಿ ಆಗಿರುವ ಸಾಕಷ್ಟು ಉದಾಹರಣೆಗಳೂ ಇವೆ. ಆದರೆ ಈ ಬಾರಿ ಎಲ್ಲಾ ಸಮೀಕ್ಷೆಗಳು ಒಂದೇ ರೀತಿ ಹೊರಬಿದ್ದಿರುವುದು ಸುಳ್ಳಾಗುತ್ತೆ ಅನ್ನೋದು ಅನುಮಾನ.

ಕೃಷ್ಣಮಣಿ

Tags: BJPcongressElectionExitPollModi
Previous Post

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ!

Next Post

ಟಿ20 ವಿಶ್ವಕಪ್: ಐತಿಹಾಸಿಕ ಜಯ ಸಾಧಿಸಿದ ಅಮೆರಿಕ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:
ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

by ಪ್ರತಿಧ್ವನಿ
December 30, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:    ...

Read moreDetails
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

December 29, 2025
Next Post
ಟಿ20 ವಿಶ್ವಕಪ್: ಐತಿಹಾಸಿಕ ಜಯ ಸಾಧಿಸಿದ ಅಮೆರಿಕ

ಟಿ20 ವಿಶ್ವಕಪ್: ಐತಿಹಾಸಿಕ ಜಯ ಸಾಧಿಸಿದ ಅಮೆರಿಕ

Please login to join discussion

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!
Top Story

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

by ಪ್ರತಿಧ್ವನಿ
December 31, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

December 31, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada