• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಖಜಾನೆ ಖಾಲಿ ಮಾಡಿರೋದೆ ದರಿದ್ರ ಕಾಂಗ್ರೆಸ್ ಸರ್ಕಾರದ ಸಾಧನೆ : ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in ಇದೀಗ, ಕರ್ನಾಟಕ, ರಾಜಕೀಯ
0
ಖಜಾನೆ ಖಾಲಿ ಮಾಡಿರೋದೆ ದರಿದ್ರ ಕಾಂಗ್ರೆಸ್ ಸರ್ಕಾರದ ಸಾಧನೆ : ಮಾಜಿ ಸಿಎಂ ಬೊಮ್ಮಾಯಿ ಕಿಡಿ
Share on WhatsAppShare on FacebookShare on Telegram

ಖಜಾನೆ ಖಾಲಿ ಮಾಡಿರುವ ರಾಜ್ಯದ ದರಿದ್ರ ಕಾಂಗ್ರೆಸ್‌ ಸರ್ಕಾರ :ಬಸವರಾಜ ಬೊಮ್ಮಾಯಿ

ADVERTISEMENT

ಗದಗ: ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿ ಆಗಿದೆ. ಒಂದು ನಯಾ ಪೈಸೆ ಈ ಸರ್ಕಾರ ಅಭಿವೃದ್ಧಿ ಮಾಡಿಲ್ಲ. ಇದೊಂದು ದರಿದ್ರ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ಗದಗ ವಿಧಾನಸಭಾ ಕ್ಷೇತ್ರದ ಕುರ್ತಕೋಟಿ, ಹರ್ತಿ, ಕಣವಿ, ಹೊಸೂರು ಹಾಗೂ ಸೊರಟೂರು ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಗ್ರಾಮಪಂಚಾಯಿತಿಗೆ ರಸ್ತೆ, ದ್ವೀಪ ಹಾಕಿಸಿಕೊಡದಂತಹ ದುಃಸ್ಥಿತಿ ಈ ಸರ್ಕಾರದ್ದಾಗಿದೆ ಎಂದು ನಾವು ಹೇಳುತ್ತಿಲ್ಲ. ಕಾಂಗ್ರೆಸಿನ ಶಾಸಕರೇ ಹೇಳುತ್ತಿದ್ದಾರೆ. ಬರಗಾಲ ಬಂದಿದೆ. ಒಂದು ಬೆಳೆಯೂ ಬಂದಿಲ್ಲ. ರೈತರಿಗೆ ಬರ ಪರಿಹಾರ ನೀಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇದೊಂದು ದರಿದ್ರ ಸರ್ಕಾರ.ಇಂತಹ ದರಿದ್ರ ಸರ್ಕಾರವನ್ನು ಹಿಂದೆಂದೂ ನಾನು ನೋಡಿಲ್ಲ ಎಂದರು.
ಈ ದೇಶದ ಚುನಾವಣೆ ನಡೆಯುವಂತಹ ಸಂದರ್ಭದಲ್ಲಿ ಯಾರು ಆಡಳಿತ ಪಕ್ಷದ ಚುಕ್ಕಾಣಿ ಹಿಡಿಯುತ್ತಾರೆ ಎನ್ನುವುದು ಮುಖ್ಯ. ಇದು ರಾಜ್ಯದ ಅಲ್ಲ. ಚುನಾವಣೆ ದೇಶದ ಚುನಾವಣೆಯಾಗಿದೆ. ಈ ಚುನಾವಣೆ ಫಲಿತಾಂಶ ರಾಜ್ಯ ಮೇಲೂ ಆಗುತ್ತದೆ. ದೇಶ ಸುಭದ್ರವಾಗಿದ್ದರೆ, ರಾಜ್ಯ ಸುಭದ್ರವಾಗಿರುತ್ತದೆ. ರಾಜ್ಯ ಸುಭದ್ರವಾಗಿದ್ದರೆ ನಮ್ಮ ಹಳ್ಳಿ ಸುಭದ್ರವಾಗಿರುತ್ತವೆ. ಇಡೀ ದೇಶದಲ್ಲಿ ವಿಶ್ವದಲ್ಲಿ ಪ್ರಖ್ಯಾತ ಆಗಿರುವಂತಹ ನಾಯಕರು ಅಂದರೆ, ಅದು ನರೇಂದ್ರ ಮೋದಿಯವರು. ಭಯೋತ್ಪಾದನೆ ಮುಕ್ತ ಭಾರತವನ್ನು ಮೋದಿ ಮಾಡಿದ್ದಾರೆ ಎಂದರು.
ರಾಹುಲ್‌ ಗಾಂಧಿ ನಮ್ಮ ಪ್ರಧಾನಮಂತ್ರಿ ಅಭ್ಯರ್ಥಿ ಎಂದು, ಕೆಲವರು ಹೇಳಿದರೆ, ಇನ್ನು ಕೆಲವರು ಮಲ್ಲಿಕಾರ್ಜುನ ಖರ್ಗೆ ಎನ್ನುತ್ತಾರೆ. ಇವರಿಗೆ ಸರಿಯಾದ ಅಭ್ಯರ್ಥಿ ಯಾರಾಗಬೇಕೆಂಬ ನಿರ್ಣಯವೇ ಕಾಂಗ್ರೆಸಿನಲ್ಲಿ ಇಲ್ಲ. ಗ್ಯಾರೆಂಟಿಗಳೆಲ್ಲಾ ನಶಿಸಿಹೋಗಿವೆ. ಗ್ಯಾರಂಟಿಗಾಗಿ ಅಲೆದು ಅಲೆದು ಜನ ಸಾಕಾಗಿದ್ದಾರೆ. ಗ್ಯಾರೆಂಟಿಗೆ ಅಲೆದು ಗೃಹಲಕ್ಷ್ಮೀಯರ ಚಪ್ಪಲಿ ಸವೆಯುತ್ತಿವೆ. ಬರಗೆಟ್ಟ ಗ್ಯಾರೆಂಟಿ ಇದು. ಸಿಎಂ ಸಿದ್ದರಾಮಯ್ಯ ಹತ್ತು ಕೆ.ಜಿ ಅಕ್ಕಿ ಕೊಡುತ್ತೇನೆ ಎಂದಿದ್ದರು ಒಂದು ಕಾಳು ಅಕ್ಕಿಕೂಡ ಕೊಡಲು ಸಾಧ್ಯವಾಗಲಿಲ್ಲ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿಯೂ ಕೇಂದ್ರದ ನರೇಂದ್ರ ಮೋದಿಯವರು ಕೊಡುತ್ತಿದ್ದಾರೆ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿಯ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ರಾಜಕೀಯ ಬಿಟ್ಟುಬಿಡ್ತೀನಿ : CM ಸಿದ್ದರಾಮಯ್ಯ ಸವಾಲ್

Next Post

ನಿರ್ಣಾಯಕ ಹಂತದಲ್ಲಿ ದುಡಿಯುವ ವರ್ಗಗಳ ಪಾತ್ರ

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ನಿರ್ಣಾಯಕ ಹಂತದಲ್ಲಿ ದುಡಿಯುವ ವರ್ಗಗಳ ಪಾತ್ರ

ನಿರ್ಣಾಯಕ ಹಂತದಲ್ಲಿ ದುಡಿಯುವ ವರ್ಗಗಳ ಪಾತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada