![](https://pratidhvani.com/wp-content/uploads/2024/04/1000005147-1024x683.jpg)
ಹಾವೇರಿ: ಕಾಂಗ್ರೆಸ್ ನವರು ಗ್ಯಾರೆಂಟಿ ಕಾರ್ಡ್ ಕೊಡಲು ಬಂದರೆ ತಿರಸ್ಕರಿಸುವಂತೆ ಅಂತ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಚೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಹಾಗೂ ಯುವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ನವರು ಮತ್ತೆ ಗ್ಯಾರೆಂಟಿ ಕಾರ್ಡ್ ಹಂಚಲು ಶುರು ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಯುವಕರಿಗೆ ಒಂದು ಲಕ್ಷ ಕೊಡುತ್ತೇವೆ ಅಂತ ಹೇಳಿದ್ದಾರೆ. 543 ಕ್ಚೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿರುವುದೇ 200 ಕ್ಷೆತ್ರಗಳಲ್ಲಿ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನ ಬೇಕು. 200 ಸ್ಥಾನದಲ್ಲಿ ಸ್ಪರ್ಧಿಸಿರುವ ಇವರು ಅಧಿಕಾರಕ್ಕೆ ಬರಲು ಸಾದ್ಯವೇ ಇಲ್ಲ. ಗ್ಯಾರೆಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಈಗ ಕೊಡುತ್ತಿರುವ ಗ್ಯಾರೆಂಟಿನೇ ಗಳಗಂಟಿಯಾಗಿದ್ದಾವೆ. ಗೃಹಲಕ್ಷ್ಮಿ ಯೋಜನೆ ಎಷ್ಟು ಜರಿಗೆ ತಲುಪಿದೆ. ಬೆಂಗಳೂರು ಬಿಟ್ಟಿದೆ. ಊರುಗಳಿಗೆ ಬಂದಿಲ್ಲ. ಕೇವಲ ಪ್ರಗತಿಯಲ್ಲಿದೆ ಅಂತ ಹೇಳುತ್ತಾರೆ. ಬಹುತೇಕರಿಗೆ ಗ್ಯಾರೆಂಟಿ ತಲುಪುತ್ತಿಲ್ಲ ಎಂದು ಹೇಳಿದರು.
![](https://pratidhvani.com/wp-content/uploads/2024/04/1000005146-1024x683.jpg)