ನಾನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಿದ್ದೇನೆ.ಇವತ್ತಿನ ಚುನಾವಣಾ ವ್ಯವಸ್ಥೆ ಬಹಳ ಹದಗೆಟ್ಟು ಹೋಗಿದೆ.ಹಣವಂತರಿಗೆ ಮಾತ್ರ ಈ ಚುನಾವಣೆ, ಬೇರೆಯವರಿಗೆ ಚುನಾವಣೆ ಅನ್ನೋದು ಬರೀ ಕನಸು ಅಂತ ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವ್ರು,ಕರ್ನಾಟಕದಲ್ಲಿ ರಾಜಕೀಯ ನಾಯಕರು ಎಲ್ಲ ಸೀಟುಗಳನ್ನು ಅವರವರ ಮಕ್ಕಳಿಗೆ, ಸಂಬಂಧಿಕರಿಗೆ ಹಂಚಿಕೊಂಡಿದ್ದಾರೆ.
ಅಪ್ಪ ಕಿಂಗ್ ಮೇಕರ್, ಒಬ್ಬ ಮಗ ಅಧ್ಯಕ್ಷ, ಇನ್ನೊಬ್ಬ ಮಗ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ರು.ಮತ್ತೊಬ್ಬ ಅಪ್ಪ ಎಂಎಲ್ಎ, ಮಗ ಮಂತ್ರಿ, ಸೊಸೆ ಲೋಕಸಭೆಗೆ ಅಭ್ಯರ್ಥಿ ಎಂದು ಪರೋಕ್ಷವಾಗಿ ಶ್ಯಾಮನೂರು ಶಿವಶಂಕರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ರು.
ರಾಜ್ಯದಲ್ಲಿ ಹೊಲಸು, ಕೆಟ್ಟ ರಾಜಕಾರಣ ನಡೀತಾ ಇದೆ.
ಇದರ ವಿರುದ್ಧ ನಾನು ಪ್ರಾಮಾಣಿಕವಾಗಿ ಚುನಾವಣೆ ಎದುರಿಸಲು ನಿಂತಿದ್ದೇನೆ. ಯಾವುದೇ ಹಣ, ಜಾತಿ ಬೆಂಬಲ ಇಲ್ಲದೇ, ದಬ್ಬಾಳಿಕೆ ಇಲ್ಲದೇ, ಗೂಂಡಾಗಿರಿ ಮಾಡದೆ ಮತ ಕೇಳಲು ಸ್ಪರ್ಧೆ ಮಾಡಿದ್ದೇನೆ.
ಪ್ರಾಮಾಣಿಕರು ನನಗೆ ಮತ ಹಾಕುವ ವಿಶ್ವಾಸ ಇದೆ.ನಾನು ಚುನಾವಣೆಗೆ ಸ್ಪರ್ಧೆ ಮಾಡಿರುವುದು ಕನ್ನಡಕ್ಕಾಗಿ, ಕನ್ನಡದ ಉಳಿವಿಗಾಗಿ ಇವತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಕಡಿಮೆಯಾಗುತ್ತಿದೆ ಎಂದು
ಮೈಸೂರಿನಲ್ಲಿ ಮಾಜಿ ಶಾಸಕ ವಾಟಾಳ್ ನಾಗರಾಜು ಹೇಳಿಕೆ ಕೊಟ್ಟರು.